<p><strong>ನವದೆಹಲಿ</strong>: ಭದ್ರಾವತಿಯ ಸರ್. ಎಂ. ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯನ್ನು ಪುನಶ್ಚೇತನಗೊಳಿಸುವ ಪ್ರಯತ್ನ ನಡೆಯುತ್ತಿದ್ದು, ವಿಸ್ತೃತ ಯೋಜನಾ ವರದಿಯು (ಡಿಪಿಆರ್) ಎರಡು ತಿಂಗಳಲ್ಲಿ ಸಿದ್ಧವಾಗಲಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ. ಕುಮಾರಸ್ವಾಮಿ ತಿಳಿಸಿದರು. </p>.<p>ಶುಕ್ರವಾರ ಇಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರಾಜ್ಯದ ಅಭಿವೃದ್ಧಿ ವಿಷಯದಲ್ಲಿ ರಾಜಕೀಯ ಮಾಡುವ ಪ್ರಶ್ನೆ ಇಲ್ಲ’ ಎಂದು ಸ್ಪಷ್ಟಪಡಿಸಿದರು. </p>.<p>‘ಈ ವರ್ಷಾಂತ್ಯಕ್ಕೆ ಪುನಶ್ಚೇತನ ಯೋಜನೆ ಕಾರ್ಯರೂಪಕ್ಕೆ ತರಲಾಗುವುದು. ಪ್ರಧಾನಿ ನರೇಂದ್ರ ಮೋದಿ ಈ ಯೋಜನೆಗೆ ಡಿಸೆಂಬರ್ನಲ್ಲಿ ಅಡಿಗಲ್ಲು ಹಾಕಲಿದ್ದಾರೆ’ ಎಂದರು. </p>.<p>‘ಇಡೀ ಕಾರ್ಖಾನೆಯನ್ನು ಹೊಸದಾಗಿ ಮರು ನಿರ್ಮಾಣ ಮಾಡಬೇಕಿದೆ. ಸುಮಾರು ₹8,000 ಕೋಟಿಯಿಂದ ₹10,000 ಕೋಟಿ ಹೂಡಿಕೆ ಮಾಡುವ ಬಗ್ಗೆ ಚಿಂತನೆ ನಡೆದಿದೆ. ಈಗಾಗಲೇ ಆ ಕಾರ್ಖಾನೆ ಭಾರತೀಯ ಉಕ್ಕು ಪ್ರಾಧಿಕಾರದ ಅಧೀನದಲ್ಲಿದೆ. ಮುಂದಿನ ದಿನಗಳಲ್ಲಿ ರಾಷ್ಟ್ರದಲ್ಲಿ ಉಕ್ಕು ಕ್ಷೇತ್ರದಲ್ಲಿ ಪ್ರಾಧಿಕಾರ ₹1 ಲಕ್ಷ ಕೋಟಿ ಮೊತ್ತ ಹೂಡಿಕೆ ಮಾಡಲಿದೆ. ಅದೇ ಸಂದರ್ಭದಲ್ಲಿ ವಿಐಎಸ್ಎಲ್ ಕಾರ್ಖಾನೆಯನ್ನು ಕೂಡ ಪುನಶ್ಚೇತನಗೊಳಿಸಲಾಗುವುದು’ ಎಂದು ಸಚಿವರು ಹೇಳಿದರು.</p>.<p>‘ಪ್ರಧಾನಿ ನರೇಂದ್ರ ಮೋದಿ ಅವರು 2030ರ ಹೊತ್ತಿಗೆ ದೇಶೀಯವಾಗಿ ವಾರ್ಷಿಕ 300 ದಶಲಕ್ಷ ಟನ್ ಉಕ್ಕು ಉತ್ಪಾದಿಸುವ ಗುರಿ ನಿಗದಿ ಮಾಡಿದ್ದು, ಅದಕ್ಕೆ ಪೂರಕವಾಗಿ ಸರಕಾರಿ ಸ್ವಾಮ್ಯದಲ್ಲಿರುವ ಉಕ್ಕು ಸ್ಥಾವರಗಳನ್ನು ಬಲಪಡಿಸುವ ಕೆಲಸ ಮಾಡಲಾಗುತ್ತಿದೆ’ ಎಂದರು. </p>.