ಬೆಂಗಳೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ನಾಲ್ಕು ವರ್ಷಗಳ ಹಿಂದೆಯೇ ರದ್ದುಗೊಂಡಿದ್ದ 313 ನಿಲಯ ಪಾಲಕರ (ಹಾಸ್ಟೆಲ್ ವಾರ್ಡನ್) ಹುದ್ದೆಗಳಿಗೆ ನಿಯಮಬಾಹಿರವಾಗಿ ಬಡ್ತಿ ನೀಡಿದ್ದ ಪ್ರಕರಣ ಸರ್ಕಾರದ ಕಾರ್ಯವೈಖರಿಗೆ ಸಾಕ್ಷಿ. ‘ಪ್ರಜಾವಾಣಿ’ ವರದಿ, ಸಂಪಾದಕೀಯಕ್ಕೂ ಸರ್ಕಾರ ಎಚ್ಚೆತ್ತುಕೊಳ್ಳಲಿಲ್ಲ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.