ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತಾನಾಡಿದ ಅಖಿಲ ಭಾರತ ತುಳು ಒಕ್ಕೂಟದ ರಾಜ್ಯ ಘಟಕದ ಅಧ್ಯಕ್ಷ ಧರ್ಮಪಾಲ ದೇವಾಡಿಗ, ‘ಕೊಲ್ಲಿ ರಾಷ್ಟ್ರದ ತುಳು ಭಾಷಿಕರನ್ನು ಒಗ್ಗೂಡಿಸುವ ಉದ್ದೇಶದಿಂದ ಈ ಬಾರಿದುಬೈನ ಆಲ್ನಸಾರ್ ಲೀಸರ್ ಲ್ಯಾಂಡ್ ಐಸ್ರಿಂಗ್ ಸಭಾಂಗಣದಲ್ಲಿ ಸಮ್ಮೇಳನ ನಡೆಸಲು ನಿರ್ಧರಿಸಲಾಗಿದೆ’ ಎಂದು ಹೇಳಿದರು.