<p><strong>ಬೆಂಗಳೂರು: ‘</strong>ಕಾಂಗ್ರೆಸ್ ಪಕ್ಷಕ್ಕೆ ಪರಿಶಿಷ್ಟ ಜಾತಿ, ಪಂಗಡಗಳ ಬಗ್ಗೆ ನಿಜವಾಗಿಯೂ ಕಾಳಜಿ ಇದ್ದರೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಪ್ರಧಾನಿ ಅಭ್ಯರ್ಥಿ ಎಂದು ಘೋಷಿಸಲಿ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಸವಾಲು ಹಾಕಿದ್ದಾರೆ.</p>.<p>ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸಿದ್ದರಾಮಯ್ಯ ಅವರಿಗೆ ಧೈರ್ಯ ಇದ್ದರೆ ಮಲ್ಲಿಕಾರ್ಜುನ ಖರ್ಗೆ ಅವರನ್ನು ಪ್ರಧಾನಿ ಅಭ್ಯರ್ಥಿ ಎಂದು ಘೋಷಿಸುವ ಸಾಹಸ ಮಾಡಲಿ. ರಾಹುಲ್ ಗಾಂಧಿ ಮತ್ತು ಸೋನಿಯಾಗಾಂಧಿ ಅವರು ಇದನ್ನೆಲ್ಲ ಒಪ್ಪುವುದಿಲ್ಲ’ ಎಂದು ಹೇಳಿದರು.</p>.<p>‘ಹಿಂದೆ ಬಿಜೆಪಿ ಕೇಂದ್ರದಲ್ಲಿ ಅಧಿಕಾರದಲ್ಲಿ ಇದ್ದಾಗ ಎ.ಪಿ.ಜೆ.ಅಬ್ದುಲ್ ಕಲಾಂ ಅವರನ್ನು, ನರೇಂದ್ರ ಮೋದಿ ಅವಧಿಯಲ್ಲಿ ರಾಮನಾಥ ಕೋವಿಂದ್ ಮತ್ತು ದ್ರೌಪದಿ ಮುರ್ಮು ಅವರನ್ನು ರಾಷ್ಟ್ರಪತಿಗಳನ್ನಾಗಿ ಮಾಡಿದೆ. ಬಿಜೆಪಿ ಆಡಳಿತದ 6 ರಾಜ್ಯಗಳಲ್ಲಿ ಪರಿಶಿಷ್ಟ ಪಂಗಡದವರು, 4 ರಾಜ್ಯಗಳಲ್ಲಿ ಹಿಂದುಳಿದ ವರ್ಗಕ್ಕೆ ಸೇರಿದವರು ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ’ ಎಂದು ಹೇಳಿದರು.</p>.<p>‘ಸಿದ್ದರಾಮಯ್ಯ ತಮ್ಮನ್ನು ತಾವು ಹಿಂದುಳಿದ ವರ್ಗಗಳ ಚಾಂಪಿಯನ್ ಎಂದು ಕರೆದುಕೊಳ್ಳುತ್ತಾರೆ. ಇತ್ತೀಚೆಗೆ ಕಾಂತರಾಜ ನೇತೃತ್ವದ ಆಯೋಗದ ವರದಿಯನ್ನು ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ಅಂಗೀಕರಿಸುವುದಾಗಿ ಬೊಗಳೆ ಹೊಡೆಯುತ್ತಿದ್ದ ಅವರು, ₹165 ಕೋಟಿ ಖರ್ಚು ಮಾಡಿ ಸಿದ್ದಪಡಿಸಿದ್ದ ವರದಿಯನ್ನು ರಾಹುಲ್ಗಾಂಧಿ ಆದೇಶ ಮಾಡಿದ್ದಾರೆಂದು ಕಸದ ಬುಟ್ಟಿಗೆ ಎಸೆಯಲಿಲ್ಲವೇ? ಆಗ ಹಿಂದುಳಿದವರ ಬಗೆಗಿನ ಕಾಳಜಿ ಎಲ್ಲಿ ಹೋಗಿತ್ತು’ ಎಂದು ವಿಜಯೇಂದ್ರ ಪ್ರಶ್ನಿಸಿದರು.