<p><strong>ಬೆಂಗಳೂರು:</strong> ‘ವಿಜಯಪುರ ಜಿಲ್ಲಾ ಕೇಂದ್ರದಲ್ಲಿ ಸರ್ಕಾರಿ–ಖಾಸಗಿ ಸಹಭಾಗಿತ್ವ (ಪಿಪಿಪಿ) ಮಾದರಿಯಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆ ಯೋಜನೆಯನ್ನು ಕೈಬಿಟ್ಟು, ಸರ್ಕಾರದಿಂದಲೇ ಕಾಲೇಜು ಸ್ಥಾಪಿಸಬೇಕು’ ಎಂದು ವಿಜಯಪುರ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನಾ ಹೋರಾಟ ಸಮಿತಿಯು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದೆ.</p>.<p>ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಅವರ ನೇತೃತ್ವದಲ್ಲಿ ಸಮಿತಿಯ ಮುಂದಾಳುಗಳಿದ್ದ ನಿಯೋಗವು ಮುಖ್ಯಮಂತ್ರಿ ಅವರನ್ನು ವಿಧಾನಸೌಧದಲ್ಲಿ ಬುಧವಾರ ಭೇಟಿ ಮಾಡಿ, ಮನವಿ ಸಲ್ಲಿಸಿತು. </p>.<p>‘ಪಿಪಿಪಿ ಮಾದರಿಯಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆ ಮಾಡಿದರೆ, ಜಿಲ್ಲಾಸ್ಪತ್ರೆಯ ಖಾಸಗೀಕರಣಕ್ಕೆ ದಾರಿಯಾಗುತ್ತದೆ. ಜಿಲ್ಲಾಸ್ಪತ್ರೆಯಲ್ಲಿ ಈಗಾಗಲೇ ಅತ್ಯಾಧುನಿಕ ಯಂತ್ರೋಪಕರಣಗಳು ಮತ್ತು ಆವರಣದಲ್ಲಿ 153 ಎಕರೆಯಷ್ಟು ಜಾಗವಿದೆ. ಕಾಲೇಜು ಸ್ಥಾಪನೆಯಲ್ಲಿ ಸರ್ಕಾರಕ್ಕೆ ಹೆಚ್ಚಿನ ಹೊರೆಯಾಗುವುದಿಲ್ಲ. ಹೀಗಾಗಿ ಪಿಪಿಪಿ ಮಾದರಿಯನ್ನು ಕೈಬಿಡಬೇಕು’ ಎಂದು ಸಮಿತಿಯು ಒತ್ತಾಯಿಸಿದೆ.</p>.<p>‘ಖಾಸಗಿ ಸಹಭಾಗಿತ್ವದಲ್ಲಿ ಕಾಲೇಜು ಆರಂಭಿಸಿದರೆ, ಸಾರ್ವಜನಿಕ ಆಸ್ತಿಗಳು ಖಾಸಗಿಯವರ ಪಾಲಾಗುವ ಅಪಾಯವಿದೆ. ಇದನ್ನು ತಪ್ಪಿಸಬೇಕು’ ಎಂದೂ ಸಮಿತಿಯು ಒತ್ತಾಯಿಸಿದೆ. ಸಮಿತಿಯ ಪರವಾಗಿ ಸಿದ್ದನಗೌಡ ಪಾಟೀಲ, ಲಲಿತಾ ಬಿಜ್ಜರಗಿ, ಅನಿಲ ಹೊಸಮನಿ, ಅಕ್ರಂ ಮಶಾಲ್ಕರ್, ಫಯಾಜ್ ಕಲಾದಗಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ವಿಜಯಪುರ ಜಿಲ್ಲಾ ಕೇಂದ್ರದಲ್ಲಿ ಸರ್ಕಾರಿ–ಖಾಸಗಿ ಸಹಭಾಗಿತ್ವ (ಪಿಪಿಪಿ) ಮಾದರಿಯಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆ ಯೋಜನೆಯನ್ನು ಕೈಬಿಟ್ಟು, ಸರ್ಕಾರದಿಂದಲೇ ಕಾಲೇಜು ಸ್ಥಾಪಿಸಬೇಕು’ ಎಂದು ವಿಜಯಪುರ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನಾ ಹೋರಾಟ ಸಮಿತಿಯು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದೆ.</p>.<p>ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಅವರ ನೇತೃತ್ವದಲ್ಲಿ ಸಮಿತಿಯ ಮುಂದಾಳುಗಳಿದ್ದ ನಿಯೋಗವು ಮುಖ್ಯಮಂತ್ರಿ ಅವರನ್ನು ವಿಧಾನಸೌಧದಲ್ಲಿ ಬುಧವಾರ ಭೇಟಿ ಮಾಡಿ, ಮನವಿ ಸಲ್ಲಿಸಿತು. </p>.<p>‘ಪಿಪಿಪಿ ಮಾದರಿಯಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆ ಮಾಡಿದರೆ, ಜಿಲ್ಲಾಸ್ಪತ್ರೆಯ ಖಾಸಗೀಕರಣಕ್ಕೆ ದಾರಿಯಾಗುತ್ತದೆ. ಜಿಲ್ಲಾಸ್ಪತ್ರೆಯಲ್ಲಿ ಈಗಾಗಲೇ ಅತ್ಯಾಧುನಿಕ ಯಂತ್ರೋಪಕರಣಗಳು ಮತ್ತು ಆವರಣದಲ್ಲಿ 153 ಎಕರೆಯಷ್ಟು ಜಾಗವಿದೆ. ಕಾಲೇಜು ಸ್ಥಾಪನೆಯಲ್ಲಿ ಸರ್ಕಾರಕ್ಕೆ ಹೆಚ್ಚಿನ ಹೊರೆಯಾಗುವುದಿಲ್ಲ. ಹೀಗಾಗಿ ಪಿಪಿಪಿ ಮಾದರಿಯನ್ನು ಕೈಬಿಡಬೇಕು’ ಎಂದು ಸಮಿತಿಯು ಒತ್ತಾಯಿಸಿದೆ.</p>.<p>‘ಖಾಸಗಿ ಸಹಭಾಗಿತ್ವದಲ್ಲಿ ಕಾಲೇಜು ಆರಂಭಿಸಿದರೆ, ಸಾರ್ವಜನಿಕ ಆಸ್ತಿಗಳು ಖಾಸಗಿಯವರ ಪಾಲಾಗುವ ಅಪಾಯವಿದೆ. ಇದನ್ನು ತಪ್ಪಿಸಬೇಕು’ ಎಂದೂ ಸಮಿತಿಯು ಒತ್ತಾಯಿಸಿದೆ. ಸಮಿತಿಯ ಪರವಾಗಿ ಸಿದ್ದನಗೌಡ ಪಾಟೀಲ, ಲಲಿತಾ ಬಿಜ್ಜರಗಿ, ಅನಿಲ ಹೊಸಮನಿ, ಅಕ್ರಂ ಮಶಾಲ್ಕರ್, ಫಯಾಜ್ ಕಲಾದಗಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>