<p><strong>ದಾವಣಗೆರೆ:</strong> ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಬಲಕ್ಕೆ ವೀರಶೈವ ಲಿಂಗಾಯತ ಸಮುದಾಯದ ಎಲ್ಲ ಒಳಪಂಗಡಗಳ ಸಮಾವೇಶ ಸಂಘಟಿಸಲು ನಿರ್ಧರಿಸಲಾಗಿದೆ. ಹಲವು ಮಠಾಧೀಶರೊಂದಿಗೆ ಈ ಬಗ್ಗೆ ಚರ್ಚಿಸಲಾಗಿದೆ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ತಿಳಿಸಿದರು.</p><p>‘ಇಡೀ ಸಮುದಾಯ ಬಿ.ಎಸ್.ಯಡಿಯೂರಪ್ಪ ಹಾಗೂ ವಿಜಯೇಂದ್ರ ಬೆನ್ನಿಗೆ ನಿಲ್ಲಲಿದೆ. ಮಠಾಧೀಶರೊಂದಿಗೆ ಶೀಘ್ರವೇ ಪೂರ್ವಭಾವಿ ಸಭೆಯೊಂದನ್ನು ನಡೆಸಲಾಗುವುದು. ಬಿ.ವೈ.ವಿಜಯೇಂದ್ರ ಅವರನ್ನು ಮುಂದಿನ ಮುಖ್ಯಮಂತ್ರಿ ಮಾಡುವುದು ನಮ್ಮ ಉದ್ದೇಶ’ ಎಂದು ಮಂಗಳವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.</p><p>‘ಕೆಲವು ತಿರಸ್ಕೃತ ನಾಣ್ಯಗಳು ವೀರಶೈವ–ಲಿಂಗಾಯರ ನಾಯಕರೆಂದು ಬಿಂಬಿಸಿಕೊಳ್ಳಲು ಪ್ರಯತ್ನಿಸುತ್ತಿವೆ. ನೀವು (ಬಸನಗೌಡ ಪಾಟೀಲ ಯತ್ನಾಳ್) ಲಿಂಗಾಯತ ನಾಯಕರಲ್ಲ, ಡಮ್ಮಿ ನಾಯಕರು’ ಎಂದು ಆರೋಪಿಸಿದರು.</p><p>‘ಬಿ.ಎಸ್.ಯಡಿಯೂರಪ್ಪ ಅವರ ಜನ್ಮದಿನದ ಅಂಗವಾಗಿ ದಾವಣಗೆರೆಯಲ್ಲಿ ಸಮಾವೇಶವೊಂದನ್ನು ಸಂಘಟಿಸುವ ಆಲೋಚನೆ ಇತ್ತು. ಇಂತಹ ಸಮಾವೇಶ ಸಂಘಟಿಸದಂತೆ ಸ್ವತಃ ಯಡಿಯೂರಪ್ಪ ಅವರೇ ಸೂಚನೆ ನೀಡಿದ್ದರಿಂದ ನಿರ್ಧಾರ ಕೈಬಿಟ್ಟೆವು. ಪಕ್ಷದ ವರಿಷ್ಠರು ಈ ಸಮಾವೇಶವನ್ನು ತಡೆದಿಲ್ಲ’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ:</strong> ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಬಲಕ್ಕೆ ವೀರಶೈವ ಲಿಂಗಾಯತ ಸಮುದಾಯದ ಎಲ್ಲ ಒಳಪಂಗಡಗಳ ಸಮಾವೇಶ ಸಂಘಟಿಸಲು ನಿರ್ಧರಿಸಲಾಗಿದೆ. ಹಲವು ಮಠಾಧೀಶರೊಂದಿಗೆ ಈ ಬಗ್ಗೆ ಚರ್ಚಿಸಲಾಗಿದೆ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ತಿಳಿಸಿದರು.</p><p>‘ಇಡೀ ಸಮುದಾಯ ಬಿ.ಎಸ್.ಯಡಿಯೂರಪ್ಪ ಹಾಗೂ ವಿಜಯೇಂದ್ರ ಬೆನ್ನಿಗೆ ನಿಲ್ಲಲಿದೆ. ಮಠಾಧೀಶರೊಂದಿಗೆ ಶೀಘ್ರವೇ ಪೂರ್ವಭಾವಿ ಸಭೆಯೊಂದನ್ನು ನಡೆಸಲಾಗುವುದು. ಬಿ.ವೈ.ವಿಜಯೇಂದ್ರ ಅವರನ್ನು ಮುಂದಿನ ಮುಖ್ಯಮಂತ್ರಿ ಮಾಡುವುದು ನಮ್ಮ ಉದ್ದೇಶ’ ಎಂದು ಮಂಗಳವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.</p><p>‘ಕೆಲವು ತಿರಸ್ಕೃತ ನಾಣ್ಯಗಳು ವೀರಶೈವ–ಲಿಂಗಾಯರ ನಾಯಕರೆಂದು ಬಿಂಬಿಸಿಕೊಳ್ಳಲು ಪ್ರಯತ್ನಿಸುತ್ತಿವೆ. ನೀವು (ಬಸನಗೌಡ ಪಾಟೀಲ ಯತ್ನಾಳ್) ಲಿಂಗಾಯತ ನಾಯಕರಲ್ಲ, ಡಮ್ಮಿ ನಾಯಕರು’ ಎಂದು ಆರೋಪಿಸಿದರು.</p><p>‘ಬಿ.ಎಸ್.ಯಡಿಯೂರಪ್ಪ ಅವರ ಜನ್ಮದಿನದ ಅಂಗವಾಗಿ ದಾವಣಗೆರೆಯಲ್ಲಿ ಸಮಾವೇಶವೊಂದನ್ನು ಸಂಘಟಿಸುವ ಆಲೋಚನೆ ಇತ್ತು. ಇಂತಹ ಸಮಾವೇಶ ಸಂಘಟಿಸದಂತೆ ಸ್ವತಃ ಯಡಿಯೂರಪ್ಪ ಅವರೇ ಸೂಚನೆ ನೀಡಿದ್ದರಿಂದ ನಿರ್ಧಾರ ಕೈಬಿಟ್ಟೆವು. ಪಕ್ಷದ ವರಿಷ್ಠರು ಈ ಸಮಾವೇಶವನ್ನು ತಡೆದಿಲ್ಲ’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>