<p><strong>ಬೆಂಗಳೂರು:</strong> ಉಚ್ಚಾಟಿತ ಎಐಎಡಿಎಂಕೆ ನಾಯಕಿ ವಿ.ಕೆ. ಶಶಿಕಲಾ, ಸೋಮವಾರ ತಮಿಳುನಾಡಿನತ್ತ ಪ್ರಯಾಣ ಬೆಳೆಸಿದ್ದಾರೆ. ಕೊರೊನಾ ಸೋಂಕು ತಗುಲಿದ್ದರಿಂದಾಗಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಬಿಡುಗಡೆಯಾಗಿದ್ದ ಅವರು ನಗರದ ದೇವನಹಳ್ಳಿ ಬಳಿ ಇರುವ ರೆಸಾರ್ಟ್ವೊಂದರಲ್ಲಿ ವಾಸ್ತವ್ಯ ಹೂಡಿದ್ದರು.</p>.<p>ತಮಿಳುನಾಡಿಗೆ ವಾಪಸಾಗುತ್ತಿರುವ ಶಶಿಕಲಾ ಅವರನ್ನು ಸ್ವಾಗತಿಸಲು ನೂರಾರು ಬೆಂಬಲಿಗರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ಕೊಡಗುರ್ಕಿಗೆ ಆಗಮಿಸಿದ್ದಾರೆ.</p>.<p><strong>ಓದಿ:</strong><a href="https://www.prajavani.net/india-news/high-alert-in-up-as-glacier-breaks-off-in-neighbouring-uttarakhand-803388.html" itemprop="url">ಉತ್ತರಾಖಂಡದಲ್ಲಿ ಹಿಮನದಿ ಸ್ಪೋಟ: ಉ.ಪ್ರದೇಶದ ಗಂಗಾತಟದ ಜಿಲ್ಲೆಗಳಲ್ಲಿ ಹೈ ಅಲರ್ಟ್</a></p>.<p>ಈ ಮಧ್ಯೆ, ತಮಿಳುನಾಡು ಗಡಿಯವರೆಗೂ ಶಶಿಕಲಾ ಅವರ ಸ್ವಾಗತ ಕಾರ್ಯಕ್ರಮಗಳಿಗೆ ಬೆಂಗಳೂರು ಪೊಲೀಸರು ನಿಷೇಧ ಹೇರಿದ್ದಾರೆ. ಕೋವಿಡ್ ನಿಯಮ ಪಾಲನೆ ಹಾಗೂ ಕಾನೂನು, ಸುವ್ಯವಸ್ಥೆ ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ.</p>.<p>ಶಶಿಕಲಾ ಬೆಂಬಲಿಗರು ರ್ಯಾಲಿಗಳನ್ನು ನಡೆಸಲು ಮಾಡಿರುವ ಮನವಿಯನ್ನು ಬೆಂಗಳೂರು ಗ್ರಾಮಾಂತರ ಮತ್ತು ನಗರ ಪೊಲೀಸರು ತಿರಸ್ಕರಿಸಿದ್ದಾರೆ.</p>.<p>ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಜೈಲು ಶಿಕ್ಷೆ ಅನುಭವಿಸಿ ಬಿಡುಗಡೆಯಾಗಿದ್ದ ಶಶಿಕಲಾ, ಕೆಲ ದಿನಗಳ ಕಾಲ ನಗರದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ನಂತರ, ಅಲ್ಲಿಂದ ಬಿಡುಗಡೆಯಾಗಿ ವಿಶ್ರಾಂತಿ ಪಡೆಯಲು ರೆಸಾರ್ಟ್ನಲ್ಲಿ ಉಳಿದುಕೊಂಡಿದ್ದರು.</p>.<p><strong>ಓದಿ:</strong><a href="https://www.prajavani.net/district/bagalkot/massive-fire-accident-in-ilakkal-commercial-complex-bagalakote-803395.html" itemprop="url">ಇಳಕಲ್: ಭಾರೀ ಅಗ್ನಿ ಅವಘಡ, ವಾಣಿಜ್ಯ ಸಂಕೀರ್ಣ ಅಗ್ನಿಗಾಹುತಿ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಉಚ್ಚಾಟಿತ ಎಐಎಡಿಎಂಕೆ ನಾಯಕಿ ವಿ.