‘ಕೋಲಾರ– ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಕ್ಷೇತ್ರಗಳಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ನಡುವೆ ನೇರ ಹಣಾಹಣಿ ಇದೆ. ಈ ಕ್ಷೇತ್ರಗಳಲ್ಲಿ ಬಿಜೆಪಿ ಬೆಂಬಲಿತ ಮತದಾರರು ಕಡಿಮೆ ಸಂಖ್ಯೆಯಲ್ಲಿದ್ದಾರೆ. ಇಲ್ಲಿ ಬಿಜೆಪಿಯು ಜೆಡಿಎಸ್ ಅಭ್ಯರ್ಥಿಗಳನ್ನು ಬೆಂಬಲಿಸುವುದಾಗಿ ನಿರ್ಣಯಿಸಿದರೆ, ಅದಕ್ಕೆ ಪ್ರತಿಯಾಗಿ ಮೈಸೂರಿನ ದ್ವಿಸದಸ್ಯ ಕ್ಷೇತ್ರದ ಎರಡೂ ಸ್ಥಾನಗಳಲ್ಲಿ ಬಿಜೆಪಿ ಅಭ್ಯರ್ಥಿಗಳಿಗೆ ಜೆಡಿಎಸ್ ಮತದಾರರು ಬೆಂಬಲ ಸೂಚಿಸುವ ತೀರ್ಮಾನಕ್ಕೆ ಬರಲು ಜೆಡಿಎಸ್ತಯಾರಿದೆ’ ಎಂದು ಆ ಪಕ್ಷದಮೂಲಗಳು ಹೇಳಿವೆ. ಬಹಿರಂಗವಾಗಿ ಬೆಂಬಲ ಘೋಷಿಸುವ ಸಾಧ್ಯತೆ ಕಡಿಮೆ. ಬೆಂಬಲಿತ ಅಭ್ಯರ್ಥಿಗಳಿಗೆ ಮತ ಹಾಕುವಂತೆ ಸಂದೇಶವನ್ನಷ್ಟೇ ರವಾನಿಸುವ ಲೆಕ್ಕಾಚಾರ ನಡೆದಿದೆ.