<p><strong>ಮೈಸೂರು:</strong> ದೇಶದ ಜನರು ಸಮಗ್ರ ಮೀಸಲಾತಿಗೆ ಹೋರಾಟ ನಡೆಸಲು ಕಾಲ ಸನ್ನಿಹಿತವಾಗಿದೆ ಎಂದು ನಿಡುಮಾಮಿಡಿ ಮಠದ ವೀರಭದ್ರ ಚನ್ನಮಲ್ಲ ಸ್ವಾಮೀಜಿ ಇಲ್ಲಿ ಶನಿವಾರ ಹೇಳಿದರು.</p>.<p>ಭಾರತೀಯ ದಲಿತ ಸಾಹಿತ್ಯ ಅಕಾಡೆಮಿ ವತಿಯಿಂದ ಆಯೋಜಿಸಿದ್ದ ‘ಭಾರತೀಯ ಸಂವಿಧಾನ– ಸಾಮಾಜಿಕ ನ್ಯಾಯ, ಸಾಮೂಹಿಕ ಜವಾಬ್ದಾರಿ’ ಕುರಿತ ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಮಾತನಾಡಿದರು.</p>.<p>ಜನಸಂಖ್ಯೆ ಆಧರಿಸಿ ಎಲ್ಲ ಸಮುದಾಯಗಳಿಗೂ ಮೀಸಲಾತಿ ನೀಡಿ ಎಂಬ ಮಾನದಂಡ ಮುಂದಿಟ್ಟು<br />ಕೊಂಡು ಹೋರಾಟ ಆರಂಭಿಸಬೇಕಿದೆ. ಜನಸಂಖ್ಯೆಗೆ ಅನುಗುಣವಾಗಿ ಆಯಾ ಸಮುದಾಯಗಳಿಗೆ ಮೀಸಲಾತಿ ಕೊಟ್ಟರೆ ಎಲ್ಲರಿಗೂ ಸಾಮಾಜಿಕ ನ್ಯಾಯ ತಲುಪಿಸಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.</p>.<p>ಅಲ್ಪ ಸ್ವಲ್ಪ ಮೀಸಲಾತಿ ಮೂಲಕ ರಾಜಕೀಯ ಲಾಭ ಪಡೆಯಬಹುದೇ ಹೊರತು, ಜನಕಲ್ಯಾಣ ಸಾಧ್ಯವಿಲ್ಲ. ಜನಸಂಖ್ಯೆಗೆ ಅನುಗುಣವಾಗಿ ಎಲ್ಲ ಸಮುದಾಯಗಳಿಗೂ ರಾಜಕೀಯ, ಶೈಕ್ಷಣಿಕ, ಆರ್ಥಿಕ ಕ್ಷೇತ್ರಗಳಲ್ಲಿ ಮೀಸಲಾತಿ ಸಿಗಲಿ ಎಂದು ಒತ್ತಾಯಿಸಿದರು.</p>.<p>ಮೇಲ್ವರ್ಗದವರ ಮತಗಳು ಕೈತಪ್ಪಬಹುದು ಎಂಬ ಭಯದಿಂದ ಎಲ್ಲ ರಾಜಕೀಯ ಪಕ್ಷಗಳು ಮೇಲ್ಜಾತಿಗೆ ಶೇ 10ರಷ್ಟು ಮೀಸಲಾತಿ ನೀಡಲು ಒಪ್ಪಿಗೆ ಸೂಚಿಸಿವೆ. ಆದರೆ ಮೂರು ದಶಕಗಳಿಂದ ನನೆಗುದಿಗೆ ಬಿದ್ದಿರುವ ಮಹಿಳಾ ಮೀಸಲಾತಿ ಮಸೂದೆಗೆ ಏಕೆ ಸಮ್ಮತಿ ಸೂಚಿಸಿಲ್ಲ ಎಂದು ಪ್ರಶ್ನಿಸಿದರು.</p>.<p class="Subhead"><strong>ಅಪಾಯದ ದಿನಗಳು ಬರಲಿವೆ: </strong>ದೇಶವನ್ನು ಆಳುವ ವರ್ಗಗಳು ತಮ್ಮ ಜನ ಸಮುದಾಯದ ಹಿತಾಸಕ್ತಿಗಳನ್ನು ಮಾತ್ರ ರಕ್ಷಿಸಲು ಹೊರಟರೆ ಆ ಆಡಳಿತದಿಂದ ಎಲ್ಲರಿಗೂ ನ್ಯಾಯ ಸಿಗದು. ಅಂತಹ ಪರಿಸ್ಥಿತಿಯನ್ನು ಕಳೆದ ಎರಡು ಮೂರು ದಶಕಗಳಲ್ಲಿ ಹೆಚ್ಚಾಗಿ ಕಾಣುತ್ತಾ ಇದ್ದೇವೆ ಎಂದರು.</p>.<p>ಸಂವಿಧಾನದ ಮೂಲ ಸ್ವರೂಪವನ್ನು ಬದಲಿಸುವ ಪ್ರಯತ್ನ ನಡೆಯುತ್ತಿದೆ. ಸಂವಿಧಾನದ ಆಶಯಕ್ಕೆ ಧಕ್ಕೆ ಬಂದರೆ ದೇಶ ಅಪಾಯದ ದಿನಗಳನ್ನು ಎದುರಿಸಲಿದೆ. ಅಂತಹ ಪ್ರಯತ್ನವನ್ನು ಒಗ್ಗಟ್ಟಿನಿಂದ ತಡೆಯಬೇಕಿದೆ ಎಂದು ಕರೆ ನೀಡಿದರು.</p>.<p>ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಎಚ್.ಕಾಂತರಾಜ ಮಾತನಾಡಿ, ಹಿಂದುಳಿದ ವರ್ಗಗಳಲ್ಲಿ ಒಳ ವರ್ಗೀಕರಣ ಮಾಡಿ ಮೀಸಲಾತಿ ಕಲ್ಪಿಸಿದರೆ ಮಾತ್ರ ಈ ವರ್ಗದವರಿಗೆ ಸಾಮಾಜಿಕ ನ್ಯಾಯ ದೊರೆಯಲು ಸಾಧ್ಯ ಎಂದರು.</p>.<p>**</p>.<p>ಒಳಮೀಸಲಾತಿಯೊಂದಿಗೆ ಸಮಗ್ರ ಮೀಸಲಾತಿಗೆ ಒತ್ತಾಯಿಸಿದರೆ ದೇಶದಲ್ಲಿ ಅದ್ಭುತ ಕಾಂತ್ರಿ ಉಂಟಾಗಲಿದೆ.<br />ವೀರಭದ್ರ ಚನ್ನಮಲ್ಲ ಸ್ವಾಮೀಜಿ.</p>.<p><em><strong>- ನಿಡುಮಾಮಿಡಿ ಮಠ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ದೇಶದ ಜನರು ಸಮಗ್ರ ಮೀಸಲಾತಿಗೆ ಹೋರಾಟ ನಡೆಸಲು ಕಾಲ ಸನ್ನಿಹಿತವಾಗಿದೆ ಎಂದು ನಿಡುಮಾಮಿಡಿ ಮಠದ ವೀರಭದ್ರ ಚನ್ನಮಲ್ಲ ಸ್ವಾಮೀಜಿ ಇಲ್ಲಿ ಶನಿವಾರ ಹೇಳಿದರು.</p>.<p>ಭಾರತೀಯ ದಲಿತ ಸಾಹಿತ್ಯ ಅಕಾಡೆಮಿ ವತಿಯಿಂದ ಆಯೋಜಿಸಿದ್ದ ‘ಭಾರತೀಯ ಸಂವಿಧಾನ– ಸಾಮಾಜಿಕ ನ್ಯಾಯ, ಸಾಮೂಹಿಕ ಜವಾಬ್ದಾರಿ’ ಕುರಿತ ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಮಾತನಾಡಿದರು.</p>.<p>ಜನಸಂಖ್ಯೆ ಆಧರಿಸಿ ಎಲ್ಲ ಸಮುದಾಯಗಳಿಗೂ ಮೀಸಲಾತಿ ನೀಡಿ ಎಂಬ ಮಾನದಂಡ ಮುಂದಿಟ್ಟು<br />ಕೊಂಡು ಹೋರಾಟ ಆರಂಭಿಸಬೇಕಿದೆ. ಜನಸಂಖ್ಯೆಗೆ ಅನುಗುಣವಾಗಿ ಆಯಾ ಸಮುದಾಯಗಳಿಗೆ ಮೀಸಲಾತಿ ಕೊಟ್ಟರೆ ಎಲ್ಲರಿಗೂ ಸಾಮಾಜಿಕ ನ್ಯಾಯ ತಲುಪಿಸಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.</p>.<p>ಅಲ್ಪ ಸ್ವಲ್ಪ ಮೀಸಲಾತಿ ಮೂಲಕ ರಾಜಕೀಯ ಲಾಭ ಪಡೆಯಬಹುದೇ ಹೊರತು, ಜನಕಲ್ಯಾಣ ಸಾಧ್ಯವಿಲ್ಲ. ಜನಸಂಖ್ಯೆಗೆ ಅನುಗುಣವಾಗಿ ಎಲ್ಲ ಸಮುದಾಯಗಳಿಗೂ ರಾಜಕೀಯ, ಶೈಕ್ಷಣಿಕ, ಆರ್ಥಿಕ ಕ್ಷೇತ್ರಗಳಲ್ಲಿ ಮೀಸಲಾತಿ ಸಿಗಲಿ ಎಂದು ಒತ್ತಾಯಿಸಿದರು.</p>.<p>ಮೇಲ್ವರ್ಗದವರ ಮತಗಳು ಕೈತಪ್ಪಬಹುದು ಎಂಬ ಭಯದಿಂದ ಎಲ್ಲ ರಾಜಕೀಯ ಪಕ್ಷಗಳು ಮೇಲ್ಜಾತಿಗೆ ಶೇ 10ರಷ್ಟು ಮೀಸಲಾತಿ ನೀಡಲು ಒಪ್ಪಿಗೆ ಸೂಚಿಸಿವೆ. ಆದರೆ ಮೂರು ದಶಕಗಳಿಂದ ನನೆಗುದಿಗೆ ಬಿದ್ದಿರುವ ಮಹಿಳಾ ಮೀಸಲಾತಿ ಮಸೂದೆಗೆ ಏಕೆ ಸಮ್ಮತಿ ಸೂಚಿಸಿಲ್ಲ ಎಂದು ಪ್ರಶ್ನಿಸಿದರು.</p>.<p class="Subhead"><strong>ಅಪಾಯದ ದಿನಗಳು ಬರಲಿವೆ: </strong>ದೇಶವನ್ನು ಆಳುವ ವರ್ಗಗಳು ತಮ್ಮ ಜನ ಸಮುದಾಯದ ಹಿತಾಸಕ್ತಿಗಳನ್ನು ಮಾತ್ರ ರಕ್ಷಿಸಲು ಹೊರಟರೆ ಆ ಆಡಳಿತದಿಂದ ಎಲ್ಲರಿಗೂ ನ್ಯಾಯ ಸಿಗದು. ಅಂತಹ ಪರಿಸ್ಥಿತಿಯನ್ನು ಕಳೆದ ಎರಡು ಮೂರು ದಶಕಗಳಲ್ಲಿ ಹೆಚ್ಚಾಗಿ ಕಾಣುತ್ತಾ ಇದ್ದೇವೆ ಎಂದರು.</p>.<p>ಸಂವಿಧಾನದ ಮೂಲ ಸ್ವರೂಪವನ್ನು ಬದಲಿಸುವ ಪ್ರಯತ್ನ ನಡೆಯುತ್ತಿದೆ. ಸಂವಿಧಾನದ ಆಶಯಕ್ಕೆ ಧಕ್ಕೆ ಬಂದರೆ ದೇಶ ಅಪಾಯದ ದಿನಗಳನ್ನು ಎದುರಿಸಲಿದೆ. ಅಂತಹ ಪ್ರಯತ್ನವನ್ನು ಒಗ್ಗಟ್ಟಿನಿಂದ ತಡೆಯಬೇಕಿದೆ ಎಂದು ಕರೆ ನೀಡಿದರು.</p>.<p>ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಎಚ್.ಕಾಂತರಾಜ ಮಾತನಾಡಿ, ಹಿಂದುಳಿದ ವರ್ಗಗಳಲ್ಲಿ ಒಳ ವರ್ಗೀಕರಣ ಮಾಡಿ ಮೀಸಲಾತಿ ಕಲ್ಪಿಸಿದರೆ ಮಾತ್ರ ಈ ವರ್ಗದವರಿಗೆ ಸಾಮಾಜಿಕ ನ್ಯಾಯ ದೊರೆಯಲು ಸಾಧ್ಯ ಎಂದರು.</p>.<p>**</p>.<p>ಒಳಮೀಸಲಾತಿಯೊಂದಿಗೆ ಸಮಗ್ರ ಮೀಸಲಾತಿಗೆ ಒತ್ತಾಯಿಸಿದರೆ ದೇಶದಲ್ಲಿ ಅದ್ಭುತ ಕಾಂತ್ರಿ ಉಂಟಾಗಲಿದೆ.<br />ವೀರಭದ್ರ ಚನ್ನಮಲ್ಲ ಸ್ವಾಮೀಜಿ.</p>.<p><em><strong>- ನಿಡುಮಾಮಿಡಿ ಮಠ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>