<p><strong>ದಾವಣಗೆರೆ</strong>: ದೇಶದ ಅತಿ ಹಿರಿಯ ಶಾಸಕ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ವಯೋಸಹಜ ಅನಾರೋಗ್ಯದಿಂದ ಭಾನುವಾರ ನಿಧನರಾದರು. ಇವರಿಗೆ 95 ವರ್ಷ ವಯಸ್ಸಾಗಿತ್ತು.</p><p>ಇವರಿಗೆ ಗಣಿ ಮತ್ತು ಭೂವಿಜ್ಞಾನ ಸಚಿವರೂ ಆಗಿರುವ ಪುತ್ರ ಎಸ್.ಎಸ್. ಮಲ್ಲಿಕಾರ್ಜುನ್ ಸೇರಿದಂತೆ ಮೂವರು ಪುತ್ರರು. ನಾಲ್ವರು ಪುತ್ರಿಯರು ಹಾಗೂ ಸಂಸದೆ, ಸೊಸೆ ಡಾ.ಪ್ರಭಾ ಮಲ್ಲಿಕಾರ್ಜುನ್ ಇದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಬೆಂಗಳೂರಿನ ಸ್ಪರ್ಶ ಆಸ್ಪತ್ರೆಯಲ್ಲಿ ತಿಂಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು.</p>.ಶಾಮನೂರು ಶಿವಶಂಕರಪ್ಪ ಆರೋಗ್ಯಕ್ಕೆ ಪ್ರಾರ್ಥಿಸಿ ವಿಶೇಷ ಪೂಜೆ.ಜಾತಿ ಗಣತಿ | ಅನ್ಯಾಯ ಆಗಲು ಬಿಡೆವು: ಶಾಮನೂರು ಶಿವಶಂಕರಪ್ಪ .<p>ಶಾಮನೂರು ಕಲ್ಲಪ್ಪ–ಸಾವಿತ್ರಮ್ಮ ದಂಪತಿ ಪುತ್ರರಾಗಿ 1931ರ ಜೂನ್ 16ರಂದು ಜನಿಸಿದ ಶಾಮನೂರು ಶಿವಶಂಕರಪ್ಪ ಮೂಲತಃ ಉದ್ಯಮಿ. ರಾಜಕೀಯ ಕ್ಷೇತ್ರ ಪ್ರವೇಶಿಸಿದ ಇವರು 6 ಬಾರಿ ಶಾಸಕರಾಗಿ, ಸಚಿವರಾಗಿ ಹಾಗೂ ಒಮ್ಮೆ ಸಂಸದರಾಗಿ ಸೇವೆ ಸಲ್ಲಿಸಿದ್ದಾರೆ. ಸುದೀರ್ಘ ಅವಧಿಗೆ ಕೆಪಿಸಿಸಿ ಖಜಾಂಚಿಯಾಗಿದ್ದರು.</p><p>1969ರಲ್ಲಿ ನಗರಸಭೆ ಮೂಲಕ ರಾಜಕೀಯ ಪ್ರವೇಶಿಸಿದ ಶಾಮನೂರು ಶಿವಶಂಕರಪ್ಪ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು. 1994ರಲ್ಲಿ ಮೊದಲ ಬಾರಿಗೆ ವಿಧಾನಸಭೆಗೆ ಸ್ಪರ್ಧಿಸಿ ಆಯ್ಕೆಯಾದರು. ಆಗ ಅವರಿಗೆ 63 ವರ್ಷ ವಯಸ್ಸಾಗಿತ್ತು. ಶಾಸಕರಾಗಿ, ಸಂಸದರಾಗಿ ನಿರಂತರವಾಗಿ ಆಯ್ಕೆಯಾದ ಇವರು ವಯಸ್ಸಾದಂತೆ ರಾಜಕಾರಣದಲ್ಲಿ ಮೇಲೇರಿದರು.