<p><strong>ಚಿಕ್ಕಬಳ್ಳಾಪುರ:</strong>‘ವಿಧಾನ ಪರಿಷತ್ ಚುನಾವಣೆಯಲ್ಲಿ ಯಾರಿಗೆ ಬೆಂಬಲ ಕೊಡಬೇಕು ಎನ್ನುವ ಬಗ್ಗೆ ಮುಂದಿನ ದಿನಗಳಲ್ಲಿ ನಿರ್ಧರಿಸುತ್ತೇವೆ’ ಎಂದುಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ತಿಳಿಸಿದರು.</p>.<p>ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪರಿಷತ್ ಚುನಾವಣೆಯ ಆರು ಕ್ಷೇತ್ರಗಳಲ್ಲಿ ಜೆಡಿಎಸ್ ಸ್ಪರ್ಧಿಸಿದೆ. ಉಳಿದ ಕ್ಷೇತ್ರಗಳಲ್ಲಿ ಯಾವ ಪಕ್ಷವನ್ನು ಗೆಲ್ಲಿಸಬೇಕು ಎನ್ನುವ ನಿರ್ಣಾಯಕ ಪಾತ್ರ ವಹಿಸುವ ಶಕ್ತಿ ಜೆಡಿಎಸ್ಗೆ ಇದೆ ಎಂದರು.</p>.<p>‘ಕಾಂಗ್ರೆಸ್ ಮತ್ತು ಬಿಜೆಪಿ ಸಖ್ಯ ಮಾಡಿಯೇ ನಾವು ಹಾಳಾಗಿದ್ದೇವೆ. ನಮಗೆ ಯಾರ ಸಹವಾಸವೂ ಬೇಡ. 2023ರ ವಿಧಾನಸಭಾ ಚುನಾವಣೆಯಲ್ಲಿ 123 ಸ್ಥಾನ ಗೆಲ್ಲಬೇಕು ಎನ್ನುವುದು ನಮ್ಮ ಗುರಿ. ಆ ಆಧಾರದಲ್ಲಿ ಎಲ್ಲಿ ಯಾವ ತೀರ್ಮಾನಗಳನ್ನು ಕೈಗೊಳ್ಳಬೇಕೊ ಆ ರೀತಿಯಲ್ಲಿ ತೀರ್ಮಾನಗಳನ್ನು ಕೈಗೊಳ್ಳುತ್ತೇವೆ’ ಎಂದು ಹೇಳಿದರು</p>.<p>‘ಅಭಿವೃದ್ಧಿಯಿಂದಲೇಚುನಾವಣೆಯಲ್ಲಿ ಗೆಲ್ಲಲು ಸಾಧ್ಯವಿಲ್ಲ. ಬಿಜೆಪಿಯವರು ಆಪರೇಷನ್ ಕಮಲ ಮಾಡಿ ಗೆಲುವು ಸಾಧಿಸಿದರು. ಸಿಂದಗಿ ಉಪ ಚುನಾವಣೆಯ ವೇಳೆ ದೇವೇಗೌಡರು ನೀರಾವರಿ ವ್ಯವಸ್ಥೆ ಮಾಡಿದ್ದರಿಂದಲೇ ಅನ್ನ ತಿನ್ನುತ್ತಿದ್ದೇವೆ ಎಂದು ಅಲ್ಲಿನ ಜನರು ಹೇಳಿದರು. ಆ ಕ್ಷೇತ್ರದ 22 ಸಾವಿರ ಕುಟುಂಬಗಳ ಸಾಲ ಮನ್ನಾ ಮಾಡಿದ್ದೇನೆ. ಹೀಗಿದ್ದರೂ ನಮ್ಮ ಪಕ್ಷದ ಅಭ್ಯರ್ಥಿ ಪಡೆದಿದ್ದು 4 ಸಾವಿರ ಮತಗಳು’ ಎಂದು ಹೇಳಿದರು.</p>.<p>‘ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಳೆಯಿಂದ 5 ಲಕ್ಷ ಹೆಕ್ಟೇರ್ ಬೆಳೆ ಹಾನಿ ಆಗಿದೆ ಎಂದರೆ, ಕೃಷಿ ಸಚಿವರು 10 ಲಕ್ಷ ಹೆಕ್ಟೇರ್ ಎನ್ನುತ್ತಾರೆ. ಇವರಿಬ್ಬರಿಗೆ ವರದಿ ಕೊಟ್ಟವರು ಯಾರು? ಸಚಿವರು ಮತ್ತು ಮುಖ್ಯಮಂತ್ರಿ ನಡುವೆ ಹೊಂದಾಣಿಕೆಯೇ ಇಲ್ಲ’ ಎಂದು ಟೀಕಿಸಿದರು.</p>.<p>‘ಮಳೆಯಿಂದ ರೈತರ ಬೆಳೆಗಳು ಹಾನಿಗೆ ಒಳಗಾಗಿವೆ.ರೈತರಿಗೆ ಹಣ ಕೊಡಬೇಕಾದರೆ ಅಧಿಕಾರಿಗಳು, ಜನಪ್ರತಿನಿಧಿಗಳಿಗೆ ಹೊಟ್ಟೆನೋವು ಬರುತ್ತದೆ. ಮಾರ್ಗಸೂಚಿ ನೆಪದಲ್ಲಿ ರೈತರ ಬದುಕನ್ನು ಹಾಳು ಮಾಡಬೇಡಿ ಎಂದು ಸರ್ಕಾರಕ್ಕೆ ಹೇಳುತ್ತೇನೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ:</strong>‘ವಿಧಾನ ಪರಿಷತ್ ಚುನಾವಣೆಯಲ್ಲಿ ಯಾರಿಗೆ ಬೆಂಬಲ ಕೊಡಬೇಕು ಎನ್ನುವ ಬಗ್ಗೆ ಮುಂದಿನ ದಿನಗಳಲ್ಲಿ ನಿರ್ಧರಿಸುತ್ತೇವೆ’ ಎಂದುಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ತಿಳಿಸಿದರು.