ಬೆಳಗಾವಿ: ಈ ಚುನಾವಣೆಯಲ್ಲಿ ಬಿಜೆಪಿಯು ಸಂಘಟಿತ ಪ್ರಯತ್ನ ಮಾಡಿದೆ. ಹೀಗಾಗಿ ವಿಫಲ ಆಗಿದೆ ಎನ್ನುವುದಿಲ್ಲ ಎಂದು ಬಿಜೆಪಿ ಅಭ್ಯರ್ಥಿ ಮಹಾಂತೇಶ ಕವಟಗಿಮಠ ಹೇಳಿದರು.
ನಾನು ಮೊದಲ ಪ್ರಾಶಸ್ತ್ಯದ ಮತಗಳಿಂದ ಗೆಲ್ಲಲಾಗಿಲ್ಲ. ನಮ್ಮ ಮತಗಳು ವಿಭಜನೆ ಆಗಿವೆ. ಅಧಿಕೃತ ಅಭ್ಯರ್ಥಿ ಇದ್ದಾಗ ಇನ್ನೊಬ್ಬ ಅಭ್ಯರ್ಥಿ ಹಾಕುವ ಅಗತ್ಯವಿರಲಿಲ್ಲ. ಆದರೆ, ಎರಡನೇ ಪ್ರಾಶಸ್ತ್ಯದ ಮತಗಳ ಎಣಿಕೆ ಪ್ರಗತಿಯಲ್ಲಿರುವುದರಿಂದ ಈಗಲೂ ನನಗೆ ಗೆಲ್ಲುವ ವಿಶ್ವಾಸವಿದೆ ಎಂದು ಅವರು ಹೇಳಿದರು.
ಈ ನಡುವೆ, ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ ಗೆದ್ದಿದ್ದಾರೆ ಎಂದು ಭಾವಿಸಿ ಅಭಿಮಾನಿಗಳು ಸಂಭ್ರಮ ಆಚರಿಸುತ್ತಿದ್ದಾರೆ.