<p>ತಾವರಗೇರಾ: ‘ಲಿಂಗಾಯತ ಪಂಚಮಸಾಲಿ ಸಮಾಜವು ಕೃಷಿ ಚಟುವಟಿಕೆ ಆಧಾರಿತ ಕುಟುಂಬಗಳನ್ನು ಹೊಂದಿದೆ. ಬಡತನ, ನಿರುದ್ಯೋಗ, ಆರ್ಥಿಕ ಸಂಕಷ್ಟದಲ್ಲಿ ಜೀವನ ನಡೆಸುವರು.ಆದರೆ ಆಡಳಿತ ನಡೆಸಿರುವ ಎಲ್ಲಾ ಪಕ್ಷಗಳ ಸರ್ಕಾರಗಳು, ರಾಜಕಾರಣಿಗಳು ಬೇಜವಾಬ್ದಾರಿ ಮತ್ತು ರಾಜಕೀಯ ಲಾಭಕ್ಕಾಗಿ ರಾಜ್ಯದಲ್ಲಿ 2ಎ ಮೀಸಲಾತಿ, ಕೇಂದ್ರದಲ್ಲಿ ಒಬಿಸಿ ಮೀಸಲಾತಿ ಹೋರಾಟಕ್ಕೆ ಸಹಕಾರ ನೀಡುತ್ತಿಲ್ಲ’ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.</p>.<p>ಸಮೀಪದ ಸುಕ್ಷೇತ್ರ ಎಂ. ಗುಡದೂರು ಗ್ರಾಮದಲ್ಲಿ ಬುಧವಾರ ನಡೆದ ವೀರರಾಣಿ ಕಿತ್ತೂರು ಚನ್ನಮ್ಮ ವೃತ್ತ ಹಾಗೂ ಪುತ್ಥಳಿ ಅನಾವರಣ ಕಾರ್ಯಕ್ರಮದಲ್ಲಿ ಕಿತ್ತೂರು ರಾಣಿ ಚನ್ನಮ್ಮನ ಪುತ್ಥಳಿ ಅನಾವರಣಗೊಳಿಸಿ ಅವರು ಮಾತನಾಡಿದರು.</p>.<p>‘ಪಂಚಮಸಾಲಿ ಸಮಾಜದ ಮಕ್ಕಳ ಭವಿಷ್ಯಕ್ಕಾಗಿ ನಾವು ಮತ್ತೊಬ್ಬರ ಮೀಸಲಾತಿ ಕಸಿದುಕೊಳ್ಳುವ ಕೆಲಸ ಮಾಡುತ್ತಿಲ್ಲ’ ಎಂದರು.</p>.<p>‘ಕಿತ್ತೂರ ರಾಣಿ ಚನ್ನಮ್ಮನವರು ಎಲ್ಲಾ ಸಮುದಾಯದ ಸಹಕಾರದೊಂದಿಗೆ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಆಡಳಿತ ಮತ್ತು ಬ್ರಿಟಿಷರ ವಿರುದ್ಧ ಹೋರಾಟ ಮಾಡಿ ವೀರ ಮರಣ ಹೊಂದಿದ್ದಾರೆ. ಅದರಂತೆ ಜಾತಿ, ಧರ್ಮ ಬಿಟ್ಟು ಎಲ್ಲಾ ಸಮಾಜದೊಂದಿಗೆ ಒಳ್ಳೆಯ ಬಾಂಧವ್ಯ ಹೊಂದಬೇಕು. ಅದರಂತೆ ಚನ್ನಮ್ಮನವರ ಆದರ್ಶ ಗುಣಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು’ ಎಂದರು.</p>.