ಶನಿವಾರ, 6 ಡಿಸೆಂಬರ್ 2025
×
ADVERTISEMENT
ADVERTISEMENT

ವಿಧಾನಸಭೆ | ಸಚಿವಾಲಯದ ಎಡವಟ್ಟು: 8 ಮಂದಿ ಹುದ್ದೆಗೆ ಕುತ್ತು

Published : 5 ಡಿಸೆಂಬರ್ 2025, 23:30 IST
Last Updated : 5 ಡಿಸೆಂಬರ್ 2025, 23:54 IST
ಫಾಲೋ ಮಾಡಿ
Comments
‘ನಮ್ಮನ್ನು ಉಳಿಸಿಕೊಳ್ಳಿ’
‘ಸಚಿವಾಲಯ ಮಾಡಿದ ತಪ್ಪಿಗೆ ನಾವು ಬಲಿ ಆಗಿದ್ದೇವೆ. ವಿಧಾನಸಭಾಧ್ಯಕ್ಷ ಯು.ಟಿ. ಖಾದರ್‌ ಅವರ ಮನೆಗೆ ಹೋಗಿ ಕಾಲಿಗೆ ಬಿದ್ದು ಹುದ್ದೆಯಲ್ಲಿಯೇ ಉಳಿಸಿಕೊಳ್ಳುವಂತೆ ಬೇಡಿಕೊಂಡಿದ್ದೇವೆ. ಕಾರ್ಯದರ್ಶಿ ಎಂ.ಕೆ. ವಿಶಾಲಾಕ್ಷಿ ಅವರಿಗೂ ಮನವಿ ಮಾಡಿದ್ದೇವೆ. ಹೈಕೋರ್ಟ್‌ ಆದೇಶದಂತೆ ಹುದ್ದೆ ಕಳೆದುಕೊಂಡಿದ್ದೀರಿ ಎಂದು ಅವರು ಸಬೂಬು ಹೇಳುತ್ತಿದ್ದಾರೆ. ನಾವೂ ಹೈಕೋರ್ಟ್‌ಗೆ ಹೋಗಿರುವುದರಿಂದ ಅಂತಿಮ ಆದೇಶ ಬರಲಿ, ಆ ಮೇಲೆ ನೋಡೋಣ ಎನ್ನುತ್ತಿದ್ದಾರೆ’ ಎಂದು ಕೆಲಸ ಕಳೆದುಕೊಳ್ಳುವ ಆತಂಕದಲ್ಲಿರುವ ಅಭ್ಯರ್ಥಿಯೊಬ್ಬರು ಅಳಲು ತೋಡಿಕೊಂಡರು.
ಸ್ವೀಪರ್‌ ಹುದ್ದೆಗೆ ಕುತ್ತು
ಎರಡು ಸ್ವೀಪರ್‌ ಹುದ್ದೆಗಳ ಪೈಕಿ, ಪರಿಶಿಷ್ಟ ಜಾತಿ ಮತ್ತು ಸಾಮಾನ್ಯ ವರ್ಗಕ್ಕೆ ತಲಾ ಒಂದರಂತೆ ಮೀಸಲಿರಿಸಲಾಗಿತ್ತು. ಆಯ್ಕೆಗಾಗಿ ನಡೆದ ಸಂದರ್ಶನದಲ್ಲಿ ಎಸ್‌. ಶೇಖರ್‌ 18.50 ಅಂಕ, ಪ್ರಶಾಂತ್ 19 ಅಂಕ ಗಳಿಸಿದ್ದರು. ಸಾಮಾನ್ಯ ಅರ್ಹತೆಯಡಿ ಪ್ರಶಾಂತ್‌ ಆಯ್ಕೆಯಾಗಿದ್ದರು. ಎಸ್‌ಸಿ ಮೀಸಲಾತಿಯಡಿ 21.50 ಅಂಕ ಗಳಿಸಿದ್ದ ತಿರುಪತಿ ಆಯ್ಕೆಯಾಗಿ|ದ್ದರು. ಆದರೆ, 2018ರ ನಿಯಮದ ಪ್ರಕಾರ, ಅತೀ ಹೆಚ್ಚು ಅಂಕ ಗಳಿಸಿದ ತಿರುಪತಿ ಸಾಮಾನ್ಯ ವರ್ಗದಲ್ಲಿ ಆಯ್ಕೆಯಾಗಿ, ಎಸ್‌ಸಿ ಮೀಸಲಾತಿಯಡಿ ಅತೀ ಹೆಚ್ಚು ಅಂಕ ಪಡೆದಿದ್ದ ಶೇಖರ್‌ ಆಯ್ಕೆ ಆಗಬೇಕಿತ್ತು. ಹೈಕೋರ್ಟ್ ಆದೇಶದಂತೆ ಸಚಿವಾಲಯ ಪಟ್ಟಿಯನ್ನು ಪರಿಷ್ಕರಿಸಿದ್ದು, ಪ್ರಶಾಂತ್‌ ಹೊಸ ಪಟ್ಟಿಯಲ್ಲಿ ಹೊರಗುಳಿದು, ಶೇಖರ್‌ ಆಯ್ಕೆಯಾಗಿದ್ದಾರೆ. ಪ್ರಶಾಂತ್‌ ಅವರೂ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT