<p><strong>ಬೆಂಗಳೂರು:</strong> ಕಂದಾಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಗ್ರಾಮ ಸಹಾಯಕರು ಸೇವೆಯಿಂದ ನಿವೃತ್ತಿ ಹೊಂದಿದ ನಂತರ ಅಥವಾ ಸೇವೆಯಲ್ಲಿರುವಾಗಲೇ ಮೃತರಾದರೆ ₹10 ಲಕ್ಷಗಳ ಇಡುಗಂಟು ನೀಡಲು ಗುರುವಾರ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.</p>.<p>ಕಾನೂನು ಸಚಿವ ಎಚ್.ಕೆ.ಪಾಟೀಲ ಅವರು ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಈ ಕುರಿತು ವಿವರ ನೀಡಿದರು.</p>.<p>ಅಲ್ಲದೇ, ಸೇವೆಯನ್ನು ಗ್ರೂಪ್ ‘ಡಿ’ ಹುದ್ದೆಯಲ್ಲಿ ಸಕ್ರಮಗೊಳಿಸುವುದು ಅಥವಾ ಗೌರವ ಧನವನ್ನು ₹15,000 ದಿಂದ ₹27,000ಕ್ಕೆ ಹೆಚ್ಚಿಸುವುದು, ಇವೆರಡಲ್ಲಿ ಒಂದು ಆಯ್ಕೆ ಮಾಡಿಕೊಳ್ಳಲು ಅವಕಾಶ ನೀಡಲು ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದರು.</p>.<p><strong>ಬಾಡಿಗೆ ಮಸೂದೆಗೆ ಒಪ್ಪಿಗೆ:</strong></p><p>ಕೇಂದ್ರ ಸರ್ಕಾರವು ‘ಜನ ವಿಶ್ವಾಸ’ ಕಾಯ್ದೆಯನ್ನು ಜಾರಿಗೆ ತಂದಿದ್ದು, ಇದನ್ನು ರಾಜ್ಯದಲ್ಲಿ ಜಾರಿಗೆ ತರಲು ಕರ್ನಾಟಕ ಬಾಡಿಗೆ ಕಾಯ್ದೆ 1999ರ ವಿವಿಧ ಕಲಂಗಳ ಅಡಿಯಲ್ಲಿ ದಂಡ ಮತ್ತು ಅಪರಾಧ ನಿಬಂಧನೆಗಳಿಗೆ ತಿದ್ದುಪಡಿ ಮಾಡಲು ಸಂಪುಟ ಒಪ್ಪಿಗೆ ನೀಡಿದೆ.</p>.<p>ಇದು ಕೈಗಾರಿಕಾ ಕಟ್ಟಡಗಳು ಮತ್ತು ಶೆಡ್ಗಳ ಬಾಡಿಗೆ ಸಂಬಂಧಿಸಿದ್ದಾಗಿದೆ. ಈ ತಿದ್ದುಪಡಿ ಮಸೂದೆಯನ್ನು ವಿಧಾನಮಂಡಲದ ಅಧಿವೇಶನದಲ್ಲಿ ಮಂಡಿಸಲಾಗುವುದು. ಈ ತಿದ್ದುಪಡಿ ಮೂಲಕ ದಂಡ ಪ್ರಮಾಣವನ್ನು ತರ್ಕಬದ್ಧಗೊಳಿಸಲಾಗುವುದು ಎಂದು ಪಾಟೀಲ ಹೇಳಿದರು.</p>.<p>ಮುಖ್ಯವಾಗಿ ವಿವಿಧ ಅಪರಾಧದ ಪ್ರಕರಣಗಳನ್ನು ಅಪರಾಧವಲ್ಲ ಎಂದು ನಿರ್ಣಯಿಸುವುದು, ವಿವಿಧ ರೀತಿಯ ದಂಡಗಳನ್ನು ಪರಿಷ್ಕರಿಸುವುದು, ನ್ಯಾಯಾಂಗ ಅಧಿಕಾರಿಯನ್ನು ನೇಮಿಸುವುದು, ಮೇಲ್ಮನವಿ ಘಟಕದ ಸ್ಥಾಪನೆ ಮತ್ತು ದಂಡ ಪ್ರಮಾಣವನ್ನು ಕಾಲ ಕಾಲಕ್ಕೆ ಹೆಚ್ಚಿಸುವ ಅಂಶವನ್ನು ತಿದ್ದುಪಡಿ ಒಳಗೊಂಡಿದೆ ಎಂದು ವಿವರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕಂದಾಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಗ್ರಾಮ ಸಹಾಯಕರು ಸೇವೆಯಿಂದ ನಿವೃತ್ತಿ ಹೊಂದಿದ ನಂತರ ಅಥವಾ ಸೇವೆಯಲ್ಲಿರುವಾಗಲೇ ಮೃತರಾದರೆ ₹10 ಲಕ್ಷಗಳ ಇಡುಗಂಟು ನೀಡಲು ಗುರುವಾರ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.</p>.<p>ಕಾನೂನು ಸಚಿವ ಎಚ್.ಕೆ.ಪಾಟೀಲ ಅವರು ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಈ ಕುರಿತು ವಿವರ ನೀಡಿದರು.</p>.<p>ಅಲ್ಲದೇ, ಸೇವೆಯನ್ನು ಗ್ರೂಪ್ ‘ಡಿ’ ಹುದ್ದೆಯಲ್ಲಿ ಸಕ್ರಮಗೊಳಿಸುವುದು ಅಥವಾ ಗೌರವ ಧನವನ್ನು ₹15,000 ದಿಂದ ₹27,000ಕ್ಕೆ ಹೆಚ್ಚಿಸುವುದು, ಇವೆರಡಲ್ಲಿ ಒಂದು ಆಯ್ಕೆ ಮಾಡಿಕೊಳ್ಳಲು ಅವಕಾಶ ನೀಡಲು ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದರು.</p>.<p><strong>ಬಾಡಿಗೆ ಮಸೂದೆಗೆ ಒಪ್ಪಿಗೆ:</strong></p><p>ಕೇಂದ್ರ ಸರ್ಕಾರವು ‘ಜನ ವಿಶ್ವಾಸ’ ಕಾಯ್ದೆಯನ್ನು ಜಾರಿಗೆ ತಂದಿದ್ದು, ಇದನ್ನು ರಾಜ್ಯದಲ್ಲಿ ಜಾರಿಗೆ ತರಲು ಕರ್ನಾಟಕ ಬಾಡಿಗೆ ಕಾಯ್ದೆ 1999ರ ವಿವಿಧ ಕಲಂಗಳ ಅಡಿಯಲ್ಲಿ ದಂಡ ಮತ್ತು ಅಪರಾಧ ನಿಬಂಧನೆಗಳಿಗೆ ತಿದ್ದುಪಡಿ ಮಾಡಲು ಸಂಪುಟ ಒಪ್ಪಿಗೆ ನೀಡಿದೆ.</p>.<p>ಇದು ಕೈಗಾರಿಕಾ ಕಟ್ಟಡಗಳು ಮತ್ತು ಶೆಡ್ಗಳ ಬಾಡಿಗೆ ಸಂಬಂಧಿಸಿದ್ದಾಗಿದೆ. ಈ ತಿದ್ದುಪಡಿ ಮಸೂದೆಯನ್ನು ವಿಧಾನಮಂಡಲದ ಅಧಿವೇಶನದಲ್ಲಿ ಮಂಡಿಸಲಾಗುವುದು. ಈ ತಿದ್ದುಪಡಿ ಮೂಲಕ ದಂಡ ಪ್ರಮಾಣವನ್ನು ತರ್ಕಬದ್ಧಗೊಳಿಸಲಾಗುವುದು ಎಂದು ಪಾಟೀಲ ಹೇಳಿದರು.</p>.<p>ಮುಖ್ಯವಾಗಿ ವಿವಿಧ ಅಪರಾಧದ ಪ್ರಕರಣಗಳನ್ನು ಅಪರಾಧವಲ್ಲ ಎಂದು ನಿರ್ಣಯಿಸುವುದು, ವಿವಿಧ ರೀತಿಯ ದಂಡಗಳನ್ನು ಪರಿಷ್ಕರಿಸುವುದು, ನ್ಯಾಯಾಂಗ ಅಧಿಕಾರಿಯನ್ನು ನೇಮಿಸುವುದು, ಮೇಲ್ಮನವಿ ಘಟಕದ ಸ್ಥಾಪನೆ ಮತ್ತು ದಂಡ ಪ್ರಮಾಣವನ್ನು ಕಾಲ ಕಾಲಕ್ಕೆ ಹೆಚ್ಚಿಸುವ ಅಂಶವನ್ನು ತಿದ್ದುಪಡಿ ಒಳಗೊಂಡಿದೆ ಎಂದು ವಿವರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>