ಪ್ರತ್ಯೇಕ ಧರ್ಮದ ಮಾನ್ಯತೆ ಪರಿಗಣಿಸಿ: ಬಿದರಿ
‘ಈ ಹಿಂದಿನ ಸಮೀಕ್ಷೆಗಳಲ್ಲಿ ವೀರಶೈವ ಮತ್ತು ಲಿಂಗಾಯತರನ್ನು ಒಂದು ಜಾತಿ ಎಂದು ಪರಿಗಣಿಸಲಾಗಿದೆ. ಪ್ರತ್ಯೇಕ ಧರ್ಮದ ಮಾನ್ಯತೆಯನ್ನು ಅಧಿಕೃತವಾಗಿ ನೀಡಿಲ್ಲ. ಅದನ್ನು ಪರಿಗಣಿಸುವ ಅಗತ್ಯವಿದೆ’ ಎಂದು ಮಹಾಸಭಾದ ರಾಜ್ಯ ಘಟಕದ ಅಧ್ಯಕ್ಷ ಶಂಕರ ಬಿದರಿ ಹೇಳಿದರು. ‘ನಮ್ಮ ಸಮಾಜದಲ್ಲಿ ಹಿಂದುಳಿದವರು ಅತಿ ಹಿಂದುಳಿದವರು ಮತ್ತು ಅತ್ಯಂತ ಹಿಂದುಳಿದವರಿದ್ದಾರೆ. ಸಮುದಾಯದ ಬಡವ ಮತ್ತು ಕಡು ಬಡವರಿಗೆ ಸರ್ಕಾರವು ಪ್ರಾಮಾಣಿಕವಾಗಿ ಅಂಕ ನೀಡಿ ಸೂಕ್ತ ಪ್ರವರ್ಗಕ್ಕೆ ಸೇರಿಸಬೇಕು’ ಎಂದು ಅವರು ಒತ್ತಾಯಿಸಿದರು.