<p><strong>ಮೈಸೂರು:</strong> ‘ಬಂಕಿಮಚಂದ್ರ ಚಟರ್ಜಿ ಅವರು ರಚಿಸಿರುವ ‘ವಂದೇ ಮಾತರಂ’ ಗೀತೆಗೆ 150 ವರ್ಷ ತುಂಬಿರುವ ಈ ಶುಭ ಸಂದರ್ಭದಲ್ಲಿ ನಾವೆಲ್ಲರೂ ರಾಷ್ಟ್ರಪ್ರೇಮದ ಬಗ್ಗೆ ರಾಜಿ ಇಲ್ಲದ ಮನಸ್ಥಿತಿಯನ್ನು ಬೆಳೆಸಿಕೊಳ್ಳಬೇಕು’ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿದರು.</p><p>ವಂದೇ ಮಾತರಂ ಗೀತೆಗೆ 150 ವರ್ಷ ತುಂಬಿದ ಪ್ರಯುಕ್ತ ನವದೆಹಲಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಇಲ್ಲಿನ ಬಿಇಎಂಎಲ್ನಲ್ಲಿ ವರ್ಚುಯಲ್ ಆಗಿ ಭಾಗವಹಿಸಿದ ನಂತರ ಅವರು ನೌಕರರನ್ನು ಉದ್ದೇಶಿಸಿ ಮಾತನಾಡಿದರು.</p><p>‘ಪ್ರಧಾನಿಯವರ ನೇರ ಪ್ರಸಾರದ ಕಾರ್ಯಕ್ರಮದಲ್ಲಿ ನಾನು ಸಂತೋಷದಿಂದ ಭಾಗಿಯಾದೆ. ಒಂದೂವರೆ ಶತಮಾನ ಕಳೆದರೂ ಎಲ್ಲಾ ಭಾರತೀಯರ ಹೃನ್ಮನಗಳಲ್ಲಿ ಅಜರಾಮರವಾಗಿರುವ ವಂದೇ ಮಾತರಂ ಗೀತೆಗೆ ಗೌರವ ಸಮರ್ಪಣೆ ಮಾಡಲಾಯಿತು. ಆ ಗೀತೆಯು ಸ್ವಾತಂತ್ರ್ಯ ಸಂಗ್ರಾಮದಲ್ಲಿ ವಹಿಸಿದ ಪಾತ್ರವನ್ನು ಎಲ್ಲರೂ ಸ್ಮರಿಸಬೇಕು’ ಎಂದರು.</p><p>‘ಪ್ರಾಂತ್ಯವಾರು ಛಿದ್ರವಾಗಿದ್ದ ಭಾರತವನ್ನು ಒಗ್ಗೂಡಿಸಿದ ವಂದೇ ಮಾತರಂ ಗೀತೆಯು 150 ವರ್ಷವಾದರೂ ಜನರ ಅಚ್ಚುಮೆಚ್ಚಿನ ಗೀತೆಯಾಗಿದೆ. ಇದನ್ನು ಕೇಳುತ್ತಿದ್ದರೆ ರೋಮಾಂಚನ ಆಗುತ್ತದೆ’ ಎಂದು ಹೇಳಿದರು.</p><p>‘ವರ್ಷಪೂರ್ತಿ ಸ್ಮರಣಾರ್ಥ ಕಾರ್ಯಕ್ರಮಕ್ಕೆ ಪ್ರಧಾನಿ ಚಾಲನೆ ನೀಡಿದ್ದಾರೆ. ಯುವ ಜನರು ಈ ಮಹಾನ್ ಗೀತೆಯಲ್ಲಿರುವ ಆದರ್ಶಗಳನ್ನು ಮನನ ಮಾಡಿಕೊಂಡು ರಾಷ್ಟ್ರಪ್ರೇಮ ಬೆಳೆಸಿಕೊಳ್ಳಬೇಕು’ ಎಂದರು.</p><p>ಸಚಿವರು ಬಿಇಎಂಎಲ್ ಘಟಕದ ಆವರಣದಲ್ಲಿ ಸಸಿ ನೆಟ್ಟು ನೀರೆರೆದರು. ಶಾಸಕ ಜಿ.