<p><strong>ಭದ್ರಾವತಿ (ಶಿವಮೊಗ್ಗ)</strong>: ಇಲ್ಲಿನ ವಿಶ್ವೇಶರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯ ಪುನಶ್ಚೇತನಕ್ಕೆ ₹ 5,000 ಕೋಟಿ ಅನುದಾನ ನೀಡಲು ಭಾರತೀಯ ಉಕ್ಕು ಪ್ರಾಧಿಕಾರ (ಎಸ್ಎಐಎಲ್) ನಿರ್ಧರಿಸಿದೆ. ಕಾರ್ಖಾನೆಯ ಪುನಶ್ಚೇತನಕ್ಕೆ ಪ್ರಧಾನಿ ನರೇಂದ್ರ ಮೋದಿ ಕೂಡ ಒಪ್ಪಿಗೆ ಸೂಚಿಸಿದ್ದಾರೆ ಎಂದು ಕೇಂದ್ರ ಉಕ್ಕು, ಬೃಹತ್ ಕೈಗಾರಿಕೆ ಸಚಿವ ಎಚ್.ಡಿ. ಕುಮಾರಸ್ವಾಮಿ ಘೋಷಿಸಿದರು.</p>.<p>ಭದ್ರಾವತಿಯಲ್ಲಿ ಶನಿವಾರ ಆರಂಭವಾದ ತರಳಬಾಳು ಹುಣ್ಣಿಮೆ ಮಹೋತ್ಸವದಲ್ಲಿ ಮಾತನಾಡಿದ ಅವರು, ‘ಎರಡೂವರೆ ತಿಂಗಳಲ್ಲಿ ಕಾರ್ಖಾನೆಗೆ ದೊಡ್ಡಮಟ್ಟದ ಕಾಯಕಲ್ಪ ನೀಡಲಿದ್ದೇವೆ. ಇದರಲ್ಲಿ ಯಾವುದೇ ಸಂಶಯ ಬೇಡ’ ಎಂದು ಭರವಸೆ ನೀಡಿದರು.</p>.<p>ವಿಐಎಸ್ಎಲ್ ಪುನಶ್ಚೇತನ ಕುರಿತು ಭಾರತೀಯ ಉಕ್ಕು ಪ್ರಾಧಿಕಾರ ಕೈಗೊಂಡಿರುವ ನಿರ್ಧಾರಕ್ಕೆ ಕೇಂದ್ರ ಹಣಕಾಸು ಸಚಿವರ ಸಹಿ ಮಾತ್ರ ಬಾಕಿ ಇದೆ ಎಂದರು.</p>.<p><span class="bold"><strong>‘ಸಿರಿಗೆರೆ ಮಠದಿಂದ ₹5 ಕೋಟಿ’: </strong></span>ಭದ್ರಾವತಿಯ ವಿಐಎಸ್ಎಲ್ ಕಾರ್ಖಾನೆಯ ಪುನಃಶ್ಚೇತನಕ್ಕೆ ಪುನಶ್ಚೇತನ ಕಾರ್ಯಕ್ಕೆ ಸಿರಿಗೆರೆ ಮಠದಿಂದಲೂ ₹5 ಕೋಟಿ ಕೊಡುವುದಾಗಿ ಸಿರಿಗೆರೆಯ ತರಳಬಾಳು ಮಠದ ಶಿವಾಚಾರ್ಯ ಸ್ವಾಮೀಜಿ ವಾಗ್ದಾನ ಮಾಡಿದರು. </p>.<p>ತರಳಬಾಳು ಹುಣ್ಣಿಮೆ ಮಹೋತ್ಸವದಲ್ಲಿ ಕಾಣಿಕೆ ಸಂಗ್ರಹವಾಗಿ ಉಳಿದ ಹಣ ಹಾಗೂ ಮಠದಿಂದ ಅದಕ್ಕೆ ಇನ್ನಷ್ಟು ಹಣ ಸೇರಿಸಿ ಕೊಡುವುದಾಗಿ ಹೇಳಿದರು.</p>.