ಮಂಗಳವಾರ, 4 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶೇ 25ರ ದರದಲ್ಲಿ ಹೆಣ್ಣು ಕರುಗಳ ವಿತರಣೆ: ಪ್ರಭು ಚವ್ಹಾಣ್‌

Last Updated 4 ಜುಲೈ 2021, 5:29 IST
ಅಕ್ಷರ ಗಾತ್ರ

ಬೆಂಗಳೂರು: ಪಶು ಸಂಗೋಪನಾ ಇಲಾಖೆಯ ತಳಿ ಸಂವರ್ಧನಾ ಕೇಂದ್ರಗಳಲ್ಲಿ ಜನಿಸುವ ದೇಶೀಯ ತಳಿಗಳ ಹೆಣ್ಣು ಕರುಗಳನ್ನು ‘ಅಮೃತ ಸಿರಿ’ ಯೋಜನೆಯಡಿ ಮಾರುಕಟ್ಟೆ ದರದ ಶೇಕಡ 25ರಷ್ಟು ದರದಲ್ಲಿ ವಿವಿಧ ವರ್ಗದ ಜನರಿಗೆ ವಿತರಣೆ ಮಾಡಲಾಗುವುದು ಎಂದು ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ್‌ ತಿಳಿಸಿದ್ದಾರೆ.

‘ರಾಜ್ಯದಲ್ಲಿರುವ 19 ತಳಿ ಸಂವರ್ಧನಾ ಕೇಂದ್ರಗಳಲ್ಲಿರುವ 927ಕ್ಕೂ ಹೆಚ್ಚು ಹೆಣ್ಣು ಕರುಗಳನ್ನು ಅಮೃತ ಸಿರಿ ಯೋಜನೆಯಡಿ ವಿತರಿಸಲಾಗುವುದು. ಹಳ್ಳಿಕಾರ್‌, ಅಮೃತ್‌ ಮಹಲ್‌, ಮಲೆನಾಡು ಗಿಡ್ಡ, ಖಿಲಾರಿ ಮತ್ತು ಕೃಷ್ಣವ್ಯಾಲಿ ತಳಿಯ ಈ ಕರುಗಳನ್ನು ದೇಶೀಯ ತಳಿಯ ಜಾನುವಾರುಗಳ ಅಭಿವೃದ್ಧಿ ಉದ್ದೇಶದಿಂದ ವಿತರಣೆ ಮಾಡಲು ನಿರ್ಧರಿಸಲಾಗಿದೆ’ ಎಂದು ಪ್ರಕಟಣೆಯಲ್ಲಿ ಹೇಳಿದ್ದಾರೆ.

ಈ ಯೋಜನೆಯಡಿ ಕರುಗಳ ಹಂಚಿಕೆಗೆ ಫಲಾನುಭವಿಗಳನ್ನು ಆಯ್ಕೆ ಮಾಡುವಾಗ ಹುತಾತ್ಮ ಯೋಧರ ಪತ್ನಿಯರು, ಶವಸಂಸ್ಕಾರ ನಡೆಸುವ ಕಾರ್ಮಿಕರು, ವಿಧವೆಯರಿಗೆ ಆದ್ಯತೆ ನೀಡಲಾಗುವುದು ಎಂದು ತಿಳಿಸಿದ್ದಾರೆ.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT