<p><strong>ಭದ್ರಾವತಿ: </strong>ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ (ವಿಐಎಸ್ಎಲ್) ಖಾಸಗೀಕರಣ ಗೊಳಿಸುವುದನ್ನು ವಿರೋಧಿಸಿ ಕಾರ್ಮಿಕರು ಶುಕ್ರವಾರ ಪ್ರತಿಭಟಿಸಿದರು.</p>.<p>ಸೈಲ್ ಆಡಳಿತ ಮಂಡಳಿ ಹೊರಡಿಸಿರುವ ಮಾರಾಟ ಪ್ರಕ್ರಿಯೆಯ ಟೆಂಡರ್ ಪ್ರಕಟಣೆ ಖಂಡಿಸಿ ಬೆಳಿಗ್ಗೆ ನೂರಾರು ಕಾರ್ಮಿಕರು ಕಾರ್ಖಾನೆ ಮುಂಭಾಗ ಜಮಾಯಿಸಿ ಘೋಷಣೆಗಳನ್ನು ಕೂಗಿ ಆಕ್ರೋಶ<br />ವ್ಯಕ್ತಪಡಿಸಿದರು.</p>.<p>ಈ ವೇಳೆ ಮಾತನಾಡಿದ ಕಾರ್ಮಿಕ ಸಂಘದ ಅಧ್ಯಕ್ಷ ಜಗದೀಶ್, ‘ಬಹಳ ವರ್ಷಗಳಿಂದ ತಡೆಹಿಡಿದಿದ್ದ ಮಾರಾಟ ಪ್ರಕ್ರಿಯೆ ಈಗ ಏಕಾಏಕಿ ಆರಂಭಗೊಂಡಿರುವುದು ಕಾರ್ಮಿಕರ ಭವಿಷ್ಯದ ಆತಂಕ ಹೆಚ್ಚಿಸಿದೆ’ ಎಂದರು.</p>.<p>‘ವಿಐಎಸ್ಎಲ್ ಕಾರ್ಖಾನೆ ಅಭಿವೃದ್ಧಿಗೆ ಕೂಡಲೇ ಬಂಡವಾಳ ತೊಡಗಿಸುವ ಜತೆಗೆ ಅದರ ಪುನಶ್ಚೇತನಕ್ಕೆ ಒತ್ತು ನೀಡುವ ಕೆಲಸವನ್ನು ಕೇಂದ್ರ ಸರ್ಕಾರ, ಉಕ್ಕು ಪ್ರಾಧಿಕಾರ ಮಾಡಬೇಕು’ ಎಂದು ಒತ್ತಾಯಿಸಿದರು.</p>.<p>‘ಸದ್ಯ ಹೋರಾಟ ಆರಂಭವಾಗಿದೆ. ಮುಂದಿನ ದಿನಗಳಲ್ಲಿ ಉಗ್ರ ಸ್ವರೂಪದ ಹೋರಾಟವನ್ನು ಮಾಡಲಾಗುವುದು’ ಎಂದು ತಿಳಿಸಿದರು.</p>.<p>‘ಕಾರ್ಖಾನೆಯನ್ನು ಸಾರ್ವಜನಿಕ ಉದ್ದಿಮೆಯಾಗಿ ಉಳಿಸುವಲ್ಲಿ, ಬಂಡವಾಳ ಹೂಡಿಸುವಲ್ಲಿ ವಿಫಲರಾದ ಸಂಸದ ಬಿ.ವೈ. ರಾಘವೇಂದ್ರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ನಮ್ಮ ಹೋರಾಟದ ಜೊತೆ ಕೈ ಜೋಡಿಸಬೇಕು’ ಎಂದು ಒತ್ತಾಯಿಸಿದರು.</p>.<p>‘ರಾಜ್ಯ ಸರ್ಕಾರ ಗಣಿ ನೀಡಿದರೆ ಬಂಡವಾಳ ಹೂಡುವುದಾಗಿ ಕೇಂದ್ರ ಉಕ್ಕು ಸಚಿವರು ಭರವಸೆ ನೀಡಿದ್ದರು. ಅದರಂತೆ ರಾಜ್ಯ ನಡೆದುಕೊಂಡಿದೆ. ಈಗ ಕೇಂದ್ರ ಸರ್ಕಾರ ತಾನು ಹೇಳಿದ ರೀತಿಯಲ್ಲಿ ನಡೆದುಕೊಂಡು ಕಾರ್ಖಾನೆ ಹಾಗೂ ಕಾರ್ಮಿಕರ ಭವಿಷ್ಯ ಉಳಿಸುವ ಕೆಲಸ ಮಾಡಬೇಕು’ ಎಂದು ಆಗ್ರಹಿಸಿದರು.</p>.<p>ಕಾರ್ಮಿಕ ಸಂಘದ ಮಾಜಿ ಅಧ್ಯಕ್ಷ ಜೆ.ಎನ್.ಚಂದ್ರಹಾಸ, ಕಾರ್ಮಿಕ ಮುಖಂಡರಾದ ಬಸಂತಕುಮಾರ್, ರಾಘವೇಂದ್ರ, ಅಮೃತಕುಮಾರ್, ಮೋಹನ್, ಕಾಂಗ್ರೆಸ್ ಮುಖಂಡ ಚಂದ್ರೇಗೌಡ, ಕರುಣಾಮೂರ್ತಿ, ಗುತ್ತಿಗೆ ಕಾರ್ಮಿಕ ಸಂಘದ ಸುರೇಶ್, ರಾಜೇಶ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭದ್ರಾವತಿ: </strong>ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ (ವಿಐಎಸ್ಎಲ್) ಖಾಸಗೀಕರಣ ಗೊಳಿಸುವುದನ್ನು ವಿರೋಧಿಸಿ ಕಾರ್ಮಿಕರು ಶುಕ್ರವಾರ ಪ್ರತಿಭಟಿಸಿದರು.