ಈ ಹಿಂದಿನ ಹಲವರ ಆಯ್ಕೆಗಳು ಪಕ್ಷಕ್ಕೆ ಯಾವುದೇ ರೀತಿಯಲ್ಲಿ ಪ್ರಯೋಜನ ಆಗಲಿಲ್ಲ ಎಂಬುದು ಮನವರಿಕೆಯಾಗಿದೆ. ಇತರ ಪಕ್ಷಗಳಿಂದ ಬಂದವರಿಗೆ ಹಿಂದು–ಮುಂದು ನೋಡದೇ ಅವಕಾಶ ನೀಡಲಾಯಿತು. ಆದರೆ, ಅವರು ತಮ್ಮ ಅವಧಿ ಮುಗಿಯುತ್ತಿದ್ದಂತೆ ಗಂಟುಮೂಟೆ ಕಟ್ಟಿಕೊಂಡು ಕಾಂಗ್ರೆಸ್ಗೆ ಹೋದರು. ಇನ್ನು ಮುಂದೆ ಆ ರೀತಿ ಆಗದಂತೆ ಎಚ್ಚರಿಕೆ ವಹಿಸಬೇಕು ಎಂದು ತೇಜಸ್ವಿನಿ ಮತ್ತು ಕೆ.ಪಿ.ನಂಜುಂಡಿ ಅವರನ್ನು ಉಲ್ಲೇಖಿಸಿ ಪಕ್ಷದಲ್ಲಿ ಚರ್ಚೆ ನಡೆಯಿತು ಎಂದು ಮೂಲಗಳು ತಿಳಿಸಿವೆ.