<p>‘ನಮ್ಮ ಸಮಾಜದ ಒಬ್ಬ ಶಾಸಕ ಅಧಿವೇಶನದಲ್ಲಿ 2ಎ ಮೀಸಲಾತಿ ಕೇಳುವುದನ್ನು ಬಿಟ್ಟು ಐಪಿಎಲ್ ಕ್ರಿಕೆಟ್ ಪಂದ್ಯ ನೋಡಲು ಉಚಿತ ಟಿಕೆಟ್ ಕೇಳಿದರು. ಕೂಡಲ ಸಂಗಮ ಪೀಠದ ಟ್ರಸ್ಟ್ ತನ್ನ ಕುಟುಂಬಕ್ಕೆ ಸೀಮಿತಗೊಳಿಸಿಕೊಂಡರು. ಧನ ಸಹಾಯ ಮಾಡಿದ್ದ ಸಂಡೂರು ನಾಗನಗೌಡರನ್ನು ಟ್ರಸ್ಟ್ನಿಂದ ಹೊರಗೆ ಹಾಕಿದ್ದಾರೆ. ಈ ಕೆಲಸಗಳಿಂದ ಪಂಚಮಸಾಲಿ ಸಮಾಜಕ್ಕೆ ಅಪಮಾನವಾಗಿದೆ’ ಎಂದರು.</p>.<p>ಕುಷ್ಟಗಿ ಕ್ಷೇತ್ರದ ಶಾಸಕ ಹಾಗೂ ವಿಧಾನಸಭೆ ವಿಪಕ್ಷದ ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ ಮಾತನಾಡಿ, ‘ಶರಣರು ನೆಲಸಿರುವ ಎಂ ಗುಡದೂರು ಗ್ರಾಮದಲ್ಲಿ ವಿವಿಧ ಸಮುದಾಯಗಳ ಸಹಕಾರದಿಂದ ಕಿತ್ತೂರು ರಾಣಿ ಚನ್ನಮ್ಮ ಮೂರ್ತಿ ಪ್ರತಿಷ್ಠಾಪನೆ ಮಾಡಿರುವುದು ಸಂತಸದ ಸಂಗತಿಯಾಗಿದೆ’ ಎಂದರು.</p>.<p>ಮಾಜಿ ಸಂಸದ ಸಂಗಣ್ಣ ಕರಡಿ, ಮಾಜಿ ಸಚಿವ ಅಮರೇಗೌಡ ಪಾಟೀಲ ಬಯ್ಯಾಪುರ, ತುಂಗಭದ್ರಾ ಕಾಡಾ ನಿಗಮ ಅಧ್ಯಕ್ಷ ಹಸನಸಾಬ ದೋಟಿಹಾಳ, ಡಾ.ಬಸವರಾಜ ಕ್ಯಾವಟರ್, ಹಿರಿಯ ವಕೀಲ ಬಿ.ಎಸ್. ಪಾಟೀಲ, ಪ್ರಮುಖರು ಮಾತನಾಡಿದರು.</p>.<p>ಕೂಡಲ ಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಹಾಗೂ ನೆಲೋಗಿಯ ಸಿದ್ದಲಿಂಗ ಸ್ವಾಮೀಜಿ ಮಾತನಾಡಿದರು. ಪಂಚಮಸಾಲಿ ಸಮಾಜದ ಅಧ್ಯಕ್ಷ ದೇವೆಂದ್ರಪ್ಪ ಬಳೂಟಗಿ ಅಧ್ಯಕ್ಷತೆ ವಹಿಸಿದ್ದರು.</p>.<p>ಪಂಚಮಸಾಲಿ ಸಮಾಜದ ರಾಜ್ಯಾಧ್ಯಕ್ಷ ಸೋಮನಗೌಡ ಮಾಲಿಪಾಟೀಲ, ಚಂದ್ರು ನಾಲತವಾಡ, ಅಶೋಕ ಬಳೂಟಗಿ, ಬಸವರಾಜ ಹಳ್ಳೂರು, ಕೆ ಮಹೇಶ, ಸಿಪಿಐ ವಿಶ್ವನಾಥ ಹಿರೇಗೌಡ್ರ, ಪಿಎಸ್ಐ ಚಂದ್ರಪ್ಪ ಪ್ರಮುಖರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260508-35-2048946275</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತಾವರಗೇರಾ: ‘ಲಿಂಗಾಯತ ಪಂಚಮಸಾಲಿ ಸಮಾಜವು ಕೃಷಿ ಚಟುವಟಿಕೆ ಆಧಾರಿತ ಕುಟುಂಬಗಳನ್ನು ಹೊಂದಿದೆ. ಬಡತನ, ನಿರುದ್ಯೋಗ, ಆರ್ಥಿಕ ಸಂಕಷ್ಟದಲ್ಲಿ ಜೀವನ ನಡೆಸುವರು.