</p>.<p>ಸೈಲ್ ಆಡಳಿತ ಮಂಡಳಿ ಹೊರಡಿಸಿರುವ ಮಾರಾಟ ಪ್ರಕ್ರಿಯೆಯ ಟೆಂಡರ್ ಪ್ರಕಟಣೆ ಖಂಡಿಸಿ ಬೆಳಿಗ್ಗೆ ನೂರಾರು ಕಾರ್ಮಿಕರು ಕಾರ್ಖಾನೆ ಮುಂಭಾಗ ಜಮಾಯಿಸಿ ಘೋಷಣೆಗಳನ್ನು ಕೂಗಿ ಆಕ್ರೋಶ<br />ವ್ಯಕ್ತಪಡಿಸಿದರು.</p>.<p>ಈ ವೇಳೆ ಮಾತನಾಡಿದ ಕಾರ್ಮಿಕ ಸಂಘದ ಅಧ್ಯಕ್ಷ ಜಗದೀಶ್, ‘ಬಹಳ ವರ್ಷಗಳಿಂದ ತಡೆಹಿಡಿದಿದ್ದ ಮಾರಾಟ ಪ್ರಕ್ರಿಯೆ ಈಗ ಏಕಾಏಕಿ ಆರಂಭಗೊಂಡಿರುವುದು ಕಾರ್ಮಿಕರ ಭವಿಷ್ಯದ ಆತಂಕ ಹೆಚ್ಚಿಸಿದೆ’ ಎಂದರು.</p>.<p>‘ವಿಐಎಸ್ಎಲ್ ಕಾರ್ಖಾನೆ ಅಭಿವೃದ್ಧಿಗೆ ಕೂಡಲೇ ಬಂಡವಾಳ ತೊಡಗಿಸುವ ಜತೆಗೆ ಅದರ ಪುನಶ್ಚೇತನಕ್ಕೆ ಒತ್ತು ನೀಡುವ ಕೆಲಸವನ್ನು ಕೇಂದ್ರ ಸರ್ಕಾರ, ಉಕ್ಕು ಪ್ರಾಧಿಕಾರ ಮಾಡಬೇಕು’ ಎಂದು ಒತ್ತಾಯಿಸಿದರು.</p>.<p>‘ಸದ್ಯ ಹೋರಾಟ ಆರಂಭವಾಗಿದೆ. ಮುಂದಿನ ದಿನಗಳಲ್ಲಿ ಉಗ್ರ ಸ್ವರೂಪದ ಹೋರಾಟವನ್ನು ಮಾಡಲಾಗುವುದು’ ಎಂದು ತಿಳಿಸಿದರು.</p>.<p>‘ಕಾರ್ಖಾನೆಯನ್ನು ಸಾರ್ವಜನಿಕ ಉದ್ದಿಮೆಯಾಗಿ ಉಳಿಸುವಲ್ಲಿ, ಬಂಡವಾಳ ಹೂಡಿಸುವಲ್ಲಿ ವಿಫಲರಾದ ಸಂಸದ ಬಿ.ವೈ. ರಾಘವೇಂದ್ರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ನಮ್ಮ ಹೋರಾಟದ ಜೊತೆ ಕೈ ಜೋಡಿಸಬೇಕು’ ಎಂದು ಒತ್ತಾಯಿಸಿದರು.</p>.<p>‘ರಾಜ್ಯ ಸರ್ಕಾರ ಗಣಿ ನೀಡಿದರೆ ಬಂಡವಾಳ ಹೂಡುವುದಾಗಿ ಕೇಂದ್ರ ಉಕ್ಕು ಸಚಿವರು ಭರವಸೆ ನೀಡಿದ್ದರು. ಅದರಂತೆ ರಾಜ್ಯ ನಡೆದುಕೊಂಡಿದೆ. ಈಗ ಕೇಂದ್ರ ಸರ್ಕಾರ ತಾನು ಹೇಳಿದ ರೀತಿಯಲ್ಲಿ ನಡೆದುಕೊಂಡು ಕಾರ್ಖಾನೆ ಹಾಗೂ ಕಾರ್ಮಿಕರ ಭವಿಷ್ಯ ಉಳಿಸುವ ಕೆಲಸ ಮಾಡಬೇಕು’ ಎಂದು ಆಗ್ರಹಿಸಿದರು.</p>.<p>ಕಾರ್ಮಿಕ ಸಂಘದ ಮಾಜಿ ಅಧ್ಯಕ್ಷ ಜೆ.ಎನ್.ಚಂದ್ರಹಾಸ, ಕಾರ್ಮಿಕ ಮುಖಂಡರಾದ ಬಸಂತಕುಮಾರ್, ರಾಘವೇಂದ್ರ, ಅಮೃತಕುಮಾರ್, ಮೋಹನ್, ಕಾಂಗ್ರೆಸ್ ಮುಖಂಡ ಚಂದ್ರೇಗೌಡ, ಕರುಣಾಮೂರ್ತಿ, ಗುತ್ತಿಗೆ ಕಾರ್ಮಿಕ ಸಂಘದ ಸುರೇಶ್, ರಾಜೇಶ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>