<p><strong>ಬೆಂಗಳೂರು:</strong> ‘ವಿಜಯಪುರ ವಿಮಾನನಿಲ್ದಾಣ ಉದ್ಘಾಟನೆಗೆ ಇದ್ದ ಅಡೆತಡೆ ನಿವಾರಣೆಯಾಗಿದ್ದು, ಯುಗಾದಿ ವೇಳೆಗೆ ಕಾರ್ಯಾರಂಭ ಮಾಡುವ ವಿಶ್ವಾಸವಿದೆ’ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ.</p>.<p>ಸಾರ್ವಜನಿಕ ಮಹತ್ವದ ಯೋಜನೆಗಳಿಗೆ ಪೂರ್ವಾನ್ವಯವಾಗುವಂತೆ ಕೇಂದ್ರ ಪರಿಸರ ಮತ್ತು ಅರಣ್ಯ ಇಲಾಖೆ ಅನುಮೋದನೆಗಳನ್ನು ನೀಡಬಾರದು ಎಂದು ಸುಪ್ರೀಂ ಕೋರ್ಟ್ ಇದೇ ವರ್ಷದ ಮೇ ತಿಂಗಳಿನಲ್ಲಿ ನೀಡಿದ್ದ ಆದೇಶವನ್ನು ಹಿಂಪಡೆದಿದೆ. ಇದರಿಂದ ವಿಜಯಪುರ ವಿಮಾನನಿಲ್ದಾಣದ ಸಮಸ್ಯೆಗಳು ಮುಗಿದಿವೆ ಎಂದಿದ್ದಾರೆ. </p>.<p>‘ವಿಜಯಪುರ ವಿಮಾನ ನಿಲ್ದಾಣ ಉದ್ಘಾಟನೆಗೆ ಸಿದ್ಧವಾಗಿತ್ತು. ಪರಿಸರ ಸಂಬಂಧಿತ ಪ್ರಕರಣಗಳು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಕಾರಣ ಪ್ರಕ್ರಿಯೆಗಳು ಸ್ಥಗಿತವಾಗಿದ್ದವು. ಸುಪ್ರೀಂಕೋರ್ಟ್ ನಿರ್ಧಾರದಿಂದ ಒಂದು ಹೆಜ್ಜೆ ಮುಂದಕ್ಕೆ ಬಂದಿದ್ದೇವೆ. ಕಿತ್ತೂರು ಕರ್ನಾಟಕ ಭಾಗಕ್ಕೆ ನಿರಾಳತೆ ತಂದಿದೆ’ ಎಂದಿದ್ದಾರೆ.</p>.<p>‘ಸುಪ್ರೀಂ ಕೋರ್ಟ್ ಹಿಂದೆ ನೀಡಿದ್ದ ತೀರ್ಪಿನಿಂದ ವಿಮಾನನಿಲ್ದಾಣದ ಅಸ್ತಿತ್ವಕ್ಕೆ ಅಪಾಯ ಎದುರಾಗಿತ್ತು. ಆದರೆ, ಸಚಿವ ಎಂ.ಬಿ. ಪಾಟೀಲರು ಕಪಿಲ್ ಸಿಬಲ್ ಅವರಂಥ ಹಿರಿಯ ವಕೀಲರನ್ನು ನೇಮಿಸಿಕೊಳ್ಳುವ ಮೂಲಕ ನೆರವಾದರು’ ಎಂದು ವಿಜಯಪುರ ವ್ಯಾಪಾರಿಗಳ ಒಕ್ಕೂಟದ ಅಧ್ಯಕ್ಷ ರವೀಂದ್ರ ಬಿಜ್ಜರಗಿ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ವಿಜಯಪುರ ವಿಮಾನನಿಲ್ದಾಣ ಉದ್ಘಾಟನೆಗೆ ಇದ್ದ ಅಡೆತಡೆ ನಿವಾರಣೆಯಾಗಿದ್ದು, ಯುಗಾದಿ ವೇಳೆಗೆ ಕಾರ್ಯಾರಂಭ ಮಾಡುವ ವಿಶ್ವಾಸವಿದೆ’ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ.</p>.<p>ಸಾರ್ವಜನಿಕ ಮಹತ್ವದ ಯೋಜನೆಗಳಿಗೆ ಪೂರ್ವಾನ್ವಯವಾಗುವಂತೆ ಕೇಂದ್ರ ಪರಿಸರ ಮತ್ತು ಅರಣ್ಯ ಇಲಾಖೆ ಅನುಮೋದನೆಗಳನ್ನು ನೀಡಬಾರದು ಎಂದು ಸುಪ್ರೀಂ ಕೋರ್ಟ್ ಇದೇ ವರ್ಷದ ಮೇ ತಿಂಗಳಿನಲ್ಲಿ ನೀಡಿದ್ದ ಆದೇಶವನ್ನು ಹಿಂಪಡೆದಿದೆ. ಇದರಿಂದ ವಿಜಯಪುರ ವಿಮಾನನಿಲ್ದಾಣದ ಸಮಸ್ಯೆಗಳು ಮುಗಿದಿವೆ ಎಂದಿದ್ದಾರೆ. </p>.<p>‘ವಿಜಯಪುರ ವಿಮಾನ ನಿಲ್ದಾಣ ಉದ್ಘಾಟನೆಗೆ ಸಿದ್ಧವಾಗಿತ್ತು. ಪರಿಸರ ಸಂಬಂಧಿತ ಪ್ರಕರಣಗಳು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಕಾರಣ ಪ್ರಕ್ರಿಯೆಗಳು ಸ್ಥಗಿತವಾಗಿದ್ದವು. ಸುಪ್ರೀಂಕೋರ್ಟ್ ನಿರ್ಧಾರದಿಂದ ಒಂದು ಹೆಜ್ಜೆ ಮುಂದಕ್ಕೆ ಬಂದಿದ್ದೇವೆ. ಕಿತ್ತೂರು ಕರ್ನಾಟಕ ಭಾಗಕ್ಕೆ ನಿರಾಳತೆ ತಂದಿದೆ’ ಎಂದಿದ್ದಾರೆ.</p>.<p>‘ಸುಪ್ರೀಂ ಕೋರ್ಟ್ ಹಿಂದೆ ನೀಡಿದ್ದ ತೀರ್ಪಿನಿಂದ ವಿಮಾನನಿಲ್ದಾಣದ ಅಸ್ತಿತ್ವಕ್ಕೆ ಅಪಾಯ ಎದುರಾಗಿತ್ತು. ಆದರೆ, ಸಚಿವ ಎಂ.ಬಿ. ಪಾಟೀಲರು ಕಪಿಲ್ ಸಿಬಲ್ ಅವರಂಥ ಹಿರಿಯ ವಕೀಲರನ್ನು ನೇಮಿಸಿಕೊಳ್ಳುವ ಮೂಲಕ ನೆರವಾದರು’ ಎಂದು ವಿಜಯಪುರ ವ್ಯಾಪಾರಿಗಳ ಒಕ್ಕೂಟದ ಅಧ್ಯಕ್ಷ ರವೀಂದ್ರ ಬಿಜ್ಜರಗಿ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>