</p>.<p>‘ಬಿಜೆಪಿ ಹಿಂದುಳಿದವರ ವಿರೋಧಿ, ಸಾಮಾಜಿಕ ನ್ಯಾಯದ ವಿರೋಧಿ ಎಂದು ಸುಳ್ಳು ಹೇಳುತ್ತಾ ಬಂದಿರುವ ಸಿದ್ದರಾಮಯ್ಯ ಅವರು ಹೈಕಮಾಂಡ್ ಸೂಚನೆ ಮೇರೆಗೆ ಕಾಂತರಾಜ ಆಯೋಗದ ವರದಿಯನ್ನು ಮೂಲೆಗೆ ಹಾಕಿದ್ದು ಏಕೆ? ಇವರಿಂದ ಹಿಂದುಳಿದವರಿಗೆ ನ್ಯಾಯ ಕೊಡಲು ಸಾಧ್ಯವೇ’ ಎಂದು ಪ್ರಶ್ನಿಸಿದರು.</p>.<p>‘ಹಿಂದುಳಿದ ವರ್ಗ, ಪರಿಶಿಷ್ಟ ಜಾತಿ, ಪಂಗಡಗಳನ್ನು, ಅಲ್ಪಸಂಖ್ಯಾತರನ್ನು ತಮ್ಮ ಮನೆಯಾಳುಗಳ ರೀತಿ ನೆಹರೂ–ಗಾಂಧಿ ಕುಟುಂಬ ನೋಡಿಕೊಂಡು ಬಂದಿದೆ. ಇಂಥ ಕಾಂಗ್ರೆಸ್ ಪಕ್ಷದಿಂದ ಹಿಂದುಳಿದ ವರ್ಗಕ್ಕೆ ನ್ಯಾಯ ಕೊಡಲು ಸಾಧ್ಯವೇ ಎಂದು ದೇಶದ ಮತ್ತು ರಾಜ್ಯದ ಜನರು ಕೇಳುತ್ತಿದ್ದಾರೆ’ ಎಂದರು.</p>.<p>‘ಕಾಂಗ್ರೆಸ್ ಪಕ್ಷದಲ್ಲಿ ಒಳಬೇಗುದಿ ಮುಂದುವರೆದಿದೆ. ಆಡಳಿತ ಪಕ್ಷದ ಶಾಸಕರು ಹತಾಶರಾಗಿದ್ದಾರೆ. ಯಾರ ಪರ ವಕಾಲತ್ತು ವಹಿಸಬೇಕು? ಸಿದ್ದರಾಮಯ್ಯ ಅವರ ಪರವೇ ಅಥವಾ ಡಿ.ಕೆ.ಶಿವಕುಮಾರ್ ಅವರ ಪರ ಇರಬೇಕೆ ಎಂಬ ಗೊಂದಲ ಶಾಸಕರಲ್ಲಿ ಮನೆ ಮಾಡಿದೆ. ಈ ಮಧ್ಯೆ ಕಾಂಗ್ರೆಸ್ ಪಕ್ಷದಲ್ಲಿ ಶಾಸಕರ ಖರೀದಿ ನಡೆಯುತ್ತಿರುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.</p>.<div><blockquote>ಡ್ರಗ್ ಮಾಫಿಯಾ ಕರ್ನಾಟಕಕ್ಕೆ ಹೊಸದಲ್ಲ. ಪ್ರಿಯಾಂಕ್ ಖರ್ಗೆ ಉಸ್ತುವಾರಿ ಸಚಿವರಾಗಿರುವ ಕಲಬುರಗಿ ಜಿಲ್ಲೆಯಲ್ಲಿ ಅದು ಗರಿಷ್ಠ ಪ್ರಮಾಣದಲ್ಲಿದೆ</blockquote><span class="attribution"> ಬಿ.ವೈ.