ಅಂತರ್ಜಲ ಮಟ್ಟ ಹೆಚ್ಚಿಸಬೇಕು: ಅಂತರ್ಜಲ ಮಟ್ಟ ಹೆಚ್ಚಿಸುವ ಬಗ್ಗೆಯೂ ಮುಖ್ಯಮಂತ್ರಿ ಜೊತೆ ಚರ್ಚೆ ನಡೆಸಿದ ಗುರೂಜಿ, ‘ಮಲೆನಾಡು ಸೇರಿದಂತೆ ಎಲ್ಲೆಡೆ ಅಂತರ್ಜಲಮಟ್ಟ ಕುಸಿಯುತ್ತಿದೆ. ಹೀಗಾಗಿ ನೀಲಗಿರಿ, ಅಕೇಶಿಯಾ ಗಿಡಗಳನ್ನು ತೆರವುಗೊಳಿಸಿ, ಹಣ್ಣಿನ ಗಿಡಗಳನ್ನು ಬೆಳೆಸಬೇಕು. ಇದರಿಂದ ಪಶುಪಕ್ಷಿಗಳಿಗೆ ಹಣ್ಣು ಸಿಗಲಿದೆ. ಅಂತರ್ಜಲ ಮಟ್ಟ ಕೂಡಾ ಹೆಚ್ಚಲಿದೆ’ ಎಂದರು.