<p>ಇದೇ ವೇಳೆ, ಮುಂಬರುವ ಕೇಂದ್ರ ಬಜೆಟ್ನಲ್ಲಿ ಕಾರ್ಖಾನೆ ಪುನಶ್ಚೇತನಕ್ಕೆ ಅಗತ್ಯ ಹಣಕಾಸು ವ್ಯವಸ್ಥೆ ಮಾಡುವಂತೆ ಕುಮಾರಸ್ವಾಮಿಯವರಿಗೆ ಸ್ವಾಮೀಜಿ ಸಲಹೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭದ್ರಾವತಿ (ಶಿವಮೊಗ್ಗ)</strong>: ಇಲ್ಲಿನ ವಿಶ್ವೇಶರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯ ಪುನಶ್ಚೇತನಕ್ಕೆ ₹ 5,000 ಕೋಟಿ ಅನುದಾನ ನೀಡಲು ಭಾರತೀಯ ಉಕ್ಕು ಪ್ರಾಧಿಕಾರ (ಎಸ್ಎಐಎಲ್) ನಿರ್ಧರಿಸಿದೆ. ಕಾರ್ಖಾನೆಯ ಪುನಶ್ಚೇತನಕ್ಕೆ ಪ್ರಧಾನಿ ನರೇಂದ್ರ ಮೋದಿ ಕೂಡ ಒಪ್ಪಿಗೆ ಸೂಚಿಸಿದ್ದಾರೆ ಎಂದು ಕೇಂದ್ರ ಉಕ್ಕು, ಬೃಹತ್ ಕೈಗಾರಿಕೆ ಸಚಿವ ಎಚ್.ಡಿ. ಕುಮಾರಸ್ವಾಮಿ ಘೋಷಿಸಿದರು.</p>.<p>ಭದ್ರಾವತಿಯಲ್ಲಿ ಶನಿವಾರ ಆರಂಭವಾದ ತರಳಬಾಳು ಹುಣ್ಣಿಮೆ ಮಹೋತ್ಸವದಲ್ಲಿ ಮಾತನಾಡಿದ ಅವರು, ‘ಎರಡೂವರೆ ತಿಂಗಳಲ್ಲಿ ಕಾರ್ಖಾನೆಗೆ ದೊಡ್ಡಮಟ್ಟದ ಕಾಯಕಲ್ಪ ನೀಡಲಿದ್ದೇವೆ. ಇದರಲ್ಲಿ ಯಾವುದೇ ಸಂಶಯ ಬೇಡ’ ಎಂದು ಭರವಸೆ ನೀಡಿದರು.</p>.<p>ವಿಐಎಸ್ಎಲ್ ಪುನಶ್ಚೇತನ ಕುರಿತು ಭಾರತೀಯ ಉಕ್ಕು ಪ್ರಾಧಿಕಾರ ಕೈಗೊಂಡಿರುವ ನಿರ್ಧಾರಕ್ಕೆ ಕೇಂದ್ರ ಹಣಕಾಸು ಸಚಿವರ ಸಹಿ ಮಾತ್ರ ಬಾಕಿ ಇದೆ ಎಂದರು.</p>.<p><span class="bold"><strong>‘ಸಿರಿಗೆರೆ ಮಠದಿಂದ ₹5 ಕೋಟಿ’: </strong></span>ಭದ್ರಾವತಿಯ ವಿಐಎಸ್ಎಲ್ ಕಾರ್ಖಾನೆಯ ಪುನಃಶ್ಚೇತನಕ್ಕೆ ಪುನಶ್ಚೇತನ ಕಾರ್ಯಕ್ಕೆ ಸಿರಿಗೆರೆ ಮಠದಿಂದಲೂ ₹5 ಕೋಟಿ ಕೊಡುವುದಾಗಿ ಸಿರಿಗೆರೆಯ ತರಳಬಾಳು ಮಠದ ಶಿವಾಚಾರ್ಯ ಸ್ವಾಮೀಜಿ ವಾಗ್ದಾನ ಮಾಡಿದರು. </p>.<p>ತರಳಬಾಳು ಹುಣ್ಣಿಮೆ ಮಹೋತ್ಸವದಲ್ಲಿ ಕಾಣಿಕೆ ಸಂಗ್ರಹವಾಗಿ ಉಳಿದ ಹಣ ಹಾಗೂ ಮಠದಿಂದ ಅದಕ್ಕೆ ಇನ್ನಷ್ಟು ಹಣ ಸೇರಿಸಿ ಕೊಡುವುದಾಗಿ ಹೇಳಿದರು.</p>.<p>ಇದೇ ವೇಳೆ, ಮುಂಬರುವ ಕೇಂದ್ರ ಬಜೆಟ್ನಲ್ಲಿ ಕಾರ್ಖಾನೆ ಪುನಶ್ಚೇತನಕ್ಕೆ ಅಗತ್ಯ ಹಣಕಾಸು ವ್ಯವಸ್ಥೆ ಮಾಡುವಂತೆ ಕುಮಾರಸ್ವಾಮಿಯವರಿಗೆ ಸ್ವಾಮೀಜಿ ಸಲಹೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>