57ರ ಹರೆಯದ ಕನ್ನಡಿಗ ಅಧಿಕಾರಿ ಬರ್ಮಿಂಗ್ಹ್ಯಾಂ ವಿಶ್ವವಿದ್ಯಾಲಯದಿಂದ ಎಂಬಿಎ ಪದವಿ ಪಡೆದಿದ್ದಾರೆ. 1983ರ ಬ್ಯಾಚ್ನ ಅಧಿಕಾರಿಯಾದ ಅವರು ಕೊಪ್ಪಳ ಉಪವಿಭಾಗಾಧಿಕಾರಿಯಾಗಿ ವೃತ್ತಿ ಆರಂಭಿಸಿದ್ದರು. ವಿಜಯಪುರ, ಮೈಸೂರು ಜಿಲ್ಲಾಧಿಕಾರಿಯಾಗಿದ್ದರು. ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ರಾಜ್ ಇಲಾಖೆ, ಅರಣ್ಯ ಇಲಾಖೆ, ನಗರಾಭಿವೃದ್ಧಿ ಇಲಾಖೆಗಳಲ್ಲಿ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿದ್ದರು. ಬಿಬಿಎಂಪಿ ಆಡಳಿತಾಧಿಕಾರಿ ಹಾಗೂ ಜಲಮಂಡಳಿ ಅಧ್ಯಕ್ಷರಾಗಿ ಕೆಲಸ ಮಾಡಿದ್ದರು.