<p><strong>ಬೆಂಗಳೂರು: </strong>ಮನುಕುಲ ಎದುರಿಸುತ್ತಿರುವ ಹವಾಮಾನ ಬದಲಾವಣೆ, ಕೃಷಿ, ಆರೋಗ್ಯ ಮತ್ತು ಔಷಧ ಕ್ಷೇತ್ರಗಳಲ್ಲಿನ ಸವಾಲುಗಳಿಗೆ ಪರಿಹಾರ ಕಂಡುಕೊಳ್ಳಲು ಹೆಚ್ಚಿನ ಸಂಶೋಧನೆಗಳನ್ನು ನಡೆಸಬೇಕು ಎಂದು ಉಪರಾಷ್ಟ್ರಪತಿ ಎಂ.ವೆಂಕಯ್ಯನಾಯ್ಡು ಅವರು ವಿಜ್ಞಾನಿಗಳಿಗೆ ಸಲಹೆ ನೀಡಿದರು.</p>.<p>ನಗರದ ಜವಾಹರಲಾಲ್ ನೆಹರು ಮುಂದುವರಿದ ವೈಜ್ಞಾನಿಕ ಸಂಶೋಧನಾ ಕೇಂದ್ರದಲ್ಲಿ (ಜೆಎನ್ಸಿಎಎಸ್ಆರ್) ನಾವೀನ್ಯತೆ ಮತ್ತು ಅಭಿವೃದ್ಧಿ ಕೇಂದ್ರದ ಶಿಲಾನ್ಯಾಸ ನೆರವೇರಿಸಿ ಅವರು ಮಾತನಾಡಿದರು.</p>.<p>ವಿಜ್ಞಾನಿಗಳು ತಮ್ಮ ಕ್ಷೇತ್ರದಲ್ಲಿ ಶ್ರೇಷ್ಠತೆಯನ್ನು ಸಾಧಿಸುವುದರ ಜತೆಗೆ ಜನರ ಜೀವನ ಸುಧಾರಣೆ ಮಾಡುವ ನಿಟ್ಟಿನಲ್ಲಿ ಹೊಸ ಆವಿಷ್ಕಾರಗಳಲ್ಲಿ ತೊಡಗಿಸಿಕೊಳ್ಳಬೇಕು. ಜನರ ಜೀವನವು ಸಂತಸ, ಆರೋಗ್ಯ ಮತ್ತು ಸುಗಮಗೊಳಿಸುವುದು ವಿಜ್ಞಾನದ ಪರಮ ಉದ್ದೇಶವಾಗಿದೆ ಎಂದು ಹೇಳಿದರು.</p>.<p>ವೈಜ್ಞಾನಿಕ ಸಂಶೋಧನೆಗಳು ಅಂತಿಮವಾಗಿ ಸಮಾಜ ಅಗತ್ಯಕ್ಕೆ ಪೂರಕವಾಗಿರಬೇಕು. ಈ ನಿಟ್ಟಿನಲ್ಲಿ ಸಂಶೋಧನೆಗಳು ಜನೋಪಯೋಗಿ ಬಳಕೆಗಾಗಿ ಪರಿವರ್ತನೆಗೊಳ್ಳುವುದು ಅವಶ್ಯ. ಜೆಎನ್ಸಿಎಎಸ್ಆರ್ ದೇಶಿ ಸಂಶೋಧನೆಯನ್ನು ಆಧರಿಸಿ ಹಲವು ನವೋದ್ಯಮಗಳ ಸ್ಥಾಪನೆಗೆ ಕಾರಣವಾಗಿರುವುದು ಮತ್ತು 300 ಪೇಟೆಂಟ್ಗಳನ್ನು ಪಡೆದಿರುವುದು ಹೆಮ್ಮೆಪಡುವ ವಿಚಾರ ಎಂದು ಅವರು ಶ್ಲಾಘಿಸಿದರು.</p>.<p>ವಿಜ್ಞಾನದಲ್ಲಿನ ಹೊಸ ಕ್ಷೇತ್ರಗಳಾದ ಸಿಂಥೆಟಿಕ್ ಬಯಾಲಜಿ, ಕಂಪ್ಯುಟೇಷನಲ್ ಬಯಾಲಜಿ, ಹೈ ಪರ್ಫಾಮೆನ್ಸ್ ಎಂಜಿನಿಯರಿಂಗ್ ಮೆಟಿರಿಯಲ್, ಆರ್ಟಿಫಿಷಿಯಲ್ಇಂಟೆಲಿಜೆನ್ಸ್ಗಳ ಮೇಲೆ ಹೆಚ್ಚಿನ ಸಂಶೋಧನೆ ನಡೆಸಬೇಕು ಎಂದು ಅವರು ಜೆಎನ್ಸಿಎಎಸ್ಆರ್ ವಿಜ್ಞಾನಿಗಳಿಗೆ ಸಲಹೆ ನೀಡಿದರು.</p>.<p>ದೇಶದಲ್ಲಿ ಒಟ್ಟು ಜನಸಂಖ್ಯೆಯಲ್ಲಿ ಶೇ 65 ರಷ್ಟು ಮಂದಿ 25 ವರ್ಷ ವಯಸ್ಸಿಗಿಂತ ಕಡಿಮೆ ಪ್ರಾಯದವರಿದ್ದಾರೆ. ಅವರಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸುವುದರ ಜತೆಗೆ, ಅವರಲ್ಲಿ ಹುದುಗಿರುವ ಪ್ರತಿಭೆಯನ್ನು ಹೊರಗೆ ತರುವ ಪ್ರಯತ್ನ ಮಾಡಬೇಕು ಎಂದು ನಾಯ್ಡು ಹೇಳಿದರು.</p>.<p>ಬೆಂಗಳೂರು ಒಂದು ಕಾಲಕ್ಕೆ ಅತಿ ಹೆಚ್ಚು ಕೆರೆ– ಕುಂಟೆಗಳನ್ನು ಹೊಂದಿದ್ದ ನಗರವಾಗಿತ್ತು. ಒತ್ತುವರಿ ಮತ್ತು ಇತರ ಕಾರಣಗಳಿಂದ ಸಾಕಷ್ಟು ಕೆರೆಗಳು ಕಣ್ಮರೆಯಾಗಿವೆ. ಈಗ ಉಳಿದಿರುವ ಕೆರೆಗಳನ್ನು ಸ್ವಚ್ಛವಾಗಿ ಮತ್ತು ಶುದ್ಧವಾಗಿ ಇಟ್ಟುಕೊಳ್ಳುವ ಕೆಲಸ ಆಗಬೇಕು. ಕ್ರಿಯಾಶೀಲರಾಗಿರುವ ಹೊಸ ಮುಖ್ಯಮಂತ್ರಿಯವರು ಈ ಬಗ್ಗೆ ಗಮನಹರಿಸುತ್ತಾರೆ ಎಂದು ತಿಳಿಸಿದರು.</p>.<p>ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರಚಂದ್ ಗೆಹಲೋತ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಜ್ಞಾನಿ ಸಿ.ಎನ್.ಆರ್.ರಾವ್ ಇದ್ದರು.</p>.<p class="Briefhead"><strong>ಕನ್ನಡದಲ್ಲಿ ಮಾತನಾಡಿದ ವೆಂಕಯ್ಯನಾಯ್ಡು</strong></p>.<p>ವೆಂಕಯ್ಯನಾಯ್ಡು ಅವರು ಕಾರ್ಯಕ್ರಮದ ಮೊದಲ ಐದು ನಿಮಿಷಗಳು ಕನ್ನಡದಲ್ಲಿ ಮಾತನಾಡಿದರು. ನೆರೆದಿದ್ದ ಗಣ್ಯರು ಮತ್ತು ಸಂಸ್ಥೆಯ ಬಗ್ಗೆ ಕನ್ನಡದಲ್ಲಿ ತಮ್ಮ ಭಾವನೆ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಮನುಕುಲ ಎದುರಿಸುತ್ತಿರುವ ಹವಾಮಾನ ಬದಲಾವಣೆ, ಕೃಷಿ, ಆರೋಗ್ಯ ಮತ್ತು ಔಷಧ ಕ್ಷೇತ್ರಗಳಲ್ಲಿನ ಸವಾಲುಗಳಿಗೆ ಪರಿಹಾರ ಕಂಡುಕೊಳ್ಳಲು ಹೆಚ್ಚಿನ ಸಂಶೋಧನೆಗಳನ್ನು ನಡೆಸಬೇಕು ಎಂದು ಉಪರಾಷ್ಟ್ರಪತಿ ಎಂ.ವೆಂಕಯ್ಯನಾಯ್ಡು ಅವರು ವಿಜ್ಞಾನಿಗಳಿಗೆ ಸಲಹೆ ನೀಡಿದರು.</p>.<p>ನಗರದ ಜವಾಹರಲಾಲ್ ನೆಹರು ಮುಂದುವರಿದ ವೈಜ್ಞಾನಿಕ ಸಂಶೋಧನಾ ಕೇಂದ್ರದಲ್ಲಿ (ಜೆಎನ್ಸಿಎಎಸ್ಆರ್) ನಾವೀನ್ಯತೆ ಮತ್ತು ಅಭಿವೃದ್ಧಿ ಕೇಂದ್ರದ ಶಿಲಾನ್ಯಾಸ ನೆರವೇರಿಸಿ ಅವರು ಮಾತನಾಡಿದರು.</p>.<p>ವಿಜ್ಞಾನಿಗಳು ತಮ್ಮ ಕ್ಷೇತ್ರದಲ್ಲಿ ಶ್ರೇಷ್ಠತೆಯನ್ನು ಸಾಧಿಸುವುದರ ಜತೆಗೆ ಜನರ ಜೀವನ ಸುಧಾರಣೆ ಮಾಡುವ ನಿಟ್ಟಿನಲ್ಲಿ ಹೊಸ ಆವಿಷ್ಕಾರಗಳಲ್ಲಿ ತೊಡಗಿಸಿಕೊಳ್ಳಬೇಕು. ಜನರ ಜೀವನವು ಸಂತಸ, ಆರೋಗ್ಯ ಮತ್ತು ಸುಗಮಗೊಳಿಸುವುದು ವಿಜ್ಞಾನದ ಪರಮ ಉದ್ದೇಶವಾಗಿದೆ ಎಂದು ಹೇಳಿದರು.</p>.<p>ವೈಜ್ಞಾನಿಕ ಸಂಶೋಧನೆಗಳು ಅಂತಿಮವಾಗಿ ಸಮಾಜ ಅಗತ್ಯಕ್ಕೆ ಪೂರಕವಾಗಿರಬೇಕು. ಈ ನಿಟ್ಟಿನಲ್ಲಿ ಸಂಶೋಧನೆಗಳು ಜನೋಪಯೋಗಿ ಬಳಕೆಗಾಗಿ ಪರಿವರ್ತನೆಗೊಳ್ಳುವುದು ಅವಶ್ಯ. ಜೆಎನ್ಸಿಎಎಸ್ಆರ್ ದೇಶಿ ಸಂಶೋಧನೆಯನ್ನು ಆಧರಿಸಿ ಹಲವು ನವೋದ್ಯಮಗಳ ಸ್ಥಾಪನೆಗೆ ಕಾರಣವಾಗಿರುವುದು ಮತ್ತು 300 ಪೇಟೆಂಟ್ಗಳನ್ನು ಪಡೆದಿರುವುದು ಹೆಮ್ಮೆಪಡುವ ವಿಚಾರ ಎಂದು ಅವರು ಶ್ಲಾಘಿಸಿದರು.</p>.<p>ವಿಜ್ಞಾನದಲ್ಲಿನ ಹೊಸ ಕ್ಷೇತ್ರಗಳಾದ ಸಿಂಥೆಟಿಕ್ ಬಯಾಲಜಿ, ಕಂಪ್ಯುಟೇಷನಲ್ ಬಯಾಲಜಿ, ಹೈ ಪರ್ಫಾಮೆನ್ಸ್ ಎಂಜಿನಿಯರಿಂಗ್ ಮೆಟಿರಿಯಲ್, ಆರ್ಟಿಫಿಷಿಯಲ್ಇಂಟೆಲಿಜೆನ್ಸ್ಗಳ ಮೇಲೆ ಹೆಚ್ಚಿನ ಸಂಶೋಧನೆ ನಡೆಸಬೇಕು ಎಂದು ಅವರು ಜೆಎನ್ಸಿಎಎಸ್ಆರ್ ವಿಜ್ಞಾನಿಗಳಿಗೆ ಸಲಹೆ ನೀಡಿದರು.</p>.<p>ದೇಶದಲ್ಲಿ ಒಟ್ಟು ಜನಸಂಖ್ಯೆಯಲ್ಲಿ ಶೇ 65 ರಷ್ಟು ಮಂದಿ 25 ವರ್ಷ ವಯಸ್ಸಿಗಿಂತ ಕಡಿಮೆ ಪ್ರಾಯದವರಿದ್ದಾರೆ. ಅವರಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸುವುದರ ಜತೆಗೆ, ಅವರಲ್ಲಿ ಹುದುಗಿರುವ ಪ್ರತಿಭೆಯನ್ನು ಹೊರಗೆ ತರುವ ಪ್ರಯತ್ನ ಮಾಡಬೇಕು ಎಂದು ನಾಯ್ಡು ಹೇಳಿದರು.</p>.<p>ಬೆಂಗಳೂರು ಒಂದು ಕಾಲಕ್ಕೆ ಅತಿ ಹೆಚ್ಚು ಕೆರೆ– ಕುಂಟೆಗಳನ್ನು ಹೊಂದಿದ್ದ ನಗರವಾಗಿತ್ತು. ಒತ್ತುವರಿ ಮತ್ತು ಇತರ ಕಾರಣಗಳಿಂದ ಸಾಕಷ್ಟು ಕೆರೆಗಳು ಕಣ್ಮರೆಯಾಗಿವೆ. ಈಗ ಉಳಿದಿರುವ ಕೆರೆಗಳನ್ನು ಸ್ವಚ್ಛವಾಗಿ ಮತ್ತು ಶುದ್ಧವಾಗಿ ಇಟ್ಟುಕೊಳ್ಳುವ ಕೆಲಸ ಆಗಬೇಕು. ಕ್ರಿಯಾಶೀಲರಾಗಿರುವ ಹೊಸ ಮುಖ್ಯಮಂತ್ರಿಯವರು ಈ ಬಗ್ಗೆ ಗಮನಹರಿಸುತ್ತಾರೆ ಎಂದು ತಿಳಿಸಿದರು.</p>.<p>ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರಚಂದ್ ಗೆಹಲೋತ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಜ್ಞಾನಿ ಸಿ.ಎನ್.ಆರ್.ರಾವ್ ಇದ್ದರು.</p>.<p class="Briefhead"><strong>ಕನ್ನಡದಲ್ಲಿ ಮಾತನಾಡಿದ ವೆಂಕಯ್ಯನಾಯ್ಡು</strong></p>.<p>ವೆಂಕಯ್ಯನಾಯ್ಡು ಅವರು ಕಾರ್ಯಕ್ರಮದ ಮೊದಲ ಐದು ನಿಮಿಷಗಳು ಕನ್ನಡದಲ್ಲಿ ಮಾತನಾಡಿದರು. ನೆರೆದಿದ್ದ ಗಣ್ಯರು ಮತ್ತು ಸಂಸ್ಥೆಯ ಬಗ್ಗೆ ಕನ್ನಡದಲ್ಲಿ ತಮ್ಮ ಭಾವನೆ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>