<p><strong>ಬೆಂಗಳೂರು:</strong> ‘ಬಜರಂಗದಳ ಕಾರ್ಯಕರ್ತರ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದೆ’ ಎಂದು ವಿಧಾನಸಭೆಯಲ್ಲಿ ಹೇಳಿರುವ ಆರ್. ಅಶೋಕ ಅವರನ್ನು ವಿರೋಧ ಪಕ್ಷದ ನಾಯಕನ ಸ್ಥಾನದಿಂದ ಕಿತ್ತು ಹಾಕುವಂತೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ವಿಶ್ವ ಹಿಂದೂ ಪರಿಷತ್ ಆಗ್ರಹಿಸಿದೆ.</p>.<p>ವಿಶ್ವ ಹಿಂದೂ ಪರಿಷತ್ನ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್ವೆಲ್ ನೇತೃತ್ವದ ನಿಯೋಗವು ವಿಜಯೇಂದ್ರ ಅವರನ್ನು ಗುರುವಾರ ಭೇಟಿ ಮಾಡಿ, ಮನವಿ ಸಲ್ಲಿಸಿದೆ. ಬಜರಂಗದಳದ ಪ್ರಾಂತ ಸಂಯೋಜಕ ಕೆ.ಆರ್. ಸುನಿಲ್, ವಿಭಾಗ ಸಂಯೋಜಕರಾದ ಗೋವರ್ಧನ್ ಸಿಂಗ್ ಮತ್ತು ಶಿವಕುಮಾರ್ ನಿಯೋಗದಲ್ಲಿದ್ದರು.</p>.<p>‘ಹಿಂದುತ್ವದ ಪರವಾಗಿ ಮಾತನಾಡಬೇಕಿರುವ ವಿರೋಧ ಪಕ್ಷದ ನಾಯಕರ ಈಗಿನ ಹೇಳಿಕೆಯಿಂದ ಹಿಂದುತ್ವ ಪರ ಕಾರ್ಯಕರ್ತರ ಮನಸ್ಸಿಗೆ ನೋವಾಗಿದೆ. ಬಜರಂಗದಳ ಕಾರ್ಯಕರ್ತರನ್ನು ಗೂಂಡಾಗಳಿಗೆ ಹೋಲಿಸಿ, ಅವರ ವಿರುದ್ಧ ಪ್ರಕರಣ ದಾಖಲಿಸಿದ್ದಲ್ಲದೇ ಈಗ ಸಮರ್ಥನೆ ಮಾಡಿಕೊಳ್ಳುತ್ತಿರುವುದು ಖಂಡನೀಯ’ ಎಂದು ವಿಶ್ವ ಹಿಂದೂ ಪರಿಷತ್ ಹೇಳಿದೆ.</p>.<p>ಈ ವಿಷಯವನ್ನು ಪಕ್ಷದ ಹಿರಿಯರು, ಶಾಸಕರು ಮತ್ತು ನಾಯಕರ ಗಮನಕ್ಕೆ ತರಬೇಕು. ಅಶೋಕ ಅವರನ್ನು ವಿರೋಧ ಪಕ್ಷದ ನಾಯಕನ ಸ್ಥಾನದಿಂದ ತೆಗೆದು ಹಾಕಬೇಕು. ಬಜರಂಗದಳದ ವಿರುದ್ಧ ಹೇಳಿಕೆ ನೀಡಿರುವುದಕ್ಕೆ ಅವರು ಬಹಿರಂಗ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಬಜರಂಗದಳ ಕಾರ್ಯಕರ್ತರ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದೆ’ ಎಂದು ವಿಧಾನಸಭೆಯಲ್ಲಿ ಹೇಳಿರುವ ಆರ್. ಅಶೋಕ ಅವರನ್ನು ವಿರೋಧ ಪಕ್ಷದ ನಾಯಕನ ಸ್ಥಾನದಿಂದ ಕಿತ್ತು ಹಾಕುವಂತೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ವಿಶ್ವ ಹಿಂದೂ ಪರಿಷತ್ ಆಗ್ರಹಿಸಿದೆ.</p>.<p>ವಿಶ್ವ ಹಿಂದೂ ಪರಿಷತ್ನ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್ವೆಲ್ ನೇತೃತ್ವದ ನಿಯೋಗವು ವಿಜಯೇಂದ್ರ ಅವರನ್ನು ಗುರುವಾರ ಭೇಟಿ ಮಾಡಿ, ಮನವಿ ಸಲ್ಲಿಸಿದೆ. ಬಜರಂಗದಳದ ಪ್ರಾಂತ ಸಂಯೋಜಕ ಕೆ.ಆರ್. ಸುನಿಲ್, ವಿಭಾಗ ಸಂಯೋಜಕರಾದ ಗೋವರ್ಧನ್ ಸಿಂಗ್ ಮತ್ತು ಶಿವಕುಮಾರ್ ನಿಯೋಗದಲ್ಲಿದ್ದರು.</p>.<p>‘ಹಿಂದುತ್ವದ ಪರವಾಗಿ ಮಾತನಾಡಬೇಕಿರುವ ವಿರೋಧ ಪಕ್ಷದ ನಾಯಕರ ಈಗಿನ ಹೇಳಿಕೆಯಿಂದ ಹಿಂದುತ್ವ ಪರ ಕಾರ್ಯಕರ್ತರ ಮನಸ್ಸಿಗೆ ನೋವಾಗಿದೆ. ಬಜರಂಗದಳ ಕಾರ್ಯಕರ್ತರನ್ನು ಗೂಂಡಾಗಳಿಗೆ ಹೋಲಿಸಿ, ಅವರ ವಿರುದ್ಧ ಪ್ರಕರಣ ದಾಖಲಿಸಿದ್ದಲ್ಲದೇ ಈಗ ಸಮರ್ಥನೆ ಮಾಡಿಕೊಳ್ಳುತ್ತಿರುವುದು ಖಂಡನೀಯ’ ಎಂದು ವಿಶ್ವ ಹಿಂದೂ ಪರಿಷತ್ ಹೇಳಿದೆ.</p>.<p>ಈ ವಿಷಯವನ್ನು ಪಕ್ಷದ ಹಿರಿಯರು, ಶಾಸಕರು ಮತ್ತು ನಾಯಕರ ಗಮನಕ್ಕೆ ತರಬೇಕು. ಅಶೋಕ ಅವರನ್ನು ವಿರೋಧ ಪಕ್ಷದ ನಾಯಕನ ಸ್ಥಾನದಿಂದ ತೆಗೆದು ಹಾಕಬೇಕು. ಬಜರಂಗದಳದ ವಿರುದ್ಧ ಹೇಳಿಕೆ ನೀಡಿರುವುದಕ್ಕೆ ಅವರು ಬಹಿರಂಗ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>