</p><p>ಶಾಮನೂರು ಶಿವಶಂಕರಪ್ಪ 2012ರಿಂದ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಅಧ್ಯಕ್ಷರಾಗಿದ್ದರು. ಲಿಂಗಾಯತ ಪ್ರತ್ಯೇಕ ಧರ್ಮದ ಕೂಗು ಎದ್ದಾಗ ‘ವೀರಶೈವ–ಲಿಂಗಾಯತ’ ಎರಡೂ ಒಂದೇ ಎಂದು ಪ್ರಬಲವಾಗಿ ಪ್ರತಿಪಾದಿಸಿದರು. ಇವರ ಅವಧಿಯಲ್ಲಿ ವೀರಶೈವ ಮಹಾಸಭಾದ ಹೆಸರು ವೀರಶೈವ–ಲಿಂಗಾಯತ ಮಹಾಸಭಾ ಎಂಬುದಾಗಿ ಪರಿವರ್ತನೆಯಾಯಿತು.</p><p>ವೀರಶೈವ ಲಿಂಗಾಯತ ಮಠಾಧೀಶರನ್ನು ಒಗ್ಗೂಡಿಸಲು ಮುಂದಾಗಿದ್ದ ಶಾಮನೂರು ಶಿವಶಂಕರಪ್ಪ ಈ ನಿಟ್ಟಿನಲ್ಲಿ ಪ್ರಯತ್ನ ಆರಂಭಿಸಿದ್ದರು. ಮೊದಲ ಹೆಜ್ಜೆಯಾಗಿ ಪಂಚಪೀಠ ಮಠಾಧೀಶರ ಸಮ್ಮೇಳವನ್ನು ಆಯೋಜಿಸಿ ಯಶಸ್ಸು ಕಂಡಿದ್ದರು. ವಿರಕ್ತ ಮತ್ತು ಗುರುಪರಂಪರೆ ಒಗ್ಗೂಡಿದರೆ ಸಮಾಜ ಇನ್ನಷ್ಟು ಸಬಲವಾಗುತ್ತದೆ ಎಂಬ ಬಲವಾದ ನಂಬಿಕೆ ಅವರದಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ</strong>: ದೇಶದ ಅತಿ ಹಿರಿಯ ಶಾಸಕ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ವಯೋಸಹಜ ಅನಾರೋಗ್ಯದಿಂದ ಭಾನುವಾರ ನಿಧನರಾದರು. ಇವರಿಗೆ 95 ವರ್ಷ ವಯಸ್ಸಾಗಿತ್ತು.</p><p>ಇವರಿಗೆ ಗಣಿ ಮತ್ತು ಭೂವಿಜ್ಞಾನ ಸಚಿವರೂ ಆಗಿರುವ ಪುತ್ರ ಎಸ್.ಎಸ್. ಮಲ್ಲಿಕಾರ್ಜುನ್ ಸೇರಿದಂತೆ ಮೂವರು ಪುತ್ರರು. ನಾಲ್ವರು ಪುತ್ರಿಯರು ಹಾಗೂ ಸಂಸದೆ, ಸೊಸೆ ಡಾ.ಪ್ರಭಾ ಮಲ್ಲಿಕಾರ್ಜುನ್ ಇದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಬೆಂಗಳೂರಿನ ಸ್ಪರ್ಶ ಆಸ್ಪತ್ರೆಯಲ್ಲಿ ತಿಂಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು.</p>.ಶಾಮನೂರು ಶಿವಶಂಕರಪ್ಪ ಆರೋಗ್ಯಕ್ಕೆ ಪ್ರಾರ್ಥಿಸಿ ವಿಶೇಷ ಪೂಜೆ.ಜಾತಿ ಗಣತಿ | ಅನ್ಯಾಯ ಆಗಲು ಬಿಡೆವು: ಶಾಮನೂರು ಶಿವಶಂಕರಪ್ಪ .