<p>ಬೆಂಗಳೂರು: ‘ವಿಧಾನ ಮಂಡಲದ ಸಚಿವಾಲಯಗಳಿಗೆ ಆರ್ಥಿಕ ಸ್ವಾಯತ್ತತೆ ನೀಡಬೇಕೆಂಬ ಬಗ್ಗೆ ಮುಖ್ಯಮಂತ್ರಿ ಜತೆ ಶೀಘ್ರ ಚರ್ಚಿಸಲು ನಿರ್ಧರಿಸಿದ್ದೇನೆ’ ಎಂದು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿಭಾನುವಾರ ತಿಳಿಸಿದರು.</p>.<p>ಸುದ್ದಿಗೋಷ್ಠಿಯಲ್ಲಿ ಅವರು, ‘ಎಲ್ಲ ರಾಜ್ಯಗಳ ವಿಧಾನ ಮಂಡಲ ಸಚಿವಾಲಯಗಳಿಗೆ ಆರ್ಥಿಕ ಸ್ವಾಯತ್ತತೆ ಕುರಿತಂತೆ ನ. 17ಮತ್ತು 18ರಂದು ಹಿಮಾಚಲ ಪ್ರದೇಶದಲ್ಲಿ ನಡೆದ ಪೀಠಾಸೀನಾಧಿಕಾರಿಗಳ ಸಮ್ಮೇಳನದಲ್ಲಿ ನಿರ್ಣಯ ಸ್ವೀಕರಿಸಲಾಗಿದೆ’ ಎಂದರು.</p>.<p>‘ಶಾಸಕಾಂಗದ ಘನತೆ-ಗೌರವ ಕಾಪಾಡುವುದೂ ಮುಖ್ಯ. ಬಜೆಟ್ ಬಳಿಕ ಹೆಚ್ಚುವರಿ ಅನುದಾನಕ್ಕೆ ಇಲಾಖೆಗಳಂತೆ ಶಾಸಕಾಂಗವು ಆರ್ಥಿಕ ಇಲಾಖೆಗೆ ಅಂಗಲಾಚುವುದು ಸರಿಯಲ್ಲ. ಈ ಕಾರಣಕ್ಕೆ ಆರ್ಥಿಕ ಸ್ವಾಯತ್ತತೆ ಅಗತ್ಯವಾಗಿದೆ’ ಎಂದು ಪ್ರತಿಪಾದಿಸಿದರು.</p>.<p>‘ಸಂಸತ್ನ ಮಾದರಿಯನ್ನು ಪಾಲಿಸಲು ಪೀಠಾಸೀನಾಧಿಕಾರಿಗಳ ಸಮಾವೇಶದಲ್ಲಿ ನಿರ್ಣಯ ತೆಗೆದುಕೊಂಡ ತಕ್ಷಣ, ಹಿಮಾಚಲಪ್ರದೇಶ ಸರ್ಕಾರ ಒಪ್ಪಿದೆ. ರಾಜ್ಯ ಸರ್ಕಾರ ಕೂಡ ಸಮ್ಮತಿಸುವ ವಿಶ್ವಾಸವಿದೆ’ ಎಂದರು.</p>.<p class="Subhead">ಶಾಸಕರಿಗೆ ತರಬೇತಿ: ಸಾಮರ್ಥ್ಯ ವೃದ್ಧಿ, ವ್ಯವಸ್ಥೆಯ ಕುರಿತು ಹೊಸ ಶಾಸಕರಿಗೆ ತರಬೇತಿ ಕಡ್ಡಾಯಗೊಳಿಸಲು ಸಮಾವೇಶದಲ್ಲಿ ನಿರ್ಣಯ ಅಂಗೀಕರಿಸಲಾಗಿದೆ ಎಂದು ಅವರು ಹೇಳಿದರು.</p>.<p class="Subhead">ವರದಿ ಸಲ್ಲಿಕೆ: ‘ಪಕ್ಷಾಂತರ ನಿಷೇಧ ಕಾಯ್ದೆ (ಪರಿಚ್ಛೇದ 10) ಬಲವರ್ಧನೆ ಮತ್ತು ವಿಧಾನಸಭಾಧ್ಯಕ್ಷರ ಕಾರ್ಯವ್ಯಾಪ್ತಿಯ ಸ್ಪಷ್ಟತೆ ಕುರಿತು ಲೋಕಸಭಾಧ್ಯಕ್ಷ ಓಂ ಬಿರ್ಲಾ ಅವರಿಗೆ ವರದಿ ಸಲ್ಲಿಸಲಾಗಿದೆ’ ಎಂದು ಕಾಗೇರಿ ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ‘ವಿಧಾನ ಮಂಡಲದ ಸಚಿವಾಲಯಗಳಿಗೆ ಆರ್ಥಿಕ ಸ್ವಾಯತ್ತತೆ ನೀಡಬೇಕೆಂಬ ಬಗ್ಗೆ ಮುಖ್ಯಮಂತ್ರಿ ಜತೆ ಶೀಘ್ರ ಚರ್ಚಿಸಲು ನಿರ್ಧರಿಸಿದ್ದೇನೆ’ ಎಂದು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿಭಾನುವಾರ ತಿಳಿಸಿದರು.</p>.<p>ಸುದ್ದಿಗೋಷ್ಠಿಯಲ್ಲಿ ಅವರು, ‘ಎಲ್ಲ ರಾಜ್ಯಗಳ ವಿಧಾನ ಮಂಡಲ ಸಚಿವಾಲಯಗಳಿಗೆ ಆರ್ಥಿಕ ಸ್ವಾಯತ್ತತೆ ಕುರಿತಂತೆ ನ. 17ಮತ್ತು 18ರಂದು ಹಿಮಾಚಲ ಪ್ರದೇಶದಲ್ಲಿ ನಡೆದ ಪೀಠಾಸೀನಾಧಿಕಾರಿಗಳ ಸಮ್ಮೇಳನದಲ್ಲಿ ನಿರ್ಣಯ ಸ್ವೀಕರಿಸಲಾಗಿದೆ’ ಎಂದರು.</p>.<p>‘ಶಾಸಕಾಂಗದ ಘನತೆ-ಗೌರವ ಕಾಪಾಡುವುದೂ ಮುಖ್ಯ. ಬಜೆಟ್ ಬಳಿಕ ಹೆಚ್ಚುವರಿ ಅನುದಾನಕ್ಕೆ ಇಲಾಖೆಗಳಂತೆ ಶಾಸಕಾಂಗವು ಆರ್ಥಿಕ ಇಲಾಖೆಗೆ ಅಂಗಲಾಚುವುದು ಸರಿಯಲ್ಲ. ಈ ಕಾರಣಕ್ಕೆ ಆರ್ಥಿಕ ಸ್ವಾಯತ್ತತೆ ಅಗತ್ಯವಾಗಿದೆ’ ಎಂದು ಪ್ರತಿಪಾದಿಸಿದರು.</p>.<p>‘ಸಂಸತ್ನ ಮಾದರಿಯನ್ನು ಪಾಲಿಸಲು ಪೀಠಾಸೀನಾಧಿಕಾರಿಗಳ ಸಮಾವೇಶದಲ್ಲಿ ನಿರ್ಣಯ ತೆಗೆದುಕೊಂಡ ತಕ್ಷಣ, ಹಿಮಾಚಲಪ್ರದೇಶ ಸರ್ಕಾರ ಒಪ್ಪಿದೆ. ರಾಜ್ಯ ಸರ್ಕಾರ ಕೂಡ ಸಮ್ಮತಿಸುವ ವಿಶ್ವಾಸವಿದೆ’ ಎಂದರು.</p>.<p class="Subhead">ಶಾಸಕರಿಗೆ ತರಬೇತಿ: ಸಾಮರ್ಥ್ಯ ವೃದ್ಧಿ, ವ್ಯವಸ್ಥೆಯ ಕುರಿತು ಹೊಸ ಶಾಸಕರಿಗೆ ತರಬೇತಿ ಕಡ್ಡಾಯಗೊಳಿಸಲು ಸಮಾವೇಶದಲ್ಲಿ ನಿರ್ಣಯ ಅಂಗೀಕರಿಸಲಾಗಿದೆ ಎಂದು ಅವರು ಹೇಳಿದರು.</p>.<p class="Subhead">ವರದಿ ಸಲ್ಲಿಕೆ: ‘ಪಕ್ಷಾಂತರ ನಿಷೇಧ ಕಾಯ್ದೆ (ಪರಿಚ್ಛೇದ 10) ಬಲವರ್ಧನೆ ಮತ್ತು ವಿಧಾನಸಭಾಧ್ಯಕ್ಷರ ಕಾರ್ಯವ್ಯಾಪ್ತಿಯ ಸ್ಪಷ್ಟತೆ ಕುರಿತು ಲೋಕಸಭಾಧ್ಯಕ್ಷ ಓಂ ಬಿರ್ಲಾ ಅವರಿಗೆ ವರದಿ ಸಲ್ಲಿಸಲಾಗಿದೆ’ ಎಂದು ಕಾಗೇರಿ ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>