ವಿಜಯೇಂದ್ರ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: ‘</strong>ಕಾಂಗ್ರೆಸ್ ಪಕ್ಷಕ್ಕೆ ಪರಿಶಿಷ್ಟ ಜಾತಿ, ಪಂಗಡಗಳ ಬಗ್ಗೆ ನಿಜವಾಗಿಯೂ ಕಾಳಜಿ ಇದ್ದರೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಪ್ರಧಾನಿ ಅಭ್ಯರ್ಥಿ ಎಂದು ಘೋಷಿಸಲಿ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಸವಾಲು ಹಾಕಿದ್ದಾರೆ.</p>.<p>ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸಿದ್ದರಾಮಯ್ಯ ಅವರಿಗೆ ಧೈರ್ಯ ಇದ್ದರೆ ಮಲ್ಲಿಕಾರ್ಜುನ ಖರ್ಗೆ ಅವರನ್ನು ಪ್ರಧಾನಿ ಅಭ್ಯರ್ಥಿ ಎಂದು ಘೋಷಿಸುವ ಸಾಹಸ ಮಾಡಲಿ. ರಾಹುಲ್ ಗಾಂಧಿ ಮತ್ತು ಸೋನಿಯಾಗಾಂಧಿ ಅವರು ಇದನ್ನೆಲ್ಲ ಒಪ್ಪುವುದಿಲ್ಲ’ ಎಂದು ಹೇಳಿದರು.</p>.<p>‘ಹಿಂದೆ ಬಿಜೆಪಿ ಕೇಂದ್ರದಲ್ಲಿ ಅಧಿಕಾರದಲ್ಲಿ ಇದ್ದಾಗ ಎ.ಪಿ.ಜೆ.ಅಬ್ದುಲ್ ಕಲಾಂ ಅವರನ್ನು, ನರೇಂದ್ರ ಮೋದಿ ಅವಧಿಯಲ್ಲಿ ರಾಮನಾಥ ಕೋವಿಂದ್ ಮತ್ತು ದ್ರೌಪದಿ ಮುರ್ಮು ಅವರನ್ನು ರಾಷ್ಟ್ರಪತಿಗಳನ್ನಾಗಿ ಮಾಡಿದೆ. ಬಿಜೆಪಿ ಆಡಳಿತದ 6 ರಾಜ್ಯಗಳಲ್ಲಿ ಪರಿಶಿಷ್ಟ ಪಂಗಡದವರು, 4 ರಾಜ್ಯಗಳಲ್ಲಿ ಹಿಂದುಳಿದ ವರ್ಗಕ್ಕೆ ಸೇರಿದವರು ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ’ ಎಂದು ಹೇಳಿದರು.</p>.<p>‘ಸಿದ್ದರಾಮಯ್ಯ ತಮ್ಮನ್ನು ತಾವು ಹಿಂದುಳಿದ ವರ್ಗಗಳ ಚಾಂಪಿಯನ್ ಎಂದು ಕರೆದುಕೊಳ್ಳುತ್ತಾರೆ. ಇತ್ತೀಚೆಗೆ ಕಾಂತರಾಜ ನೇತೃತ್ವದ ಆಯೋಗದ ವರದಿಯನ್ನು ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ಅಂಗೀಕರಿಸುವುದಾಗಿ ಬೊಗಳೆ ಹೊಡೆಯುತ್ತಿದ್ದ ಅವರು, ₹165 ಕೋಟಿ ಖರ್ಚು ಮಾಡಿ ಸಿದ್ದಪಡಿಸಿದ್ದ ವರದಿಯನ್ನು ರಾಹುಲ್ಗಾಂಧಿ ಆದೇಶ ಮಾಡಿದ್ದಾರೆಂದು ಕಸದ ಬುಟ್ಟಿಗೆ ಎಸೆಯಲಿಲ್ಲವೇ? ಆಗ ಹಿಂದುಳಿದವರ ಬಗೆಗಿನ ಕಾಳಜಿ ಎಲ್ಲಿ ಹೋಗಿತ್ತು’ ಎಂದು ವಿಜಯೇಂದ್ರ ಪ್ರಶ್ನಿಸಿದರು.