<p><strong>ಮಂಗಳೂರು:</strong> ‘ಶಾಸಕ ವಿನಯ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ವಿಧಿಸಿರುವ ಕುರಿತು ನ್ಯಾಯಾಲಯದಿಂದ ಈ ವರೆಗೆ ನಮ್ಮ ಕಚೇರಿಗೆ ಅಧಿಕೃತ ಆದೇಶ ಬಂದಿಲ್ಲ. ಆದೇಶ ಬಂದ ನಂತರ ಮುಂದಿನ ಕ್ರಮದ ಬಗ್ಗೆ ಯೋಚಿಸಲಾಗುವುದು' ಎಂದು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಹೇಳಿದರು.</p>.<p>ಸೋಮವಾರ ಇಲ್ಲಿ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಯಾವ ಆಧಾರದಲ್ಲಿ ಲೋಕಸಭಾ ಕ್ಷೇತ್ರಗಳ ಪುನರ್ ವಿಂಗಡಣೆ ಮಾಡಲು ಹೊರಟಿದೆ ಎಂಬ ಬಗ್ಗೆ ಮಾಹಿತಿ ಇಲ್ಲ’ ಎಂದರು.</p>.<p>‘ಆದರೆ, ಯಾವುದೇ ಕಾನೂನು ರೂಪಿಸುವಾಗ ಎಲ್ಲ ಪ್ರದೇಶ, ಜಾತಿ, ವರ್ಗ, ಧರ್ಮದವರನ್ನು ವಿಶ್ವಾಸಕ್ಕೆ ಪಡೆದು, ಯಾರಿಗೂ ಅನ್ಯಾಯವಾಗದಂತೆ ನೋಡಿಕೊಳ್ಳಬೇಕಾಗುತ್ತದೆ’ ಎಂದು ಹೇಳಿದರು.</p>.<p>ಸಮಿತಿ ಸಭೆ: ಪಕ್ಷಾಂತರ ನಿಷೇಧ ಕಾಯ್ದೆ ಬಲಪಡಿಸುವ ನಿಟ್ಟಿನಲ್ಲಿ ರಚನೆಯಾಗಿರುವ ಪರಿಶೀಲನಾ ಸಮಿತಿಯ ಸಭೆಯು ಒಡಿಶಾದ ಭುವನೇಶ್ವರದಲ್ಲಿ ಇದೇ 22 ಮತ್ತು23ರಂದು ನಡೆಯಲಿದೆ. ಕರ್ನಾಟಕ,ಮಹಾರಾಷ್ಟ್ರ, ಒಡಿಶಾ, ನಾಗಾಲ್ಯಾಂಡ್, ಸಿಕ್ಕಿಂ ರಾಜ್ಯಗಳ ಸ್ಪೀಕರ್ಗಳು, ಹಿರಿಯ ವಕೀಲರು ಭಾಗವಹಿಸಲಿದ್ದಾರೆ. ಲೋಕಸಭೆ ಸ್ಪೀಕರ್ ಓಂ ಬಿರ್ಲಾ ರಚಿಸಿರುವ ಈ ಸಮಿತಿ ಈಗಾಗಲೇ ಒಂದು ಸಭೆ ನಡೆಸಿದ್ದು, ಇನ್ನು ಒಂದು ವರ್ಷದ ಒಳಗಾಗಿ ವರದಿ ಸಲ್ಲಿಸಲಿದೆ ಎಂದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260421-51-520856690</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು:</strong> ‘ಶಾಸಕ ವಿನಯ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ವಿಧಿಸಿರುವ ಕುರಿತು ನ್ಯಾಯಾಲಯದಿಂದ ಈ ವರೆಗೆ ನಮ್ಮ ಕಚೇರಿಗೆ ಅಧಿಕೃತ ಆದೇಶ ಬಂದಿಲ್ಲ. ಆದೇಶ ಬಂದ ನಂತರ ಮುಂದಿನ ಕ್ರಮದ ಬಗ್ಗೆ ಯೋಚಿಸಲಾಗುವುದು' ಎಂದು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಹೇಳಿದರು.</p>.<p>ಸೋಮವಾರ ಇಲ್ಲಿ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಯಾವ ಆಧಾರದಲ್ಲಿ ಲೋಕಸಭಾ ಕ್ಷೇತ್ರಗಳ ಪುನರ್ ವಿಂಗಡಣೆ ಮಾಡಲು ಹೊರಟಿದೆ ಎಂಬ ಬಗ್ಗೆ ಮಾಹಿತಿ ಇಲ್ಲ’ ಎಂದರು.</p>.<p>‘ಆದರೆ, ಯಾವುದೇ ಕಾನೂನು ರೂಪಿಸುವಾಗ ಎಲ್ಲ ಪ್ರದೇಶ, ಜಾತಿ, ವರ್ಗ, ಧರ್ಮದವರನ್ನು ವಿಶ್ವಾಸಕ್ಕೆ ಪಡೆದು, ಯಾರಿಗೂ ಅನ್ಯಾಯವಾಗದಂತೆ ನೋಡಿಕೊಳ್ಳಬೇಕಾಗುತ್ತದೆ’ ಎಂದು ಹೇಳಿದರು.</p>.<p>ಸಮಿತಿ ಸಭೆ: ಪಕ್ಷಾಂತರ ನಿಷೇಧ ಕಾಯ್ದೆ ಬಲಪಡಿಸುವ ನಿಟ್ಟಿನಲ್ಲಿ ರಚನೆಯಾಗಿರುವ ಪರಿಶೀಲನಾ ಸಮಿತಿಯ ಸಭೆಯು ಒಡಿಶಾದ ಭುವನೇಶ್ವರದಲ್ಲಿ ಇದೇ 22 ಮತ್ತು23ರಂದು ನಡೆಯಲಿದೆ. ಕರ್ನಾಟಕ,ಮಹಾರಾಷ್ಟ್ರ, ಒಡಿಶಾ, ನಾಗಾಲ್ಯಾಂಡ್, ಸಿಕ್ಕಿಂ ರಾಜ್ಯಗಳ ಸ್ಪೀಕರ್ಗಳು, ಹಿರಿಯ ವಕೀಲರು ಭಾಗವಹಿಸಲಿದ್ದಾರೆ. ಲೋಕಸಭೆ ಸ್ಪೀಕರ್ ಓಂ ಬಿರ್ಲಾ ರಚಿಸಿರುವ ಈ ಸಮಿತಿ ಈಗಾಗಲೇ ಒಂದು ಸಭೆ ನಡೆಸಿದ್ದು, ಇನ್ನು ಒಂದು ವರ್ಷದ ಒಳಗಾಗಿ ವರದಿ ಸಲ್ಲಿಸಲಿದೆ ಎಂದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260421-51-520856690</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>