ಡಿ. ಹರೀಶ್ ಗೌಡ ಹಾಗೂ ಬಿಇಎಂಎಲ್ ಅಧಿಕಾರಿಗಳು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ‘ಬಂಕಿಮಚಂದ್ರ ಚಟರ್ಜಿ ಅವರು ರಚಿಸಿರುವ ‘ವಂದೇ ಮಾತರಂ’ ಗೀತೆಗೆ 150 ವರ್ಷ ತುಂಬಿರುವ ಈ ಶುಭ ಸಂದರ್ಭದಲ್ಲಿ ನಾವೆಲ್ಲರೂ ರಾಷ್ಟ್ರಪ್ರೇಮದ ಬಗ್ಗೆ ರಾಜಿ ಇಲ್ಲದ ಮನಸ್ಥಿತಿಯನ್ನು ಬೆಳೆಸಿಕೊಳ್ಳಬೇಕು’ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿದರು.</p><p>ವಂದೇ ಮಾತರಂ ಗೀತೆಗೆ 150 ವರ್ಷ ತುಂಬಿದ ಪ್ರಯುಕ್ತ ನವದೆಹಲಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಇಲ್ಲಿನ ಬಿಇಎಂಎಲ್ನಲ್ಲಿ ವರ್ಚುಯಲ್ ಆಗಿ ಭಾಗವಹಿಸಿದ ನಂತರ ಅವರು ನೌಕರರನ್ನು ಉದ್ದೇಶಿಸಿ ಮಾತನಾಡಿದರು.</p><p>‘ಪ್ರಧಾನಿಯವರ ನೇರ ಪ್ರಸಾರದ ಕಾರ್ಯಕ್ರಮದಲ್ಲಿ ನಾನು ಸಂತೋಷದಿಂದ ಭಾಗಿಯಾದೆ. ಒಂದೂವರೆ ಶತಮಾನ ಕಳೆದರೂ ಎಲ್ಲಾ ಭಾರತೀಯರ ಹೃನ್ಮನಗಳಲ್ಲಿ ಅಜರಾಮರವಾಗಿರುವ ವಂದೇ ಮಾತರಂ ಗೀತೆಗೆ ಗೌರವ ಸಮರ್ಪಣೆ ಮಾಡಲಾಯಿತು. ಆ ಗೀತೆಯು ಸ್ವಾತಂತ್ರ್ಯ ಸಂಗ್ರಾಮದಲ್ಲಿ ವಹಿಸಿದ ಪಾತ್ರವನ್ನು ಎಲ್ಲರೂ ಸ್ಮರಿಸಬೇಕು’ ಎಂದರು.</p><p>‘ಪ್ರಾಂತ್ಯವಾರು ಛಿದ್ರವಾಗಿದ್ದ ಭಾರತವನ್ನು ಒಗ್ಗೂಡಿಸಿದ ವಂದೇ ಮಾತರಂ ಗೀತೆಯು 150 ವರ್ಷವಾದರೂ ಜನರ ಅಚ್ಚುಮೆಚ್ಚಿನ ಗೀತೆಯಾಗಿದೆ. ಇದನ್ನು ಕೇಳುತ್ತಿದ್ದರೆ ರೋಮಾಂಚನ ಆಗುತ್ತದೆ’ ಎಂದು ಹೇಳಿದರು.</p><p>‘ವರ್ಷಪೂರ್ತಿ ಸ್ಮರಣಾರ್ಥ ಕಾರ್ಯಕ್ರಮಕ್ಕೆ ಪ್ರಧಾನಿ ಚಾಲನೆ ನೀಡಿದ್ದಾರೆ. ಯುವ ಜನರು ಈ ಮಹಾನ್ ಗೀತೆಯಲ್ಲಿರುವ ಆದರ್ಶಗಳನ್ನು ಮನನ ಮಾಡಿಕೊಂಡು ರಾಷ್ಟ್ರಪ್ರೇಮ ಬೆಳೆಸಿಕೊಳ್ಳಬೇಕು’ ಎಂದರು.</p><p>ಸಚಿವರು ಬಿಇಎಂಎಲ್ ಘಟಕದ ಆವರಣದಲ್ಲಿ ಸಸಿ ನೆಟ್ಟು ನೀರೆರೆದರು. ಶಾಸಕ ಜಿ.ಡಿ. ಹರೀಶ್ ಗೌಡ ಹಾಗೂ ಬಿಇಎಂಎಲ್ ಅಧಿಕಾರಿಗಳು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>