<p><strong>ಬೆಂಗಳೂರು:</strong> ಕಾಮಗಾರಿಗಳ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇ 4ರಷ್ಟು ಮೀಸಲಾತಿ ನೀಡುವ ರಾಜ್ಯ ಸರ್ಕಾರದ ವಿಧೇಯಕಕ್ಕೆ ಒಪ್ಪಿಗೆ ನೀಡದಂತೆ ಒತ್ತಾಯಿಸಿ ವಿಶ್ವ ಹಿಂದೂ ಪರಿಷತ್, ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರಿಗೆ ಮನವಿ ಮಾಡಿದೆ.</p>.<p>ಸರ್ಕಾರದ ಕಾಮಗಾರಿ ಗುತ್ತಿಗೆಗಳಲ್ಲಿ ಮುಸ್ಲಿಮರಿಗೆ ಮೀಸಲಾತಿ ನೀಡುವ ಮಸೂದೆಯನ್ನು ವಿಧಾನಸಭೆಯಲ್ಲಿ ಮಂಡಿಸಲಾಗಿದೆ. ಕೆಟಿಟಿಪಿ ಕಾಯ್ದೆಯಲ್ಲಿನ ತಿದ್ದುಪಡಿಯು ₹2 ಕೋಟಿವರೆಗೆ ಸಿವಿಲ್ ಗುತ್ತಿಗೆ ಮತ್ತು ₹1 ಕೋಟಿವರೆಗೆ ಸರಕು ಮತ್ತು ಸೇವಾ ಗುತ್ತಿಗೆಗಳಿಗೆ ಶೇ 4ರಷ್ಟು ಮೀಸಲಾತಿಗೆ ಅನುಮತಿ ನೀಡುವುದಾಗಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.</p>.<p>ಧರ್ಮ ಮತ್ತು ಜಾತಿಯ ಆಧಾರದ ಮೇಲೆ ನಾಗರಿಕರ ನಡುವೆ ತಾರತಮ್ಯ ಮಾಡುವುದಕ್ಕೆ ಸಂವಿಧಾನ ಅವಕಾಶ ನೀಡುವುದಿಲ್ಲ. ಸಂವಿಧಾನ ರಚಿಸುವಾಗಲೇ ಅಂಬೇಡ್ಕರ್ ಅವರು ಧರ್ಮಾಧಾರಿತ ಮೀಸಲಾತಿ ವಿರೋಧಿಸಿದ್ದರು ಎಂದು ಹೇಳಿದೆ.</p>.<p>ನಿಯೋಗದಲ್ಲಿ ವಿಶ್ವ ಹಿಂದೂ ಪರಿಷತ್ ಅಧ್ಯಕ್ಷ ದೀಪಕ್ ರಾಜಗೋಪಾಲ್, ಕಾರ್ಯದರ್ಶಿ ಜಗನ್ನಾಥ ಶಾಸ್ತ್ರಿ ಮತ್ತು ಬಜರಂಗ ದಳದ ಸಹ ಸಂಯೋಜಕ ಗೋವರ್ಧನ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕಾಮಗಾರಿಗಳ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇ 4ರಷ್ಟು ಮೀಸಲಾತಿ ನೀಡುವ ರಾಜ್ಯ ಸರ್ಕಾರದ ವಿಧೇಯಕಕ್ಕೆ ಒಪ್ಪಿಗೆ ನೀಡದಂತೆ ಒತ್ತಾಯಿಸಿ ವಿಶ್ವ ಹಿಂದೂ ಪರಿಷತ್, ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರಿಗೆ ಮನವಿ ಮಾಡಿದೆ.</p>.<p>ಸರ್ಕಾರದ ಕಾಮಗಾರಿ ಗುತ್ತಿಗೆಗಳಲ್ಲಿ ಮುಸ್ಲಿಮರಿಗೆ ಮೀಸಲಾತಿ ನೀಡುವ ಮಸೂದೆಯನ್ನು ವಿಧಾನಸಭೆಯಲ್ಲಿ ಮಂಡಿಸಲಾಗಿದೆ. ಕೆಟಿಟಿಪಿ ಕಾಯ್ದೆಯಲ್ಲಿನ ತಿದ್ದುಪಡಿಯು ₹2 ಕೋಟಿವರೆಗೆ ಸಿವಿಲ್ ಗುತ್ತಿಗೆ ಮತ್ತು ₹1 ಕೋಟಿವರೆಗೆ ಸರಕು ಮತ್ತು ಸೇವಾ ಗುತ್ತಿಗೆಗಳಿಗೆ ಶೇ 4ರಷ್ಟು ಮೀಸಲಾತಿಗೆ ಅನುಮತಿ ನೀಡುವುದಾಗಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.</p>.<p>ಧರ್ಮ ಮತ್ತು ಜಾತಿಯ ಆಧಾರದ ಮೇಲೆ ನಾಗರಿಕರ ನಡುವೆ ತಾರತಮ್ಯ ಮಾಡುವುದಕ್ಕೆ ಸಂವಿಧಾನ ಅವಕಾಶ ನೀಡುವುದಿಲ್ಲ. ಸಂವಿಧಾನ ರಚಿಸುವಾಗಲೇ ಅಂಬೇಡ್ಕರ್ ಅವರು ಧರ್ಮಾಧಾರಿತ ಮೀಸಲಾತಿ ವಿರೋಧಿಸಿದ್ದರು ಎಂದು ಹೇಳಿದೆ.</p>.<p>ನಿಯೋಗದಲ್ಲಿ ವಿಶ್ವ ಹಿಂದೂ ಪರಿಷತ್ ಅಧ್ಯಕ್ಷ ದೀಪಕ್ ರಾಜಗೋಪಾಲ್, ಕಾರ್ಯದರ್ಶಿ ಜಗನ್ನಾಥ ಶಾಸ್ತ್ರಿ ಮತ್ತು ಬಜರಂಗ ದಳದ ಸಹ ಸಂಯೋಜಕ ಗೋವರ್ಧನ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>