‘ದೇಶದಲ್ಲಿ ನಮ್ಮ ಸಮುದಾಯದವರು ಕಡಿಮೆ ಇದ್ದರೂ ಈ ದೇಶಕ್ಕಾಗಿ ಅಪಾರ ಸೇವೆ ಮಾಡಿದ್ದಾರೆ. ಸೇನೆ, ಅಂಚೆ ಮತ್ತು ದೂರಸಂಪರ್ಕ ಇಲಾಖೆ, ಶಿಕ್ಷಣ ಇನ್ನಿತರ ಕ್ಷೇತ್ರಗಳಲ್ಲಿ ಕೊಡುಗೆ ನೀಡಿದ್ದಾರೆ. ನಮ್ಮ ಸಂಖ್ಯೆ ಕಡಿಮೆ ಇರುವುದರಿಂದ ಚುನಾವಣೆಯಲ್ಲಿ ಸ್ಪರ್ಧಿಸುವುದಕ್ಕೂ ಆಗುವುದಿಲ್ಲ. ಕೇಂದ್ರ ಸರ್ಕಾರ ತನ್ನ ನಿರ್ಧಾರವನ್ನು ಪುನರ್ ಪರಿಶೀಲಿಸಬೇಕು’ ಎಂದು ಒತ್ತಾಯಿಸಿದರು.