ನಂತರ ಮಾತು ಮುಂದುವರಿಸಿದ ಹರಿಪ್ರಸಾದ್, ಡಬಲ್ ಎಂಜಿನ್ ಸರ್ಕಾರವಿದ್ದರೂ, ತಾರತಮ್ಯ ಎದ್ದುಕಾಣುತ್ತಿದೆ. ₹ 1,91,573 ಕೋಟಿ ಜಿಎಸ್ಟಿ ಸಂಗ್ರಹವಾಗಿದ್ದು, ರಾಜ್ಯಕ್ಕೆ ಶೇ 42ರಷ್ಟು ವಾಪಸ್ ನೀಡಬೇಕು. ಆದರೆ, ಸಿಕ್ಕಿರುವುದು ₹ 29 ಸಾವಿರ ಕೋಟಿ ಮಾತ್ರ. ಇತರೆ ರಾಜ್ಯಗಳಿಗೆ ಸಾಕಷ್ಟು ನೆರವು ನೀಡಿರುವ ಕೇಂದ್ರ ಸರ್ಕಾರ, ರಾಜ್ಯದ ವಿಷಯದಲ್ಲಿ ತಾರತಮ್ಯ ಮಾಡುತ್ತಿದೆ. ಇಂತಹ ಸ್ಥಿತಿಯಲ್ಲಿ ಹಣಕಾಸಿನ ನಿರ್ವಹಣೆ ಹೇಗೆ ಮಾಡುತ್ತಾರೆ ಎನ್ನುವ ಕುರಿತು ಸ್ಪಷ್ಟತೆಯೇ ಇಲ್ಲ ಎಂದರು.