<p><strong>ಬೆಂಗಳೂರು:</strong> ಬೆಂಗಳೂರು-ಬೆಳಗಾವಿ ನಡುವಣ ಅತ್ಯಂತ ವೇಗದ ವಂದೇ ಭಾರತ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಇಂದು (ಭಾನುವಾರ) ಚಾಲನೆ ನೀಡಿದ್ದಾರೆ. </p><p>ಇದರೊಂದಿಗೆ ಈ ಮಾರ್ಗದಲ್ಲಿ ಪ್ರಯಾಣದ ಅವಧಿ 80 ನಿಮಿಷಗಳಷ್ಟು ಉಳಿತಾಯ ಆಗಲಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ. </p><p>ಈ ರೈಲಿನ ವಾಣಿಜ್ಯ ಸಂಚಾರ ಸೋಮವಾರದಿಂದ ಆರಂಭವಾಗಲಿದೆ. ಬುಧವಾರ ಹೊರತುಪಡಿಸಿ ವಾರದ ಆರು ದಿನಗಳಲ್ಲಿ ಸಂಚಾರ ಇರಲಿದೆ ಎಂದು ನೈಋತ್ಯ ರೈಲ್ವೆ ವಲಯದ (ಎಸ್ಡಬ್ಲ್ಯುಆರ್) ಪ್ರಕಟಣೆ ತಿಳಿಸಿದೆ. </p><p>530 ಆಸನ ಸಾಮರ್ಥ್ಯದ ಎಂಟು ಬೋಗಿಗಳ ಆಸನ ವ್ಯವಸ್ಥೆಯನ್ನು ಇದು ಹೊಂದಿದೆ. </p><p>ಕೆಆಸ್ಆರ್ ಬೆಂಗಳೂರು-ಬೆಳಗಾವಿ ನಡುವಣ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು 611 ಕಿ.ಮೀ. ದೂರವನ್ನು ಕೇವಲ 8.5 ಗಂಟೆಗಳಲ್ಲಿ ಕ್ರಮಿಸಲಿದೆ. ಆ ಮೂಲಕ ಈ ಮಾರ್ಗದಲ್ಲಿ ಸಂಚರಿಸುವ ಅತಿ ವೇಗದ ರೈಲು ಎನಿಸಿಕೊಳ್ಳಲಿದ್ದು, ಇತರೆ ರೈಲುಗಳಿಗೆ ಹೋಲಿಸಿದರೆ ಸುಮಾರು 1 ಗಂಟೆ 20 ನಿಮಿಷ ಉಳಿತಾಯವಾಗಲಿದೆ ಎಂದು ತಿಳಿಸಿದೆ. </p><p>ಶಿಕ್ಷಣ ಸಂಸ್ಥೆಗಳಿಗೆ ಹೆಸರುವಾಸಿಯಾದ ಧಾರವಾಡ, ವಾಣಿಜ್ಯ-ಕೈಗಾರಿಕಾ ಕೇಂದ್ರವಾದ ಹುಬ್ಬಳ್ಳಿ, ಬೆಳೆಯುತ್ತಿರುವ ಕೃಷಿ ಕೇಂದ್ರವಾದ ಹಾವೇರಿ, ಜವಳಿ-ಕೃಷಿಗೆ ಹೆಸರುವಾಸಿಯಾದ ದಾವಣಗೆರೆ ಮತ್ತು ಕೈಗಾರಿಕಾ-ಶೈಕ್ಷಣಿಕ ಕೇಂದ್ರವಾದ ತುಮಕೂರು ಮೂಲಕ ರೈಲು ಸಂಚರಿಸಲಿದೆ. </p><p>ಅತ್ಯಾಧುನಿಕ ವ್ಯವಸ್ಥೆಯು ಸುರಕ್ಷಿತ ಪ್ರಯಾಣವನ್ನು ಖಾತ್ರಿಪಡಿಸುತ್ತದೆ. ವಿದ್ಯಾರ್ಥಿಗಳು, ವೃತ್ತಿಪರರು, ರೈತರು ಮತ್ತು ವ್ಯಾಪಾರಿಗಳಿಗೆ ಇದರಿಂದ ನೆರವಾಗಲಿದೆ. </p><p>ರಾಜ್ಯದ 11ನೇ ವಂದೇ ಭಾರತ್ ರೈಲು ಇದಾಗಿದೆ. ಹಾಗೆಯೇ ದೇಶದಲ್ಲಿ 75 ವಂದೇ ಭಾರತ್ ರೈಲುಗಳು 24 ರಾಜ್ಯಗಳಲ್ಲಿ ದೈನಂದಿನ 150 ಸಂಚಾರ ನಡೆಸುತ್ತಿದೆ ಎಂದು ರೈಲೈ ಸಚಿವಾಲಯ ತಿಳಿಸಿದೆ. </p>.ಆಪರೇಷನ್ ಸಿಂಧೂರ ಯಶಸ್ಸಿನಲ್ಲಿ 'ಭಾರತೀಯ ತಂತ್ರಜ್ಞಾನ','ಮೇಕ್ ಇನ್ ಇಂಡಿಯಾ': ಮೋದಿ.