<p><strong>ಬೆಂಗಳೂರು:</strong> ನಟ ವಿಷ್ಣುವರ್ಧನ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ 2025ರ ಸೆಪ್ಟೆಂಬರ್ನಲ್ಲಿಯೇ ಘೋಷಣೆಯಾಗಿದ್ದು, ಪ್ರಶಸ್ತಿ ಪ್ರದಾನಕ್ಕೆ ದಿನಾಂಕ ನಿಗದಿಪಡಿಸುವಂತೆ ಸರ್ಕಾರದ ಮೇಲೆ ಒತ್ತಡ ಹಾಕಬೇಕು ಎಂದು ‘ಡಾ.ವಿಷ್ಣು ಸೇನಾ ಸಮಿತಿ’ಯು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷೆ ಜಯಮಾಲಾ ಅವರಿಗೆ ಮನವಿ ಸಲ್ಲಿಸಿದೆ.</p>.<p>ವೀರಕಪುತ್ರ ಶ್ರೀನಿವಾಸ ಅವರ ನೇತೃತ್ವದಲ್ಲಿ ವಿಷ್ಣು ಸೇನಾ ಸಮಿತಿಯ ಮುಖಂಡರು ಜಯಮಾಲಾ ಅವರನ್ನು ಗುರುವಾರ ಭೇಟಿ ಮಾಡಿದ್ದರು. ‘ವಿಷ್ಣುವರ್ಧನ್ ಅವರಿಗೆ ಪ್ರಶಸ್ತಿ ಘೋಷಣೆಯಾಗಿ ಆರು ತಿಂಗಳು ಕಳೆದರೂ, ಸಮಾರಂಭದ ದಿನಾಂಕ ಘೋಷಣೆಯಾಗಿಲ್ಲ. ಈ ಬಗ್ಗೆ ಸರ್ಕಾರದ ಜತೆ ಮಾತುಕತೆ ನಡೆಸಿ, ಸಮಾರಂಭ ಆಯೋಜಿಸಬೇಕು’ ಎಂದು ಮನವಿ ಸಲ್ಲಿಸಿದ್ದಾರೆ.</p>.<p>‘ಅಭಿಮಾನ್ ಸ್ಟುಡಿಯೊದಲ್ಲಿ ಇದ್ದ ವಿಷ್ಣುವರ್ಧನ್ ಅವರ ಸ್ಮಾರಕವನ್ನು ತೆರವುಗೊಳಿಸಲಾಗಿದೆ. ಆ ಜಾಗದಲ್ಲಿ ಮಾಲ್, ವಾಣಿಜ್ಯ ಸಂಕೀರ್ಣ ನಿರ್ಮಾಣವಾಗುವುದು ವಿಷ್ಣುವರ್ಧನ್ ಅವರಿಗೆ ಮಾಡುವ ಅವಮಾನ. ಹೀಗಾಗಿ ಆ ಜಾಗವು ಮೂಲ ಉದ್ದೇಶಕ್ಕೇ ಬಳಕೆಯಾಗುವಂತೆ ಮಂಡಳಿಯು ಎಚ್ಚರಿಕೆ ವಹಿಸಬೇಕು’ ಎಂದು ಮನವಿ ಸಲ್ಲಿಸಿದ್ದಾರೆ.</p>.<p>ವಿಷ್ಣು ಸೇನಾ ಸಮಿತಿಯ ಆನಂದ ರಾಜ್, ಮಲ್ಲಿಕಾರ್ಜುನ್, ಎಸ್.ರಘು ಮತ್ತು ಮೂರ್ತಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ನಟ ವಿಷ್ಣುವರ್ಧನ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ 2025ರ ಸೆಪ್ಟೆಂಬರ್ನಲ್ಲಿಯೇ ಘೋಷಣೆಯಾಗಿದ್ದು, ಪ್ರಶಸ್ತಿ ಪ್ರದಾನಕ್ಕೆ ದಿನಾಂಕ ನಿಗದಿಪಡಿಸುವಂತೆ ಸರ್ಕಾರದ ಮೇಲೆ ಒತ್ತಡ ಹಾಕಬೇಕು ಎಂದು ‘ಡಾ.ವಿಷ್ಣು ಸೇನಾ ಸಮಿತಿ’ಯು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷೆ ಜಯಮಾಲಾ ಅವರಿಗೆ ಮನವಿ ಸಲ್ಲಿಸಿದೆ.</p>.<p>ವೀರಕಪುತ್ರ ಶ್ರೀನಿವಾಸ ಅವರ ನೇತೃತ್ವದಲ್ಲಿ ವಿಷ್ಣು ಸೇನಾ ಸಮಿತಿಯ ಮುಖಂಡರು ಜಯಮಾಲಾ ಅವರನ್ನು ಗುರುವಾರ ಭೇಟಿ ಮಾಡಿದ್ದರು. ‘ವಿಷ್ಣುವರ್ಧನ್ ಅವರಿಗೆ ಪ್ರಶಸ್ತಿ ಘೋಷಣೆಯಾಗಿ ಆರು ತಿಂಗಳು ಕಳೆದರೂ, ಸಮಾರಂಭದ ದಿನಾಂಕ ಘೋಷಣೆಯಾಗಿಲ್ಲ. ಈ ಬಗ್ಗೆ ಸರ್ಕಾರದ ಜತೆ ಮಾತುಕತೆ ನಡೆಸಿ, ಸಮಾರಂಭ ಆಯೋಜಿಸಬೇಕು’ ಎಂದು ಮನವಿ ಸಲ್ಲಿಸಿದ್ದಾರೆ.</p>.<p>‘ಅಭಿಮಾನ್ ಸ್ಟುಡಿಯೊದಲ್ಲಿ ಇದ್ದ ವಿಷ್ಣುವರ್ಧನ್ ಅವರ ಸ್ಮಾರಕವನ್ನು ತೆರವುಗೊಳಿಸಲಾಗಿದೆ. ಆ ಜಾಗದಲ್ಲಿ ಮಾಲ್, ವಾಣಿಜ್ಯ ಸಂಕೀರ್ಣ ನಿರ್ಮಾಣವಾಗುವುದು ವಿಷ್ಣುವರ್ಧನ್ ಅವರಿಗೆ ಮಾಡುವ ಅವಮಾನ. ಹೀಗಾಗಿ ಆ ಜಾಗವು ಮೂಲ ಉದ್ದೇಶಕ್ಕೇ ಬಳಕೆಯಾಗುವಂತೆ ಮಂಡಳಿಯು ಎಚ್ಚರಿಕೆ ವಹಿಸಬೇಕು’ ಎಂದು ಮನವಿ ಸಲ್ಲಿಸಿದ್ದಾರೆ.</p>.<p>ವಿಷ್ಣು ಸೇನಾ ಸಮಿತಿಯ ಆನಂದ ರಾಜ್, ಮಲ್ಲಿಕಾರ್ಜುನ್, ಎಸ್.ರಘು ಮತ್ತು ಮೂರ್ತಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>