<p><strong>ಬೆಂಗಳೂರು: ‘</strong>ಕಾಡುಗಳ್ಳ ವೀರಪ್ಪನ್ ಹಿಡಿಯಲು ನೇಮಕಗೊಂಡಿದ್ದ ವಿಶೇಷ ಕಾರ್ಯಾಚರಣೆ ಪಡೆಯ (ಎಸ್ಟಿಎಫ್) ಭಾಗವಾಗಿದ್ದ 72 ಮಂದಿಗೆ ಬಹುಮಾನದ ಮೊತ್ತವನ್ನು ಮೂರು ತಿಂಗಳಲ್ಲಿ ಪಾವತಿಸಿ’ ಎಂದು ಹೈಕೋರ್ಟ್, ರಾಜ್ಯ ಸರ್ಕಾರ ಮತ್ತು ಅರಣ್ಯ ಇಲಾಖೆಗೆ ನಿರ್ದೇಶಿಸಿದೆ.</p>.<p>ಚಾಮರಾಜನಗರದ ಹನೂರು ತಾಲ್ಲೂಕಿನ ಎ.ಶ್ರೀನಿವಾಸ ಹಾಗೂ ಇತರರು ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಚಿನ್ ಶಂಕರ್ ಮಗದುಂ ಅವರಿದ್ದ ಏಕಸದಸ್ಯ ನ್ಯಾಯಪೀಠ, ‘2005ರ ಜುಲೈ 8ರ ಸರ್ಕಾರಿ ಆದೇಶದ ಅನುಸಾರ ಫಲಾನುಭವಿಗಳಿಗೆ ಬಹುಮಾನ ವಿತರಿಸಬೇಕು’ ಎಂದು ಆದೇಶಿಸಿದೆ.</p>.<p>‘ಹೈಕೋರ್ಟ್ನ ಸಮನ್ವಯ ನ್ಯಾಯಪೀಠವು 2024ರ ಆಗಸ್ಟ್ 12ರಂದು ನೀಡಿರುವ ತೀರ್ಪಿನ ಪ್ರಕಾರ ಈಗಾಗಲೇ ಪರಿಹಾರ ಪಡೆದಿರುವವರು ಮತ್ತು ಹಾಲಿ ಅರ್ಜಿದಾರರ ನಡುವೆ ತಾರತಮ್ಯ ಮಾಡಲಾಗದು. ಈಗಾಗಲೇ ಯಾರೆಲ್ಲಾ ಪರಿಹಾರ ಪಡೆದಿದ್ದಾರೋ ಅವರಂತೆಯೇ ಅರ್ಜಿದಾರರೂ ಬಹುಮಾನಕ್ಕೆ ಅರ್ಹರಾಗಿದ್ದಾರೆ’ ಎಂದು ನ್ಯಾಯಪೀಠ ಸ್ಪಷ್ಟಪಡಿಸಿದೆ.</p>.<p>ಈ ಹಿಂದೆ ಸಮನ್ವಯ ನ್ಯಾಯಪೀಠ 17 ಮಂದಿಗೆ ಪರಿಹಾರ ಬಿಡುಗಡೆ ಮಾಡಲು ಆದೇಶಿಸಿತ್ತು. ‘ವೀರಪ್ಪನ್ನನ್ನು ಒಂದು ದಿನದಲ್ಲಿ ಯಾರೋ ಕೆಲವು ಸಿಬ್ಬಂದಿ ಮಾತ್ರವೇ ಹತ್ಯೆ ಮಾಡಿಲ್ಲ. ಇದಕ್ಕೂ ಮುನ್ನ ಹಲವರು ತಮ್ಮ ಜೀವ ಪಣಕ್ಕಿಟ್ಟು ಮಾಹಿತಿ ಸಂಗ್ರಹಿಸಿ, ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆ’ ಎಂದಿತ್ತು.</p>.<p>ವೀರಪ್ಪನ್ನನ್ನು 2004ರ ಅ.18ರಂದು ಹತ್ಯೆ ಮಾಡಲಾಗಿತ್ತು. ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದ ಸಿಬ್ಬಂದಿಗೆ ಬಹುಮಾನ ನೀಡುವಂತೆ ಪೊಲೀಸ್ ಮಹಾನಿರ್ದೇಶಕರು 2005ರ ಜ.24 ರಂದು ಸರ್ಕಾರಕ್ಕೆ ಶಿಫಾರಸು ಮಾಡಿದ್ದರು. ಇದನ್ನು 2005ರ ಜುಲೈ 8ರಂದು ಸರ್ಕಾರ ಒಪ್ಪಿಕೊಂಡಿತ್ತು.