ದೇಶದ ಮಾಹಿತಿ ತಂತ್ರಜ್ಞಾನ, ರಕ್ಷಣಾ ಕ್ಷೇತ್ರಕ್ಕೆ ಬೆಂಗಳೂರಿನ ಕೊಡುಗೆ ಅಪಾರ: ಮೋದಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಬೆಂಗಳೂರು-ಬೆಳಗಾವಿ ನಡುವಣ ಅತ್ಯಂತ ವೇಗದ ವಂದೇ ಭಾರತ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಇಂದು (ಭಾನುವಾರ) ಚಾಲನೆ ನೀಡಿದ್ದಾರೆ. </p><p>ಇದರೊಂದಿಗೆ ಈ ಮಾರ್ಗದಲ್ಲಿ ಪ್ರಯಾಣದ ಅವಧಿ 80 ನಿಮಿಷಗಳಷ್ಟು ಉಳಿತಾಯ ಆಗಲಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ. </p><p>ಈ ರೈಲಿನ ವಾಣಿಜ್ಯ ಸಂಚಾರ ಸೋಮವಾರದಿಂದ ಆರಂಭವಾಗಲಿದೆ. ಬುಧವಾರ ಹೊರತುಪಡಿಸಿ ವಾರದ ಆರು ದಿನಗಳಲ್ಲಿ ಸಂಚಾರ ಇರಲಿದೆ ಎಂದು ನೈಋತ್ಯ ರೈಲ್ವೆ ವಲಯದ (ಎಸ್ಡಬ್ಲ್ಯುಆರ್) ಪ್ರಕಟಣೆ ತಿಳಿಸಿದೆ. </p><p>530 ಆಸನ ಸಾಮರ್ಥ್ಯದ ಎಂಟು ಬೋಗಿಗಳ ಆಸನ ವ್ಯವಸ್ಥೆಯನ್ನು ಇದು ಹೊಂದಿದೆ. </p><p>ಕೆಆಸ್ಆರ್ ಬೆಂಗಳೂರು-ಬೆಳಗಾವಿ ನಡುವಣ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು 611 ಕಿ.ಮೀ. ದೂರವನ್ನು ಕೇವಲ 8.5 ಗಂಟೆಗಳಲ್ಲಿ ಕ್ರಮಿಸಲಿದೆ. ಆ ಮೂಲಕ ಈ ಮಾರ್ಗದಲ್ಲಿ ಸಂಚರಿಸುವ ಅತಿ ವೇಗದ ರೈಲು ಎನಿಸಿಕೊಳ್ಳಲಿದ್ದು, ಇತರೆ ರೈಲುಗಳಿಗೆ ಹೋಲಿಸಿದರೆ ಸುಮಾರು 1 ಗಂಟೆ 20 ನಿಮಿಷ ಉಳಿತಾಯವಾಗಲಿದೆ ಎಂದು ತಿಳಿಸಿದೆ. </p><p>ಶಿಕ್ಷಣ ಸಂಸ್ಥೆಗಳಿಗೆ ಹೆಸರುವಾಸಿಯಾದ ಧಾರವಾಡ, ವಾಣಿಜ್ಯ-ಕೈಗಾರಿಕಾ ಕೇಂದ್ರವಾದ ಹುಬ್ಬಳ್ಳಿ, ಬೆಳೆಯುತ್ತಿರುವ ಕೃಷಿ ಕೇಂದ್ರವಾದ ಹಾವೇರಿ, ಜವಳಿ-ಕೃಷಿಗೆ ಹೆಸರುವಾಸಿಯಾದ ದಾವಣಗೆರೆ ಮತ್ತು ಕೈಗಾರಿಕಾ-ಶೈಕ್ಷಣಿಕ ಕೇಂದ್ರವಾದ ತುಮಕೂರು ಮೂಲಕ ರೈಲು ಸಂಚರಿಸಲಿದೆ. </p><p>ಅತ್ಯಾಧುನಿಕ ವ್ಯವಸ್ಥೆಯು ಸುರಕ್ಷಿತ ಪ್ರಯಾಣವನ್ನು ಖಾತ್ರಿಪಡಿಸುತ್ತದೆ. ವಿದ್ಯಾರ್ಥಿಗಳು, ವೃತ್ತಿಪರರು, ರೈತರು ಮತ್ತು ವ್ಯಾಪಾರಿಗಳಿಗೆ ಇದರಿಂದ ನೆರವಾಗಲಿದೆ. </p><p>ರಾಜ್ಯದ 11ನೇ ವಂದೇ ಭಾರತ್ ರೈಲು ಇದಾಗಿದೆ. ಹಾಗೆಯೇ ದೇಶದಲ್ಲಿ 75 ವಂದೇ ಭಾರತ್ ರೈಲುಗಳು 24 ರಾಜ್ಯಗಳಲ್ಲಿ ದೈನಂದಿನ 150 ಸಂಚಾರ ನಡೆಸುತ್ತಿದೆ ಎಂದು ರೈಲೈ ಸಚಿವಾಲಯ ತಿಳಿಸಿದೆ. </p>.ಆಪರೇಷನ್ ಸಿಂಧೂರ ಯಶಸ್ಸಿನಲ್ಲಿ 'ಭಾರತೀಯ ತಂತ್ರಜ್ಞಾನ','ಮೇಕ್ ಇನ್ ಇಂಡಿಯಾ': ಮೋದಿ.ದೇಶದ ಮಾಹಿತಿ ತಂತ್ರಜ್ಞಾನ, ರಕ್ಷಣಾ ಕ್ಷೇತ್ರಕ್ಕೆ ಬೆಂಗಳೂರಿನ ಕೊಡುಗೆ ಅಪಾರ: ಮೋದಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>