<p><strong>ಚಿತ್ರದುರ್ಗ:</strong> ಅರಣ್ಯ ಸಚಿವ ಆರ್.ಶಂಕರ್ ವಾಸ್ತವ್ಯ ಹೂಡಿದ್ದರಿಂದ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ವಿಧಿಸಿದ ಅಧಿಕಾರಿಗಳ ವಿರುದ್ಧ ಆಕ್ರೋಶಗೊಂಡ ಪ್ರವಾಸಿಗರು ಭಾನುವಾರ ಜೋಗಿಮಟ್ಟಿ ಗಿರಿಧಾಮದ ಬೀಗ ಮುರಿದು ಒಳ ನುಗ್ಗಿದರು.</p>.<p>ಪ್ರವಾಸಿಗರ ಆಕ್ರೋಶ ಕಟ್ಟೆಯೊಡೆದ ಪರಿಣಾಮ ಅರಣ್ಯ ಇಲಾಖೆ ಸಿಬ್ಬಂದಿ ಮೂಕಪ್ರೇಕ್ಷರಾಗಿದ್ದರು. ಸಚಿವರು ತಂಗಿದ್ದ ಪ್ರವಾಸಿ ಮಂದಿರ ಹೊರತುಪಡಿಸಿ ಉಳಿದೆಡೆ ಸಂಚರಿಸಲು ಪ್ರವಾಸಿಗರಿಗೆ ಅವಕಾಶ ಕಲ್ಪಿಸಲಾಯಿತು.</p>.<p>ಶನಿವಾರ ರಾತ್ರಿ ಚಿತ್ರದುರ್ಗಕ್ಕೆ ಭೇಟಿ ನೀಡಿದ್ದ ಶಂಕರ್, ಜೋಗಿಮಟ್ಟಿ ಗಿರಿಧಾಮದ ಪ್ರವಾಸಿ ಮಂದಿರದಲ್ಲಿ ತಂಗಿದ್ದರು. ಹೀಗಾಗಿ, ಸಾರ್ವಜನಿಕ ಪ್ರವೇಶವನ್ನು ಅರಣ್ಯ ಇಲಾಖೆ ಸಿಬ್ಬಂದಿ ನಿರ್ಬಂಧಿಸಿದ್ದರು. ಪ್ರಕೃತಿ ಸೌಂದರ್ಯ ಆಸ್ವಾಧಿಸಲು ವಾರಂತ್ಯದ ನಸುಕಿನಲ್ಲಿ ಬಂದಿದ್ದ ಪ್ರವಾಸಿಗರಿಗೆ ಇದರಿಂದ ನಿರಾಶೆ ಉಂಟಾಯಿತು.</p>.<p>ಗಿರಿಧಾಮದ ಪ್ರವೇಶ ದ್ವಾರದ ಬಳಿ ಸುಮಾರು 50ಕ್ಕೂ ಹೆಚ್ಚು ದ್ವಿಚಕ್ರ ವಾಹನ ಹಾಗೂ 25ಕ್ಕೂ ಅಧಿಕ ಕಾರುಗಳು ಸಾಲುಗಟ್ಟಿ ನಿಂತಿದ್ದವು. ಇದರಿಂದ ಈ ಪ್ರದೇಶದಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಬೆಳಿಗ್ಗೆ 8 ಗಂಟೆಯ ಹೊತ್ತಿಗೆ ಆಕ್ರೋಶಗೊಂಡ ಪ್ರವಾಸಿಗರ ಗುಂಪು ಅರಣ್ಯ ಇಲಾಖೆ ಸಿಬ್ಬಂದಿಯೊಂದಿಗೆ ಗಲಾಟೆ ನಡೆಸಿತು. ಸಚಿವರು ಮರಳಿದ ಬಳಿಕ ಪ್ರವೇಶ ಕಲ್ಪಿಸುವುದಾಗಿ ಅಧಿಕಾರಿಗಳು ನೀಡಿದ ಭರವಸೆ ಬಹುತೇಕರನ್ನು ಕೆರಳಿಸಿತು. ಕುಪಿತಗೊಂಡ ಪ್ರವಾಸಿಗರು ಗೇಟಿನ ಬೀಗವನ್ನು ಕಲ್ಲಿನಿಂದ ಜಜ್ಜಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ:</strong> ಅರಣ್ಯ ಸಚಿವ ಆರ್.