<p><strong>ಬೆಂಗಳೂರು:</strong> ವಿಧಾನಸೌಧದಲ್ಲಿ ಸಚಿವರೊಬ್ಬರ ಕಚೇರಿ ಬಳಿ ಚಿನ್ನಾಭರಣ ಕಳ್ಳತನ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಿದ್ದು, ಚಿನ್ನಾಭರಣ ಅಲ್ಲಿಗೆ ಹೇಗೆ ತರಲಾಯಿತು ಎಂಬುದನ್ನು ಪತ್ತೆ ಹಚ್ಚಲು ತನಿಖೆಗೆ ಆದೇಶಿಸಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ ಅವರು ತಿಳಿಸಿದರು.</p>.<p>ಸಿಸಿಟಿವಿ ದೃಶ್ಯಾವಳಿಯನ್ನು ಆಧರಿಸಿ ‘ಡಿ’ ದರ್ಜೆ ನೌಕರರನ್ನು ಬಂಧಿಸಲಾಗಿದೆ ಎಂದು ಅವರು ಸುದ್ದಿಗಾರರ ಜತೆ ಮಾತನಾಡಿ ಹೇಳಿದರು.</p>.<p>‘ವಿಧಾನಸೌಧದ ಯಾವ ಗೇಟ್ನಿಂದ ಚಿನ್ನಾಭರಣ ಒಳಗೆ ಹೋಯಿತು. ಸಚಿವರ ಕಚೇರಿಗೆ ಬ್ಯಾಗ್ ಹೋಗುತ್ತದೆ ಎಂದರೆ ಅದನ್ನು ಪತ್ತೆ ಹಚ್ಚಬೇಕಲ್ಲವೇ? ಆದ ಕಾರಣ ತನಿಖೆ ಆದೇಶಿಸಲಾಗಿದೆ. ಸದ್ಯವೇ ವರದಿ ಕೈ ಸೇರಲಿದೆ. ವರದಿಯ ಆಧಾರದ ಮೇಲೆ ಕ್ರಮ ತೆಗೆದುಕೊಳ್ಳಲಾಗುವುದು’ ಎಂದು ಪರಮೇಶ್ವರ ತಿಳಿಸಿದರು.</p>.<p>ವಿಧಾನಸೌಧದಲ್ಲಿ ಸಚಿವರ ಕಚೇರಿ ಬಳಿ 300 ಗ್ರಾಂ ಚಿನ್ನಾಭರಣ ಕಳ್ಳತನ ನಡೆದ ವಿಚಾರಕ್ಕೆ ಸಂಬಂಧಿಸಿದಂತೆ ನವೀನ್ ಎಂಬುವವರು ದೂರು ನೀಡಿದ್ದರು. ಆ ದೂರನ್ನು ಆಧರಿಸಿ ಆಡಳಿತ ಸುಧಾರಣಾ ಮತ್ತು ಸಿಬ್ಬಂದಿ ಇಲಾಖೆಯ ಡಿ ದರ್ಜೆ ನೌಕರ ಆಂತೋಣಿ ಎಂಬುವವರನ್ನು ಬಂಧಿಸಿ ಚಿನ್ನಾಭರಣ ಮತ್ತು ₹ 1ಲಕ್ಷ ನಗದು ವಶಕ್ಕೆ ತೆಗೆದುಕೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ವಿಧಾನಸೌಧದಲ್ಲಿ ಸಚಿವರೊಬ್ಬರ ಕಚೇರಿ ಬಳಿ ಚಿನ್ನಾಭರಣ ಕಳ್ಳತನ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಿದ್ದು, ಚಿನ್ನಾಭರಣ ಅಲ್ಲಿಗೆ ಹೇಗೆ ತರಲಾಯಿತು ಎಂಬುದನ್ನು ಪತ್ತೆ ಹಚ್ಚಲು ತನಿಖೆಗೆ ಆದೇಶಿಸಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ ಅವರು ತಿಳಿಸಿದರು.</p>.<p>ಸಿಸಿಟಿವಿ ದೃಶ್ಯಾವಳಿಯನ್ನು ಆಧರಿಸಿ ‘ಡಿ’ ದರ್ಜೆ ನೌಕರರನ್ನು ಬಂಧಿಸಲಾಗಿದೆ ಎಂದು ಅವರು ಸುದ್ದಿಗಾರರ ಜತೆ ಮಾತನಾಡಿ ಹೇಳಿದರು.</p>.<p>‘ವಿಧಾನಸೌಧದ ಯಾವ ಗೇಟ್ನಿಂದ ಚಿನ್ನಾಭರಣ ಒಳಗೆ ಹೋಯಿತು. ಸಚಿವರ ಕಚೇರಿಗೆ ಬ್ಯಾಗ್ ಹೋಗುತ್ತದೆ ಎಂದರೆ ಅದನ್ನು ಪತ್ತೆ ಹಚ್ಚಬೇಕಲ್ಲವೇ? ಆದ ಕಾರಣ ತನಿಖೆ ಆದೇಶಿಸಲಾಗಿದೆ. ಸದ್ಯವೇ ವರದಿ ಕೈ ಸೇರಲಿದೆ. ವರದಿಯ ಆಧಾರದ ಮೇಲೆ ಕ್ರಮ ತೆಗೆದುಕೊಳ್ಳಲಾಗುವುದು’ ಎಂದು ಪರಮೇಶ್ವರ ತಿಳಿಸಿದರು.</p>.<p>ವಿಧಾನಸೌಧದಲ್ಲಿ ಸಚಿವರ ಕಚೇರಿ ಬಳಿ 300 ಗ್ರಾಂ ಚಿನ್ನಾಭರಣ ಕಳ್ಳತನ ನಡೆದ ವಿಚಾರಕ್ಕೆ ಸಂಬಂಧಿಸಿದಂತೆ ನವೀನ್ ಎಂಬುವವರು ದೂರು ನೀಡಿದ್ದರು. ಆ ದೂರನ್ನು ಆಧರಿಸಿ ಆಡಳಿತ ಸುಧಾರಣಾ ಮತ್ತು ಸಿಬ್ಬಂದಿ ಇಲಾಖೆಯ ಡಿ ದರ್ಜೆ ನೌಕರ ಆಂತೋಣಿ ಎಂಬುವವರನ್ನು ಬಂಧಿಸಿ ಚಿನ್ನಾಭರಣ ಮತ್ತು ₹ 1ಲಕ್ಷ ನಗದು ವಶಕ್ಕೆ ತೆಗೆದುಕೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>