</p>.<p>ಇದರ ಭಾಗವಾಗಿ ರೂಪಿಸಿದ ಯೋಜನೆಯ ಪ್ರಕಾರ ಎಸ್ಟಿಎಫ್ನಲ್ಲಿ ಮೂರು ವರ್ಷಕ್ಕೂ ಹೆಚ್ಚು ಕೆಲಸ ಮಾಡಿದವರಿಗೆ ₹3 ಲಕ್ಷ, ಎರಡು ಅಥವಾ ಮೂರು ವರ್ಷದೊಳಗೆ ಕೆಲಸ ಮಾಡಿದವರಿಗೆ ₹2 ಲಕ್ಷ ಮತ್ತು ಒಂದು ಅಥವಾ ಎರಡು ವರ್ಷ ಕೆಲಸ ಮಾಡಿದ ಸಿಬ್ಬಂದಿಗೆ ₹1 ಲಕ್ಷ ಹಾಗೂ ಒಂದು ವರ್ಷದ ಒಳಗೆ ಕೆಲಸ ಮಾಡಿದ ಸಿಬ್ಬಂದಿಗೆ ₹50 ಸಾವಿರ ನೀಡಲಾಗುವುದು’ ಎಂದು ಘೋಷಿಸಲಾಗಿತ್ತು.</p>.<p>ವೀರಪ್ಪನ್ ಸೆರೆಹಿಡಿಯುವ ಕಾರ್ಯಾಚರಣೆಯಲ್ಲಿ ನಿವೃತ್ತ ಅರಣ್ಯ ರಕ್ಷಕರು, ವಾಚರ್, ಚಾಲಕರು, ಉಪ ಅರಣ್ಯ ಸಂರಕ್ಷಕರು, ಸಹಾಯಕ ಅರಣ್ಯ ರಕ್ಷಕರು, ಕ್ಷೇತ್ರ ಅರಣ್ಯ ರಕ್ಷಕರೂ ಭಾಗಿಯಾಗಿದ್ದರು.</p>.<p>ಏತನ್ಮಧ್ಯೆ, ‘ಬಹುಮಾನದ ಮೊತ್ತ ಖಾಲಿಯಾಗಿರುವುದರಿಂದ ವೀರಪ್ಪನ್ ಹತ್ಯೆಯಾದ ದಿನ ಸ್ಥಳದಲ್ಲಿದ್ದ ಆರು ಮಂದಿ ಎಸ್ಟಿಎಫ್ ಸಿಬ್ಬಂದಿಗೆ ಮಾತ್ರ ಬಹುಮಾನದ ಮೊತ್ತವನ್ನು ನೀಡಲಾಗುವುದು’ ಎಂದು ರಾಜ್ಯ ಸರ್ಕಾರ ಹೇಳಿತ್ತು. ಈ ವಾದವನ್ನು ಹೈಕೋರ್ಟ್ ತಿರಸ್ಕರಿಸಿತ್ತು.</p>.<p><strong>‘ಸರ್ಕಾರ ಮಾಡುವ ವಾಗ್ದಾನಕ್ಕೆ ಮಹತ್ವವಿದೆ’</strong></p><p>‘ವೀರಪ್ಪನ್ ಸದೆಬಡಿಯುವ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದವರಲ್ಲಿ ಕೆಲವರಿಗೆ ಮಾತ್ರವೇ ಬಹುಮಾನದ ಮೊತ್ತವನ್ನು ಸೀಮಿತಗೊಳಿಸಿದ್ದ<br>ರಾಜ್ಯ ಸರ್ಕಾರದ ನಿಲುವನ್ನು ಈ ಹಿಂದೆ ನ್ಯಾಯಾಲಯವು ಕಟುವಾಗಿ ಟೀಕಿಸಿತ್ತು. ‘ನೀಡಿರುವ ಮಾತನ್ನು ಉಳಿಸಿಕೊಳ್ಳಬೇಕೆ ವಿನಾ ಅದನ್ನು ಮುರಿಯಬಾರದು. ಅದರಲ್ಲೂ ಸಾರ್ವಭೌಮ ರಾಜ್ಯವು ನೀಡುವ ವಾಗ್ದಾನಕ್ಕೆ ತನ್ನದೇ ಆದ ಮಹತ್ವ ಇರುತ್ತದೆ’ ಎಂದು ನ್ಯಾಯಪೀಠ ಕುಟುಕಿತ್ತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br>260512-4-1823441520</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: ‘</strong>ಕಾಡುಗಳ್ಳ ವೀರಪ್ಪನ್ ಹಿಡಿಯಲು ನೇಮಕಗೊಂಡಿದ್ದ ವಿಶೇಷ ಕಾರ್ಯಾಚರಣೆ ಪಡೆಯ (ಎಸ್ಟಿಎಫ್) ಭಾಗವಾಗಿದ್ದ 72 ಮಂದಿಗೆ ಬಹುಮಾನದ ಮೊತ್ತವನ್ನು ಮೂರು ತಿಂಗಳಲ್ಲಿ ಪಾವತಿಸಿ’ ಎಂದು ಹೈಕೋರ್ಟ್, ರಾಜ್ಯ ಸರ್ಕಾರ ಮತ್ತು ಅರಣ್ಯ ಇಲಾಖೆಗೆ ನಿರ್ದೇಶಿಸಿದೆ.</p>.<p>ಚಾಮರಾಜನಗರದ ಹನೂರು ತಾಲ್ಲೂಕಿನ ಎ.ಶ್ರೀನಿವಾಸ ಹಾಗೂ ಇತರರು ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಚಿನ್ ಶಂಕರ್ ಮಗದುಂ ಅವರಿದ್ದ ಏಕಸದಸ್ಯ ನ್ಯಾಯಪೀಠ, ‘2005ರ ಜುಲೈ 8ರ ಸರ್ಕಾರಿ ಆದೇಶದ ಅನುಸಾರ ಫಲಾನುಭವಿಗಳಿಗೆ ಬಹುಮಾನ ವಿತರಿಸಬೇಕು’ ಎಂದು ಆದೇಶಿಸಿದೆ.</p>.<p>‘ಹೈಕೋರ್ಟ್ನ ಸಮನ್ವಯ ನ್ಯಾಯಪೀಠವು 2024ರ ಆಗಸ್ಟ್ 12ರಂದು ನೀಡಿರುವ ತೀರ್ಪಿನ ಪ್ರಕಾರ ಈಗಾಗಲೇ ಪರಿಹಾರ ಪಡೆದಿರುವವರು ಮತ್ತು ಹಾಲಿ ಅರ್ಜಿದಾರರ ನಡುವೆ ತಾರತಮ್ಯ ಮಾಡಲಾಗದು. ಈಗಾಗಲೇ ಯಾರೆಲ್ಲಾ ಪರಿಹಾರ ಪಡೆದಿದ್ದಾರೋ ಅವರಂತೆಯೇ ಅರ್ಜಿದಾರರೂ ಬಹುಮಾನಕ್ಕೆ ಅರ್ಹರಾಗಿದ್ದಾರೆ’ ಎಂದು ನ್ಯಾಯಪೀಠ ಸ್ಪಷ್ಟಪಡಿಸಿದೆ.</p>.<p>ಈ ಹಿಂದೆ ಸಮನ್ವಯ ನ್ಯಾಯಪೀಠ 17 ಮಂದಿಗೆ ಪರಿಹಾರ ಬಿಡುಗಡೆ ಮಾಡಲು ಆದೇಶಿಸಿತ್ತು. ‘ವೀರಪ್ಪನ್ನನ್ನು ಒಂದು ದಿನದಲ್ಲಿ ಯಾರೋ ಕೆಲವು ಸಿಬ್ಬಂದಿ ಮಾತ್ರವೇ ಹತ್ಯೆ ಮಾಡಿಲ್ಲ. ಇದಕ್ಕೂ ಮುನ್ನ ಹಲವರು ತಮ್ಮ ಜೀವ ಪಣಕ್ಕಿಟ್ಟು ಮಾಹಿತಿ ಸಂಗ್ರಹಿಸಿ, ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆ’ ಎಂದಿತ್ತು.</p>.<p>ವೀರಪ್ಪನ್ನನ್ನು 2004ರ ಅ.18ರಂದು ಹತ್ಯೆ ಮಾಡಲಾಗಿತ್ತು. ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದ ಸಿಬ್ಬಂದಿಗೆ ಬಹುಮಾನ ನೀಡುವಂತೆ ಪೊಲೀಸ್ ಮಹಾನಿರ್ದೇಶಕರು 2005ರ ಜ.24 ರಂದು ಸರ್ಕಾರಕ್ಕೆ ಶಿಫಾರಸು ಮಾಡಿದ್ದರು. ಇದನ್ನು 2005ರ ಜುಲೈ 8ರಂದು ಸರ್ಕಾರ ಒಪ್ಪಿಕೊಂಡಿತ್ತು.