<p>ವಿಐಎಸ್ಎಲ್ ಖಾಸಗೀಕರಣ ಮಾಡಲು ಕೇಂದ್ರ ಸಚಿವ ಸಂಪುಟವು 2016ರಲ್ಲಿ ಒಪ್ಪಿಗೆ ನೀಡಿತ್ತು. ಸಂಸ್ಥೆಯನ್ನು ಸಂಪೂರ್ಣವಾಗಿ ಮಾರಾಟ ಮಾಡಲು ಹೂಡಿಕೆ ಮತ್ತು ಸಾರ್ವಜನಿಕ ಆಸ್ತಿ ನಿರ್ವಹಣಾ ಇಲಾಖೆಯು (ಡಿಐಪಿಎಎಂ) ಈ ಹಿಂದೆ ಬಿಡ್ ಕರೆದಿತ್ತು. ಬಿಡ್ದಾರರು ಆಸಕ್ತಿ ವಹಿಸದ ಕಾರಣಕ್ಕೆ ಕಾರ್ಖಾನೆಯನ್ನು ಖಾಸಗೀಕರಣ ಮಾಡುವ ಪ್ರಕ್ರಿಯೆಯನ್ನು ಕೇಂದ್ರ ಸರ್ಕಾರ 2022ರ ನವೆಂಬರ್ನಲ್ಲಿ ಕೈ ಬಿಟ್ಟಿತ್ತು. ನಂತರ ಸರ್ಕಾರವು ಕಾರ್ಖಾನೆಯನ್ನು ಮುಚ್ಚುವ ಪ್ರಕ್ರಿಯೆ ಆರಂಭಿಸಿತ್ತು. ಸಂಸ್ಥೆಯ ಪುನರುಜ್ಜೀವನದ ಸಾಧ್ಯಾಸಾಧ್ಯತೆಗಳ ಪರಿಶೀಲನೆ ನಡೆಸುವಂತೆ ಅಧಿಕಾರಿಗಳಿಗೆ ಕುಮಾರಸ್ವಾಮಿ ಈ ಹಿಂದೆ ನಿರ್ದೇಶನ ನೀಡಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಭದ್ರಾವತಿಯ ಸರ್. ಎಂ. ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯನ್ನು ಪುನಶ್ಚೇತನಗೊಳಿಸುವ ಪ್ರಯತ್ನ ನಡೆಯುತ್ತಿದ್ದು, ವಿಸ್ತೃತ ಯೋಜನಾ ವರದಿಯು (ಡಿಪಿಆರ್) ಎರಡು ತಿಂಗಳಲ್ಲಿ ಸಿದ್ಧವಾಗಲಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ. ಕುಮಾರಸ್ವಾಮಿ ತಿಳಿಸಿದರು. </p>.<p>ಶುಕ್ರವಾರ ಇಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರಾಜ್ಯದ ಅಭಿವೃದ್ಧಿ ವಿಷಯದಲ್ಲಿ ರಾಜಕೀಯ ಮಾಡುವ ಪ್ರಶ್ನೆ ಇಲ್ಲ’ ಎಂದು ಸ್ಪಷ್ಟಪಡಿಸಿದರು. </p>.<p>‘ಈ ವರ್ಷಾಂತ್ಯಕ್ಕೆ ಪುನಶ್ಚೇತನ ಯೋಜನೆ ಕಾರ್ಯರೂಪಕ್ಕೆ ತರಲಾಗುವುದು. ಪ್ರಧಾನಿ ನರೇಂದ್ರ ಮೋದಿ ಈ ಯೋಜನೆಗೆ ಡಿಸೆಂಬರ್ನಲ್ಲಿ ಅಡಿಗಲ್ಲು ಹಾಕಲಿದ್ದಾರೆ’ ಎಂದರು. </p>.