ಶಂಕರ್ ವಾಸ್ತವ್ಯ ಹೂಡಿದ್ದರಿಂದ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ವಿಧಿಸಿದ ಅಧಿಕಾರಿಗಳ ವಿರುದ್ಧ ಆಕ್ರೋಶಗೊಂಡ ಪ್ರವಾಸಿಗರು ಭಾನುವಾರ ಜೋಗಿಮಟ್ಟಿ ಗಿರಿಧಾಮದ ಬೀಗ ಮುರಿದು ಒಳ ನುಗ್ಗಿದರು.</p>.<p>ಪ್ರವಾಸಿಗರ ಆಕ್ರೋಶ ಕಟ್ಟೆಯೊಡೆದ ಪರಿಣಾಮ ಅರಣ್ಯ ಇಲಾಖೆ ಸಿಬ್ಬಂದಿ ಮೂಕಪ್ರೇಕ್ಷರಾಗಿದ್ದರು. ಸಚಿವರು ತಂಗಿದ್ದ ಪ್ರವಾಸಿ ಮಂದಿರ ಹೊರತುಪಡಿಸಿ ಉಳಿದೆಡೆ ಸಂಚರಿಸಲು ಪ್ರವಾಸಿಗರಿಗೆ ಅವಕಾಶ ಕಲ್ಪಿಸಲಾಯಿತು.</p>.<p>ಶನಿವಾರ ರಾತ್ರಿ ಚಿತ್ರದುರ್ಗಕ್ಕೆ ಭೇಟಿ ನೀಡಿದ್ದ ಶಂಕರ್, ಜೋಗಿಮಟ್ಟಿ ಗಿರಿಧಾಮದ ಪ್ರವಾಸಿ ಮಂದಿರದಲ್ಲಿ ತಂಗಿದ್ದರು. ಹೀಗಾಗಿ, ಸಾರ್ವಜನಿಕ ಪ್ರವೇಶವನ್ನು ಅರಣ್ಯ ಇಲಾಖೆ ಸಿಬ್ಬಂದಿ ನಿರ್ಬಂಧಿಸಿದ್ದರು. ಪ್ರಕೃತಿ ಸೌಂದರ್ಯ ಆಸ್ವಾಧಿಸಲು ವಾರಂತ್ಯದ ನಸುಕಿನಲ್ಲಿ ಬಂದಿದ್ದ ಪ್ರವಾಸಿಗರಿಗೆ ಇದರಿಂದ ನಿರಾಶೆ ಉಂಟಾಯಿತು.</p>.<p>ಗಿರಿಧಾಮದ ಪ್ರವೇಶ ದ್ವಾರದ ಬಳಿ ಸುಮಾರು 50ಕ್ಕೂ ಹೆಚ್ಚು ದ್ವಿಚಕ್ರ ವಾಹನ ಹಾಗೂ 25ಕ್ಕೂ ಅಧಿಕ ಕಾರುಗಳು ಸಾಲುಗಟ್ಟಿ ನಿಂತಿದ್ದವು. ಇದರಿಂದ ಈ ಪ್ರದೇಶದಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಬೆಳಿಗ್ಗೆ 8 ಗಂಟೆಯ ಹೊತ್ತಿಗೆ ಆಕ್ರೋಶಗೊಂಡ ಪ್ರವಾಸಿಗರ ಗುಂಪು ಅರಣ್ಯ ಇಲಾಖೆ ಸಿಬ್ಬಂದಿಯೊಂದಿಗೆ ಗಲಾಟೆ ನಡೆಸಿತು. ಸಚಿವರು ಮರಳಿದ ಬಳಿಕ ಪ್ರವೇಶ ಕಲ್ಪಿಸುವುದಾಗಿ ಅಧಿಕಾರಿಗಳು ನೀಡಿದ ಭರವಸೆ ಬಹುತೇಕರನ್ನು ಕೆರಳಿಸಿತು. ಕುಪಿತಗೊಂಡ ಪ್ರವಾಸಿಗರು ಗೇಟಿನ ಬೀಗವನ್ನು ಕಲ್ಲಿನಿಂದ ಜಜ್ಜಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>