ಕೆ. ಶಶಿಕಲಾ, ಸೋಮವಾರ ತಮಿಳುನಾಡಿನತ್ತ ಪ್ರಯಾಣ ಬೆಳೆಸಿದ್ದಾರೆ. ಕೊರೊನಾ ಸೋಂಕು ತಗುಲಿದ್ದರಿಂದಾಗಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಬಿಡುಗಡೆಯಾಗಿದ್ದ ಅವರು ನಗರದ ದೇವನಹಳ್ಳಿ ಬಳಿ ಇರುವ ರೆಸಾರ್ಟ್ವೊಂದರಲ್ಲಿ ವಾಸ್ತವ್ಯ ಹೂಡಿದ್ದರು.</p>.<p>ತಮಿಳುನಾಡಿಗೆ ವಾಪಸಾಗುತ್ತಿರುವ ಶಶಿಕಲಾ ಅವರನ್ನು ಸ್ವಾಗತಿಸಲು ನೂರಾರು ಬೆಂಬಲಿಗರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ಕೊಡಗುರ್ಕಿಗೆ ಆಗಮಿಸಿದ್ದಾರೆ.</p>.<p><strong>ಓದಿ:</strong><a href="https://www.prajavani.net/india-news/high-alert-in-up-as-glacier-breaks-off-in-neighbouring-uttarakhand-803388.html" itemprop="url">ಉತ್ತರಾಖಂಡದಲ್ಲಿ ಹಿಮನದಿ ಸ್ಪೋಟ: ಉ.ಪ್ರದೇಶದ ಗಂಗಾತಟದ ಜಿಲ್ಲೆಗಳಲ್ಲಿ ಹೈ ಅಲರ್ಟ್</a></p>.<p>ಈ ಮಧ್ಯೆ, ತಮಿಳುನಾಡು ಗಡಿಯವರೆಗೂ ಶಶಿಕಲಾ ಅವರ ಸ್ವಾಗತ ಕಾರ್ಯಕ್ರಮಗಳಿಗೆ ಬೆಂಗಳೂರು ಪೊಲೀಸರು ನಿಷೇಧ ಹೇರಿದ್ದಾರೆ. ಕೋವಿಡ್ ನಿಯಮ ಪಾಲನೆ ಹಾಗೂ ಕಾನೂನು, ಸುವ್ಯವಸ್ಥೆ ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ.</p>.<p>ಶಶಿಕಲಾ ಬೆಂಬಲಿಗರು ರ್ಯಾಲಿಗಳನ್ನು ನಡೆಸಲು ಮಾಡಿರುವ ಮನವಿಯನ್ನು ಬೆಂಗಳೂರು ಗ್ರಾಮಾಂತರ ಮತ್ತು ನಗರ ಪೊಲೀಸರು ತಿರಸ್ಕರಿಸಿದ್ದಾರೆ.</p>.<p>ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಜೈಲು ಶಿಕ್ಷೆ ಅನುಭವಿಸಿ ಬಿಡುಗಡೆಯಾಗಿದ್ದ ಶಶಿಕಲಾ, ಕೆಲ ದಿನಗಳ ಕಾಲ ನಗರದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ನಂತರ, ಅಲ್ಲಿಂದ ಬಿಡುಗಡೆಯಾಗಿ ವಿಶ್ರಾಂತಿ ಪಡೆಯಲು ರೆಸಾರ್ಟ್ನಲ್ಲಿ ಉಳಿದುಕೊಂಡಿದ್ದರು.</p>.<p><strong>ಓದಿ:</strong><a href="https://www.prajavani.net/district/bagalkot/massive-fire-accident-in-ilakkal-commercial-complex-bagalakote-803395.html" itemprop="url">ಇಳಕಲ್: ಭಾರೀ ಅಗ್ನಿ ಅವಘಡ, ವಾಣಿಜ್ಯ ಸಂಕೀರ್ಣ ಅಗ್ನಿಗಾಹುತಿ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>