ಬಾಗಲಕೋಟೆ ಕ್ಷೇತ್ರಕ್ಕೆ ಅಭ್ಯರ್ಥಿ ಹೆಸರು ಇನ್ನೂ ಘೋಷಣೆ ಆಗಿಲ್ಲ. ಆದರೆ, ಸಚಿವ ಶಿವಾನಂದ ಪಾಟೀಲ ಅವರ ಮಗಳು ಸಂಯುಕ್ತಾ ಪಾಟೀಲ ಹೆಸರಿದೆ. ಯಾವುದೇ ಕಾರಣಕ್ಕೂ ಸಂಯುಕ್ತಾಗೆ ಟಿಕೆಟ್ ನೀಡಬಾರದು. ಲಿಂಗಾಯತ ಪಂಚಮಸಾಲಿ ಸಮುದಾಯದ ವೀಣಾ ಕಾಶಪ್ಪನವರ್ಗೆ ಟಿಕೆಟ್ ನೀಡಬೇಕು ಎಂದು ಬೆಂಬಲಿಗರು ಒತ್ತಾಯಿಸಿದರು. ಟಿಕೆಟ್ ನೀಡದಿದ್ದರೆ ಮತದಾನ ಬಹಿಷ್ಕರಿಸಲು ನಿರ್ಣಯ ಕೈಗೊಂಡಿದ್ದೇವೆ ಎಂದೂ ಹೇಳಿದರು.