<p>‘ಇಡೀ ಕಾರ್ಖಾನೆಯನ್ನು ಹೊಸದಾಗಿ ಮರು ನಿರ್ಮಾಣ ಮಾಡಬೇಕಿದೆ. ಸುಮಾರು ₹8,000 ಕೋಟಿಯಿಂದ ₹10,000 ಕೋಟಿ ಹೂಡಿಕೆ ಮಾಡುವ ಬಗ್ಗೆ ಚಿಂತನೆ ನಡೆದಿದೆ. ಈಗಾಗಲೇ ಆ ಕಾರ್ಖಾನೆ ಭಾರತೀಯ ಉಕ್ಕು ಪ್ರಾಧಿಕಾರದ ಅಧೀನದಲ್ಲಿದೆ. ಮುಂದಿನ ದಿನಗಳಲ್ಲಿ ರಾಷ್ಟ್ರದಲ್ಲಿ ಉಕ್ಕು ಕ್ಷೇತ್ರದಲ್ಲಿ ಪ್ರಾಧಿಕಾರ ₹1 ಲಕ್ಷ ಕೋಟಿ ಮೊತ್ತ ಹೂಡಿಕೆ ಮಾಡಲಿದೆ. ಅದೇ ಸಂದರ್ಭದಲ್ಲಿ ವಿಐಎಸ್ಎಲ್ ಕಾರ್ಖಾನೆಯನ್ನು ಕೂಡ ಪುನಶ್ಚೇತನಗೊಳಿಸಲಾಗುವುದು’ ಎಂದು ಸಚಿವರು ಹೇಳಿದರು.</p>.<p>‘ಪ್ರಧಾನಿ ನರೇಂದ್ರ ಮೋದಿ ಅವರು 2030ರ ಹೊತ್ತಿಗೆ ದೇಶೀಯವಾಗಿ ವಾರ್ಷಿಕ 300 ದಶಲಕ್ಷ ಟನ್ ಉಕ್ಕು ಉತ್ಪಾದಿಸುವ ಗುರಿ ನಿಗದಿ ಮಾಡಿದ್ದು, ಅದಕ್ಕೆ ಪೂರಕವಾಗಿ ಸರಕಾರಿ ಸ್ವಾಮ್ಯದಲ್ಲಿರುವ ಉಕ್ಕು ಸ್ಥಾವರಗಳನ್ನು ಬಲಪಡಿಸುವ ಕೆಲಸ ಮಾಡಲಾಗುತ್ತಿದೆ’ ಎಂದರು. </p>.<p>ವಿಐಎಸ್ಎಲ್ ಖಾಸಗೀಕರಣ ಮಾಡಲು ಕೇಂದ್ರ ಸಚಿವ ಸಂಪುಟವು 2016ರಲ್ಲಿ ಒಪ್ಪಿಗೆ ನೀಡಿತ್ತು. ಸಂಸ್ಥೆಯನ್ನು ಸಂಪೂರ್ಣವಾಗಿ ಮಾರಾಟ ಮಾಡಲು ಹೂಡಿಕೆ ಮತ್ತು ಸಾರ್ವಜನಿಕ ಆಸ್ತಿ ನಿರ್ವಹಣಾ ಇಲಾಖೆಯು (ಡಿಐಪಿಎಎಂ) ಈ ಹಿಂದೆ ಬಿಡ್ ಕರೆದಿತ್ತು. ಬಿಡ್ದಾರರು ಆಸಕ್ತಿ ವಹಿಸದ ಕಾರಣಕ್ಕೆ ಕಾರ್ಖಾನೆಯನ್ನು ಖಾಸಗೀಕರಣ ಮಾಡುವ ಪ್ರಕ್ರಿಯೆಯನ್ನು ಕೇಂದ್ರ ಸರ್ಕಾರ 2022ರ ನವೆಂಬರ್ನಲ್ಲಿ ಕೈ ಬಿಟ್ಟಿತ್ತು. ನಂತರ ಸರ್ಕಾರವು ಕಾರ್ಖಾನೆಯನ್ನು ಮುಚ್ಚುವ ಪ್ರಕ್ರಿಯೆ ಆರಂಭಿಸಿತ್ತು. ಸಂಸ್ಥೆಯ ಪುನರುಜ್ಜೀವನದ ಸಾಧ್ಯಾಸಾಧ್ಯತೆಗಳ ಪರಿಶೀಲನೆ ನಡೆಸುವಂತೆ ಅಧಿಕಾರಿಗಳಿಗೆ ಕುಮಾರಸ್ವಾಮಿ ಈ ಹಿಂದೆ ನಿರ್ದೇಶನ ನೀಡಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>