</p>.<p>‘ಬಿಜೆಪಿ ಹಿಂದುಳಿದವರ ವಿರೋಧಿ, ಸಾಮಾಜಿಕ ನ್ಯಾಯದ ವಿರೋಧಿ ಎಂದು ಸುಳ್ಳು ಹೇಳುತ್ತಾ ಬಂದಿರುವ ಸಿದ್ದರಾಮಯ್ಯ ಅವರು ಹೈಕಮಾಂಡ್ ಸೂಚನೆ ಮೇರೆಗೆ ಕಾಂತರಾಜ ಆಯೋಗದ ವರದಿಯನ್ನು ಮೂಲೆಗೆ ಹಾಕಿದ್ದು ಏಕೆ? ಇವರಿಂದ ಹಿಂದುಳಿದವರಿಗೆ ನ್ಯಾಯ ಕೊಡಲು ಸಾಧ್ಯವೇ’ ಎಂದು ಪ್ರಶ್ನಿಸಿದರು.</p>.<p>‘ಹಿಂದುಳಿದ ವರ್ಗ, ಪರಿಶಿಷ್ಟ ಜಾತಿ, ಪಂಗಡಗಳನ್ನು, ಅಲ್ಪಸಂಖ್ಯಾತರನ್ನು ತಮ್ಮ ಮನೆಯಾಳುಗಳ ರೀತಿ ನೆಹರೂ–ಗಾಂಧಿ ಕುಟುಂಬ ನೋಡಿಕೊಂಡು ಬಂದಿದೆ. ಇಂಥ ಕಾಂಗ್ರೆಸ್ ಪಕ್ಷದಿಂದ ಹಿಂದುಳಿದ ವರ್ಗಕ್ಕೆ ನ್ಯಾಯ ಕೊಡಲು ಸಾಧ್ಯವೇ ಎಂದು ದೇಶದ ಮತ್ತು ರಾಜ್ಯದ ಜನರು ಕೇಳುತ್ತಿದ್ದಾರೆ’ ಎಂದರು.</p>.<p>‘ಕಾಂಗ್ರೆಸ್ ಪಕ್ಷದಲ್ಲಿ ಒಳಬೇಗುದಿ ಮುಂದುವರೆದಿದೆ. ಆಡಳಿತ ಪಕ್ಷದ ಶಾಸಕರು ಹತಾಶರಾಗಿದ್ದಾರೆ. ಯಾರ ಪರ ವಕಾಲತ್ತು ವಹಿಸಬೇಕು? ಸಿದ್ದರಾಮಯ್ಯ ಅವರ ಪರವೇ ಅಥವಾ ಡಿ.ಕೆ.ಶಿವಕುಮಾರ್ ಅವರ ಪರ ಇರಬೇಕೆ ಎಂಬ ಗೊಂದಲ ಶಾಸಕರಲ್ಲಿ ಮನೆ ಮಾಡಿದೆ. ಈ ಮಧ್ಯೆ ಕಾಂಗ್ರೆಸ್ ಪಕ್ಷದಲ್ಲಿ ಶಾಸಕರ ಖರೀದಿ ನಡೆಯುತ್ತಿರುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.</p>.<div><blockquote>ಡ್ರಗ್ ಮಾಫಿಯಾ ಕರ್ನಾಟಕಕ್ಕೆ ಹೊಸದಲ್ಲ. ಪ್ರಿಯಾಂಕ್ ಖರ್ಗೆ ಉಸ್ತುವಾರಿ ಸಚಿವರಾಗಿರುವ ಕಲಬುರಗಿ ಜಿಲ್ಲೆಯಲ್ಲಿ ಅದು ಗರಿಷ್ಠ ಪ್ರಮಾಣದಲ್ಲಿದೆ</blockquote><span class="attribution"> ಬಿ.ವೈ.ವಿಜಯೇಂದ್ರ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>