ವಿನೋದ್ ರಾಜ್ ಪ್ರತಿಕ್ರಿಯಿಸಿ, ‘ನಾವು ಸುಸಜ್ಜಿತವಾದ ಪಶು ಚಿಕಿತ್ಸೆ ಆಸ್ಪತ್ರೆ ನಿರ್ಮಿಸಿದ್ದು, ಅದಕ್ಕೆ ಸಿಬ್ಬಂದಿಯನ್ನು ಸರ್ಕಾರದಿಂದ ನಿಯೋಜಿಸುವಂತೆ ಮನವಿ ಸಲ್ಲಿಸಿದ್ದೇವೆ. ಸೊಂಡೆಕೊಪ್ಪ ಬಳಿ ವಿದ್ಯುತ್ ಸಬ್ಸ್ಟೇಷನ್ ಕಾಮಗಾರಿ ಶೇ 99ರಷ್ಟು ನಿರ್ಮಾಣವಾಗಿದ್ದು, ಬಳಿಕ ನಿಂತು ಹೋಗಿದೆ. ಅದನ್ನು ಕಾರ್ಯಗತಗೊಳಿಸಿದರೆ ಆ ಭಾಗದ ರೈತರಿಗೆ ಉಪಯೋಗವಾಗುತ್ತದೆ. ಅದನ್ನೂ ಶಿವಕುಮಾರ್ ಗಮನಕ್ಕೆ ತಂದಿದ್ದೇನೆ’ ಎಂದರು.