ಆದರೆ ಆಡಳಿತ ನಡೆಸಿರುವ ಎಲ್ಲಾ ಪಕ್ಷಗಳ ಸರ್ಕಾರಗಳು, ರಾಜಕಾರಣಿಗಳು ಬೇಜವಾಬ್ದಾರಿ ಮತ್ತು ರಾಜಕೀಯ ಲಾಭಕ್ಕಾಗಿ ರಾಜ್ಯದಲ್ಲಿ 2ಎ ಮೀಸಲಾತಿ, ಕೇಂದ್ರದಲ್ಲಿ ಒಬಿಸಿ ಮೀಸಲಾತಿ ಹೋರಾಟಕ್ಕೆ ಸಹಕಾರ ನೀಡುತ್ತಿಲ್ಲ’ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.</p>.<p>ಸಮೀಪದ ಸುಕ್ಷೇತ್ರ ಎಂ. ಗುಡದೂರು ಗ್ರಾಮದಲ್ಲಿ ಬುಧವಾರ ನಡೆದ ವೀರರಾಣಿ ಕಿತ್ತೂರು ಚನ್ನಮ್ಮ ವೃತ್ತ ಹಾಗೂ ಪುತ್ಥಳಿ ಅನಾವರಣ ಕಾರ್ಯಕ್ರಮದಲ್ಲಿ ಕಿತ್ತೂರು ರಾಣಿ ಚನ್ನಮ್ಮನ ಪುತ್ಥಳಿ ಅನಾವರಣಗೊಳಿಸಿ ಅವರು ಮಾತನಾಡಿದರು.</p>.<p>‘ಪಂಚಮಸಾಲಿ ಸಮಾಜದ ಮಕ್ಕಳ ಭವಿಷ್ಯಕ್ಕಾಗಿ ನಾವು ಮತ್ತೊಬ್ಬರ ಮೀಸಲಾತಿ ಕಸಿದುಕೊಳ್ಳುವ ಕೆಲಸ ಮಾಡುತ್ತಿಲ್ಲ’ ಎಂದರು.</p>.<p>‘ಕಿತ್ತೂರ ರಾಣಿ ಚನ್ನಮ್ಮನವರು ಎಲ್ಲಾ ಸಮುದಾಯದ ಸಹಕಾರದೊಂದಿಗೆ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಆಡಳಿತ ಮತ್ತು ಬ್ರಿಟಿಷರ ವಿರುದ್ಧ ಹೋರಾಟ ಮಾಡಿ ವೀರ ಮರಣ ಹೊಂದಿದ್ದಾರೆ. ಅದರಂತೆ ಜಾತಿ, ಧರ್ಮ ಬಿಟ್ಟು ಎಲ್ಲಾ ಸಮಾಜದೊಂದಿಗೆ ಒಳ್ಳೆಯ ಬಾಂಧವ್ಯ ಹೊಂದಬೇಕು. ಅದರಂತೆ ಚನ್ನಮ್ಮನವರ ಆದರ್ಶ ಗುಣಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು’ ಎಂದರು.</p>.