</p>.<p>ಇದರ ಭಾಗವಾಗಿ ರೂಪಿಸಿದ ಯೋಜನೆಯ ಪ್ರಕಾರ ಎಸ್ಟಿಎಫ್ನಲ್ಲಿ ಮೂರು ವರ್ಷಕ್ಕೂ ಹೆಚ್ಚು ಕೆಲಸ ಮಾಡಿದವರಿಗೆ ₹3 ಲಕ್ಷ, ಎರಡು ಅಥವಾ ಮೂರು ವರ್ಷದೊಳಗೆ ಕೆಲಸ ಮಾಡಿದವರಿಗೆ ₹2 ಲಕ್ಷ ಮತ್ತು ಒಂದು ಅಥವಾ ಎರಡು ವರ್ಷ ಕೆಲಸ ಮಾಡಿದ ಸಿಬ್ಬಂದಿಗೆ ₹1 ಲಕ್ಷ ಹಾಗೂ ಒಂದು ವರ್ಷದ ಒಳಗೆ ಕೆಲಸ ಮಾಡಿದ ಸಿಬ್ಬಂದಿಗೆ ₹50 ಸಾವಿರ ನೀಡಲಾಗುವುದು’ ಎಂದು ಘೋಷಿಸಲಾಗಿತ್ತು.</p>.<p>ವೀರಪ್ಪನ್ ಸೆರೆಹಿಡಿಯುವ ಕಾರ್ಯಾಚರಣೆಯಲ್ಲಿ ನಿವೃತ್ತ ಅರಣ್ಯ ರಕ್ಷಕರು, ವಾಚರ್, ಚಾಲಕರು, ಉಪ ಅರಣ್ಯ ಸಂರಕ್ಷಕರು, ಸಹಾಯಕ ಅರಣ್ಯ ರಕ್ಷಕರು, ಕ್ಷೇತ್ರ ಅರಣ್ಯ ರಕ್ಷಕರೂ ಭಾಗಿಯಾಗಿದ್ದರು.</p>.<p>ಏತನ್ಮಧ್ಯೆ, ‘ಬಹುಮಾನದ ಮೊತ್ತ ಖಾಲಿಯಾಗಿರುವುದರಿಂದ ವೀರಪ್ಪನ್ ಹತ್ಯೆಯಾದ ದಿನ ಸ್ಥಳದಲ್ಲಿದ್ದ ಆರು ಮಂದಿ ಎಸ್ಟಿಎಫ್ ಸಿಬ್ಬಂದಿಗೆ ಮಾತ್ರ ಬಹುಮಾನದ ಮೊತ್ತವನ್ನು ನೀಡಲಾಗುವುದು’ ಎಂದು ರಾಜ್ಯ ಸರ್ಕಾರ ಹೇಳಿತ್ತು. ಈ ವಾದವನ್ನು ಹೈಕೋರ್ಟ್ ತಿರಸ್ಕರಿಸಿತ್ತು.</p>.<p><strong>‘ಸರ್ಕಾರ ಮಾಡುವ ವಾಗ್ದಾನಕ್ಕೆ ಮಹತ್ವವಿದೆ’</strong></p><p>‘ವೀರಪ್ಪನ್ ಸದೆಬಡಿಯುವ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದವರಲ್ಲಿ ಕೆಲವರಿಗೆ ಮಾತ್ರವೇ ಬಹುಮಾನದ ಮೊತ್ತವನ್ನು ಸೀಮಿತಗೊಳಿಸಿದ್ದ<br>ರಾಜ್ಯ ಸರ್ಕಾರದ ನಿಲುವನ್ನು ಈ ಹಿಂದೆ ನ್ಯಾಯಾಲಯವು ಕಟುವಾಗಿ ಟೀಕಿಸಿತ್ತು. ‘ನೀಡಿರುವ ಮಾತನ್ನು ಉಳಿಸಿಕೊಳ್ಳಬೇಕೆ ವಿನಾ ಅದನ್ನು ಮುರಿಯಬಾರದು. ಅದರಲ್ಲೂ ಸಾರ್ವಭೌಮ ರಾಜ್ಯವು ನೀಡುವ ವಾಗ್ದಾನಕ್ಕೆ ತನ್ನದೇ ಆದ ಮಹತ್ವ ಇರುತ್ತದೆ’ ಎಂದು ನ್ಯಾಯಪೀಠ ಕುಟುಕಿತ್ತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br>260512-4-1823441520</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>