<p>ಶಾಮನೂರು ಕಲ್ಲಪ್ಪ–ಸಾವಿತ್ರಮ್ಮ ದಂಪತಿ ಪುತ್ರರಾಗಿ 1931ರ ಜೂನ್ 16ರಂದು ಜನಿಸಿದ ಶಾಮನೂರು ಶಿವಶಂಕರಪ್ಪ ಮೂಲತಃ ಉದ್ಯಮಿ. ರಾಜಕೀಯ ಕ್ಷೇತ್ರ ಪ್ರವೇಶಿಸಿದ ಇವರು 6 ಬಾರಿ ಶಾಸಕರಾಗಿ, ಸಚಿವರಾಗಿ ಹಾಗೂ ಒಮ್ಮೆ ಸಂಸದರಾಗಿ ಸೇವೆ ಸಲ್ಲಿಸಿದ್ದಾರೆ. ಸುದೀರ್ಘ ಅವಧಿಗೆ ಕೆಪಿಸಿಸಿ ಖಜಾಂಚಿಯಾಗಿದ್ದರು.</p><p>1969ರಲ್ಲಿ ನಗರಸಭೆ ಮೂಲಕ ರಾಜಕೀಯ ಪ್ರವೇಶಿಸಿದ ಶಾಮನೂರು ಶಿವಶಂಕರಪ್ಪ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು. 1994ರಲ್ಲಿ ಮೊದಲ ಬಾರಿಗೆ ವಿಧಾನಸಭೆಗೆ ಸ್ಪರ್ಧಿಸಿ ಆಯ್ಕೆಯಾದರು. ಆಗ ಅವರಿಗೆ 63 ವರ್ಷ ವಯಸ್ಸಾಗಿತ್ತು. ಶಾಸಕರಾಗಿ, ಸಂಸದರಾಗಿ ನಿರಂತರವಾಗಿ ಆಯ್ಕೆಯಾದ ಇವರು ವಯಸ್ಸಾದಂತೆ ರಾಜಕಾರಣದಲ್ಲಿ ಮೇಲೇರಿದರು.</p><p>ಶಾಮನೂರು ಶಿವಶಂಕರಪ್ಪ 2012ರಿಂದ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಅಧ್ಯಕ್ಷರಾಗಿದ್ದರು. ಲಿಂಗಾಯತ ಪ್ರತ್ಯೇಕ ಧರ್ಮದ ಕೂಗು ಎದ್ದಾಗ ‘ವೀರಶೈವ–ಲಿಂಗಾಯತ’ ಎರಡೂ ಒಂದೇ ಎಂದು ಪ್ರಬಲವಾಗಿ ಪ್ರತಿಪಾದಿಸಿದರು. ಇವರ ಅವಧಿಯಲ್ಲಿ ವೀರಶೈವ ಮಹಾಸಭಾದ ಹೆಸರು ವೀರಶೈವ–ಲಿಂಗಾಯತ ಮಹಾಸಭಾ ಎಂಬುದಾಗಿ ಪರಿವರ್ತನೆಯಾಯಿತು.</p><p>ವೀರಶೈವ ಲಿಂಗಾಯತ ಮಠಾಧೀಶರನ್ನು ಒಗ್ಗೂಡಿಸಲು ಮುಂದಾಗಿದ್ದ ಶಾಮನೂರು ಶಿವಶಂಕರಪ್ಪ ಈ ನಿಟ್ಟಿನಲ್ಲಿ ಪ್ರಯತ್ನ ಆರಂಭಿಸಿದ್ದರು. ಮೊದಲ ಹೆಜ್ಜೆಯಾಗಿ ಪಂಚಪೀಠ ಮಠಾಧೀಶರ ಸಮ್ಮೇಳವನ್ನು ಆಯೋಜಿಸಿ ಯಶಸ್ಸು ಕಂಡಿದ್ದರು. ವಿರಕ್ತ ಮತ್ತು ಗುರುಪರಂಪರೆ ಒಗ್ಗೂಡಿದರೆ ಸಮಾಜ ಇನ್ನಷ್ಟು ಸಬಲವಾಗುತ್ತದೆ ಎಂಬ ಬಲವಾದ ನಂಬಿಕೆ ಅವರದಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>