<p><strong>ಬೆಳಗಾವಿ:</strong> ‘ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲಲೇಬೇಕಾದ್ದರಿಂದ ಗೋಕಾಕ ತಾಲ್ಲೂಕಿನಲ್ಲಿ ನಾನು ಏಜೆಂಟ್, ಕ್ಲರ್ಕ್, ಸಹಾಯಕ ಆಗಲು ಸಿದ್ಧನಿದ್ದೇನೆ. ಅವರನ್ನಷ್ಟೆ (ಪ್ರತಿಸ್ಪರ್ಧಿಗಳು) ಬಿಟ್ಟರೆ ಕಷ್ಟವಾಗುತ್ತದೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿಶನಿವಾರ ಹೇಳಿದರು.</p>.<p>ಗೋಕಾಕದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಈ ಚುನಾವಣೆಯಲ್ಲಿ ಗೋಕಾಕ ಹಾಗೂ ಅರಭಾವಿಯಲ್ಲಿ ಶೇ 30ರಷ್ಟು ಮತಗಳು ನಮಗೆ ಬರಲಿವೆ. ನಮ್ಮ ಬೆಂಬಲಿಗರೇ 60ರಿಂದ 70 ಮತದಾರರಿದ್ದಾರೆ’ ಎಂದು ತಿಳಿಸಿದರು.</p>.<p>‘ನಾನು ಗೋಕಾಕ ತಾಲ್ಲೂಕಿನ ಗುಜನಾಳ ಮತಗಟ್ಟೆ ಏಜೆಂಟ್ ಆಗುತ್ತೇನೆ. ಮುಖಂಡ ಅಶೋಕ ಪೂಜಾರಿ ಅವರನ್ನು ಮಮದಾಪುರಕ್ಕೆ ಹಾಕಿದ್ದೇವೆ. ಅವರು ಅಧಿಕೃತವಾಗಿ ಕಾಂಗ್ರೆಸ್ ಸೇರಿಲ್ಲವಾದರೂ ಏಜೆಂಟ್ ಆಗುವುದಕ್ಕೆ ತೊಂದರೆ ಇಲ್ಲ. ಚುನಾವಣೆ ಆದ ಮೇಲೆ ಪಕ್ಷ ಸೇರಲಿದ್ದಾರೆ’ ಎಂದು ಸ್ಪಷ್ಟಪಡಿಸಿದರು.</p>.<p>‘ಪುತ್ರ, ಪುತ್ರಿಯನ್ನೂ ಏಜೆಂಟ್ ಮಾಡುತ್ತೇವೆ. ಪ್ರತಿ ಪಂಚಾಯಿತಿಗೂ ಇಬ್ಬರನ್ನು ನಿಯೋಜಿಸಲಾಗುವುದು. ಉಪಾಹಾರ, ಊಟ ಎರಡನ್ನೂ ಪಂಚಾಯಿತಿ ಮುಂದೆಯೇ ಅವರಿಗೆ ನೀಡಲಾಗುವುದು. ಮತಪೆಟ್ಟಿಗೆ ಸೀಲ್ ಆಗುವವರೆಗೂ ಅಲ್ಲಿಯೇ ಇದ್ದು ಕಣ್ಣಿಡಲಿದ್ದಾರೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ‘ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲಲೇಬೇಕಾದ್ದರಿಂದ ಗೋಕಾಕ ತಾಲ್ಲೂಕಿನಲ್ಲಿ ನಾನು ಏಜೆಂಟ್, ಕ್ಲರ್ಕ್, ಸಹಾಯಕ ಆಗಲು ಸಿದ್ಧನಿದ್ದೇನೆ. ಅವರನ್ನಷ್ಟೆ (ಪ್ರತಿಸ್ಪರ್ಧಿಗಳು) ಬಿಟ್ಟರೆ ಕಷ್ಟವಾಗುತ್ತದೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿಶನಿವಾರ ಹೇಳಿದರು.</p>.<p>ಗೋಕಾಕದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಈ ಚುನಾವಣೆಯಲ್ಲಿ ಗೋಕಾಕ ಹಾಗೂ ಅರಭಾವಿಯಲ್ಲಿ ಶೇ 30ರಷ್ಟು ಮತಗಳು ನಮಗೆ ಬರಲಿವೆ. ನಮ್ಮ ಬೆಂಬಲಿಗರೇ 60ರಿಂದ 70 ಮತದಾರರಿದ್ದಾರೆ’ ಎಂದು ತಿಳಿಸಿದರು.</p>.<p>‘ನಾನು ಗೋಕಾಕ ತಾಲ್ಲೂಕಿನ ಗುಜನಾಳ ಮತಗಟ್ಟೆ ಏಜೆಂಟ್ ಆಗುತ್ತೇನೆ. ಮುಖಂಡ ಅಶೋಕ ಪೂಜಾರಿ ಅವರನ್ನು ಮಮದಾಪುರಕ್ಕೆ ಹಾಕಿದ್ದೇವೆ. ಅವರು ಅಧಿಕೃತವಾಗಿ ಕಾಂಗ್ರೆಸ್ ಸೇರಿಲ್ಲವಾದರೂ ಏಜೆಂಟ್ ಆಗುವುದಕ್ಕೆ ತೊಂದರೆ ಇಲ್ಲ. ಚುನಾವಣೆ ಆದ ಮೇಲೆ ಪಕ್ಷ ಸೇರಲಿದ್ದಾರೆ’ ಎಂದು ಸ್ಪಷ್ಟಪಡಿಸಿದರು.</p>.<p>‘ಪುತ್ರ, ಪುತ್ರಿಯನ್ನೂ ಏಜೆಂಟ್ ಮಾಡುತ್ತೇವೆ. ಪ್ರತಿ ಪಂಚಾಯಿತಿಗೂ ಇಬ್ಬರನ್ನು ನಿಯೋಜಿಸಲಾಗುವುದು. ಉಪಾಹಾರ, ಊಟ ಎರಡನ್ನೂ ಪಂಚಾಯಿತಿ ಮುಂದೆಯೇ ಅವರಿಗೆ ನೀಡಲಾಗುವುದು. ಮತಪೆಟ್ಟಿಗೆ ಸೀಲ್ ಆಗುವವರೆಗೂ ಅಲ್ಲಿಯೇ ಇದ್ದು ಕಣ್ಣಿಡಲಿದ್ದಾರೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>