‘ಜನವರಿ 1ರಂದು ನಡೆಸುವ ಜಕಣಾಚಾರಿ ಜಯಂತಿಯನ್ನು ಸರ್ಕಾರವೇ ನಡೆಸಬೇಕು, ಬೇಲೂರಿನ ಚನ್ನಕೇಶವ ದೇವಸ್ಥಾನದ ಆವರಣದಲ್ಲಿ ಜಕಣಾಚಾರಿ ಪ್ರತಿಮೆ ಸ್ಥಾಪಿಸಬೇಕು, ರಾಜ್ಯದ ಯಾವುದಾದರೊಂದು ವಿಶ್ವವಿದ್ಯಾಲಯಕ್ಕೆ ಜಕಣಾಚಾರಿ ಹೆಸರು ಇಡಬೇಕು, ವಿಶ್ವಕರ್ಮ ಅಭಿವೃದ್ಧಿ ನಿಗಮಕ್ಕೆ ಕನಿಷ್ಠ ₹ 200 ಕೋಟಿ ಅನುದಾನ ನೀಡಬೇಕು’ ಎಂಬ ಬೇಡಿಕೆ ಸಲ್ಲಿಸಿದರು.