</p>.<p>ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪರಿಷತ್ ಚುನಾವಣೆಯ ಆರು ಕ್ಷೇತ್ರಗಳಲ್ಲಿ ಜೆಡಿಎಸ್ ಸ್ಪರ್ಧಿಸಿದೆ. ಉಳಿದ ಕ್ಷೇತ್ರಗಳಲ್ಲಿ ಯಾವ ಪಕ್ಷವನ್ನು ಗೆಲ್ಲಿಸಬೇಕು ಎನ್ನುವ ನಿರ್ಣಾಯಕ ಪಾತ್ರ ವಹಿಸುವ ಶಕ್ತಿ ಜೆಡಿಎಸ್ಗೆ ಇದೆ ಎಂದರು.</p>.<p>‘ಕಾಂಗ್ರೆಸ್ ಮತ್ತು ಬಿಜೆಪಿ ಸಖ್ಯ ಮಾಡಿಯೇ ನಾವು ಹಾಳಾಗಿದ್ದೇವೆ. ನಮಗೆ ಯಾರ ಸಹವಾಸವೂ ಬೇಡ. 2023ರ ವಿಧಾನಸಭಾ ಚುನಾವಣೆಯಲ್ಲಿ 123 ಸ್ಥಾನ ಗೆಲ್ಲಬೇಕು ಎನ್ನುವುದು ನಮ್ಮ ಗುರಿ. ಆ ಆಧಾರದಲ್ಲಿ ಎಲ್ಲಿ ಯಾವ ತೀರ್ಮಾನಗಳನ್ನು ಕೈಗೊಳ್ಳಬೇಕೊ ಆ ರೀತಿಯಲ್ಲಿ ತೀರ್ಮಾನಗಳನ್ನು ಕೈಗೊಳ್ಳುತ್ತೇವೆ’ ಎಂದು ಹೇಳಿದರು</p>.<p>‘ಅಭಿವೃದ್ಧಿಯಿಂದಲೇಚುನಾವಣೆಯಲ್ಲಿ ಗೆಲ್ಲಲು ಸಾಧ್ಯವಿಲ್ಲ. ಬಿಜೆಪಿಯವರು ಆಪರೇಷನ್ ಕಮಲ ಮಾಡಿ ಗೆಲುವು ಸಾಧಿಸಿದರು. ಸಿಂದಗಿ ಉಪ ಚುನಾವಣೆಯ ವೇಳೆ ದೇವೇಗೌಡರು ನೀರಾವರಿ ವ್ಯವಸ್ಥೆ ಮಾಡಿದ್ದರಿಂದಲೇ ಅನ್ನ ತಿನ್ನುತ್ತಿದ್ದೇವೆ ಎಂದು ಅಲ್ಲಿನ ಜನರು ಹೇಳಿದರು. ಆ ಕ್ಷೇತ್ರದ 22 ಸಾವಿರ ಕುಟುಂಬಗಳ ಸಾಲ ಮನ್ನಾ ಮಾಡಿದ್ದೇನೆ. ಹೀಗಿದ್ದರೂ ನಮ್ಮ ಪಕ್ಷದ ಅಭ್ಯರ್ಥಿ ಪಡೆದಿದ್ದು 4 ಸಾವಿರ ಮತಗಳು’ ಎಂದು ಹೇಳಿದರು.</p>.<p>‘ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಳೆಯಿಂದ 5 ಲಕ್ಷ ಹೆಕ್ಟೇರ್ ಬೆಳೆ ಹಾನಿ ಆಗಿದೆ ಎಂದರೆ, ಕೃಷಿ ಸಚಿವರು 10 ಲಕ್ಷ ಹೆಕ್ಟೇರ್ ಎನ್ನುತ್ತಾರೆ. ಇವರಿಬ್ಬರಿಗೆ ವರದಿ ಕೊಟ್ಟವರು ಯಾರು? ಸಚಿವರು ಮತ್ತು ಮುಖ್ಯಮಂತ್ರಿ ನಡುವೆ ಹೊಂದಾಣಿಕೆಯೇ ಇಲ್ಲ’ ಎಂದು ಟೀಕಿಸಿದರು.</p>.<p>‘ಮಳೆಯಿಂದ ರೈತರ ಬೆಳೆಗಳು ಹಾನಿಗೆ ಒಳಗಾಗಿವೆ.ರೈತರಿಗೆ ಹಣ ಕೊಡಬೇಕಾದರೆ ಅಧಿಕಾರಿಗಳು, ಜನಪ್ರತಿನಿಧಿಗಳಿಗೆ ಹೊಟ್ಟೆನೋವು ಬರುತ್ತದೆ. ಮಾರ್ಗಸೂಚಿ ನೆಪದಲ್ಲಿ ರೈತರ ಬದುಕನ್ನು ಹಾಳು ಮಾಡಬೇಡಿ ಎಂದು ಸರ್ಕಾರಕ್ಕೆ ಹೇಳುತ್ತೇನೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>