<p>‘ನಮ್ಮ ಸಮಾಜದ ಒಬ್ಬ ಶಾಸಕ ಅಧಿವೇಶನದಲ್ಲಿ 2ಎ ಮೀಸಲಾತಿ ಕೇಳುವುದನ್ನು ಬಿಟ್ಟು ಐಪಿಎಲ್ ಕ್ರಿಕೆಟ್ ಪಂದ್ಯ ನೋಡಲು ಉಚಿತ ಟಿಕೆಟ್ ಕೇಳಿದರು. ಕೂಡಲ ಸಂಗಮ ಪೀಠದ ಟ್ರಸ್ಟ್ ತನ್ನ ಕುಟುಂಬಕ್ಕೆ ಸೀಮಿತಗೊಳಿಸಿಕೊಂಡರು. ಧನ ಸಹಾಯ ಮಾಡಿದ್ದ ಸಂಡೂರು ನಾಗನಗೌಡರನ್ನು ಟ್ರಸ್ಟ್ನಿಂದ ಹೊರಗೆ ಹಾಕಿದ್ದಾರೆ. ಈ ಕೆಲಸಗಳಿಂದ ಪಂಚಮಸಾಲಿ ಸಮಾಜಕ್ಕೆ ಅಪಮಾನವಾಗಿದೆ’ ಎಂದರು.</p>.<p>ಕುಷ್ಟಗಿ ಕ್ಷೇತ್ರದ ಶಾಸಕ ಹಾಗೂ ವಿಧಾನಸಭೆ ವಿಪಕ್ಷದ ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ ಮಾತನಾಡಿ, ‘ಶರಣರು ನೆಲಸಿರುವ ಎಂ ಗುಡದೂರು ಗ್ರಾಮದಲ್ಲಿ ವಿವಿಧ ಸಮುದಾಯಗಳ ಸಹಕಾರದಿಂದ ಕಿತ್ತೂರು ರಾಣಿ ಚನ್ನಮ್ಮ ಮೂರ್ತಿ ಪ್ರತಿಷ್ಠಾಪನೆ ಮಾಡಿರುವುದು ಸಂತಸದ ಸಂಗತಿಯಾಗಿದೆ’ ಎಂದರು.</p>.<p>ಮಾಜಿ ಸಂಸದ ಸಂಗಣ್ಣ ಕರಡಿ, ಮಾಜಿ ಸಚಿವ ಅಮರೇಗೌಡ ಪಾಟೀಲ ಬಯ್ಯಾಪುರ, ತುಂಗಭದ್ರಾ ಕಾಡಾ ನಿಗಮ ಅಧ್ಯಕ್ಷ ಹಸನಸಾಬ ದೋಟಿಹಾಳ, ಡಾ.ಬಸವರಾಜ ಕ್ಯಾವಟರ್, ಹಿರಿಯ ವಕೀಲ ಬಿ.ಎಸ್. ಪಾಟೀಲ, ಪ್ರಮುಖರು ಮಾತನಾಡಿದರು.</p>.<p>ಕೂಡಲ ಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಹಾಗೂ ನೆಲೋಗಿಯ ಸಿದ್ದಲಿಂಗ ಸ್ವಾಮೀಜಿ ಮಾತನಾಡಿದರು. ಪಂಚಮಸಾಲಿ ಸಮಾಜದ ಅಧ್ಯಕ್ಷ ದೇವೆಂದ್ರಪ್ಪ ಬಳೂಟಗಿ ಅಧ್ಯಕ್ಷತೆ ವಹಿಸಿದ್ದರು.</p>.<p>ಪಂಚಮಸಾಲಿ ಸಮಾಜದ ರಾಜ್ಯಾಧ್ಯಕ್ಷ ಸೋಮನಗೌಡ ಮಾಲಿಪಾಟೀಲ, ಚಂದ್ರು ನಾಲತವಾಡ, ಅಶೋಕ ಬಳೂಟಗಿ, ಬಸವರಾಜ ಹಳ್ಳೂರು, ಕೆ ಮಹೇಶ, ಸಿಪಿಐ ವಿಶ್ವನಾಥ ಹಿರೇಗೌಡ್ರ, ಪಿಎಸ್ಐ ಚಂದ್ರಪ್ಪ ಪ್ರಮುಖರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260508-35-2048946275</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>