<p><strong>ಸುವರ್ಣ ವಿಧಾನಸೌಧ (ಬೆಳಗಾವಿ):</strong> ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿದೆ ಎನ್ನಲಾದ ಮತ ಕಳವು ಪ್ರಕರಣವು ವಿಧಾನಸಭೆಯಲ್ಲಿ ಮಂಗಳವಾರ ಪ್ರತಿಧ್ವನಿಸಿತು.</p>.<p>ವಿಷಯ ಪ್ರಸ್ತಾಪಿಸಿದ ಕಾಂಗ್ರೆಸ್ನ ಬಿ.ಆರ್. ಪಾಟೀಲ, ‘ನನಗೆ ವಿಧಾನಸಭೆಗೆ ಬರಲು ಅಡ್ಡಿ ಮಾಡುವ ಪ್ರಯತ್ನ ನಡೆದಿತ್ತು. ಆ ಪ್ರಯತ್ನ ಈಗ ಬಯಲಾಗಿದೆ. ಮತ ಕಳವು ನಡೆಸಿರುವುದು ಬಹಿರಂಗವಾಗಿದೆ. ಈ ಬಗ್ಗೆ ಚರ್ಚೆಗೆ ಅವಕಾಶ ನೀಡಬೇಕು’ ಎಂದು ಒತ್ತಾಯಿಸಿದರು.</p>.<p>ಅದಕ್ಕೆ ವಿರೋಧ ಪಕ್ಷದ ಸದಸ್ಯರು ಗಟ್ಟಿ ಧ್ವನಿಯಿಂದ ಆಕ್ಷೇಪ ವ್ಯಕ್ತಪಡಿಸಿದರು. ‘ಮತ ಕಳವು ಪದ್ಧತಿ ಶುರು ಮಾಡಿದ್ದೇ ಕಾಂಗ್ರೆಸ್. ಈ ವಿಚಾರವಾಗಿ ಎಸ್ಐಟಿ ಮಧ್ಯಂತರ ವರದಿ ಸಲ್ಲಿಸಿದ ನಂತರ ಚರ್ಚೆ ಮಾಡೋಣ’ ಎಂದು ಬಿಜೆಪಿಯ ವಿ. ಸುನಿಲ್ ಕುಮಾರ್ ಮತ್ತಿತರರು ಆಡಳಿತ ಪಕ್ಷದ ಸದಸ್ಯರ ಮೇಲೆ ಮುಗಿಬಿದ್ದರು.</p>.<p>ವಿಷಯವನ್ನು ಚರ್ಚೆಗೆ ತೆಗೆದುಕೊಳ್ಳಬೇಕು ಎಂದು ಕಾಂಗ್ರೆಸ್ ಸದಸ್ಯರು ಆಗ್ರಹಿಸಿದಾಗ, ‘ಈ ವಿಷಯ ಕಾರ್ಯಸೂಚಿಯಲ್ಲಿ ಇಲ್ಲ. ಹೀಗಾಗಿ, ಈಗ ಚರ್ಚೆ ಬೇಡ’ ಎಂದು ಸಭಾಧ್ಯಕ್ಷ ಯು.ಟಿ. ಖಾದರ್ ಸಮಾಧಾನಪಡಿಸಲು ಯತ್ನಿಸಿದರು.</p>.<p>ಬಿ.ಆರ್. ಪಾಟೀಲ ಅವರ ಆಗ್ರಹಕ್ಕೆ ದನಿಗೂಡಿಸಿದ ಸಚಿವ ಪ್ರಿಯಾಂಕ್ ಖರ್ಗೆ, ‘ಒಂದು ಮತಕ್ಕೆ ₹80ಕ್ಕೆ ವೆಚ್ಚ ಮಾಡಿ ಕಳವು ಮಾಡಲಾಗಿದೆ. ಚುನಾವಣಾ ಪ್ರಕ್ರಿಯೆಯೇ ಹರಾಜು ಆಗುತ್ತಿದೆ. ಸಂವಿಧಾನವನ್ನು ಕೊಲೆ ಮಾಡುತ್ತಿದ್ದಾರೆ. ಸದನದಲ್ಲಿ ಚರ್ಚೆಗೆ ಅವಕಾಶ ಕೊಡಿ’ ಎಂದು ಮನವಿ ಮಾಡಿದರು. ಈ ವೇಳೆ ಆಡಳಿತ ಮತ್ತು ವಿರೋಧ ಪಕ್ಷದ ಸದಸ್ಯರ ನಡುವೆ ವಾಕ್ಸಮರವೇ ನಡೆಯಿತು.</p>.<p>ಈ ಮಧ್ಯೆ, ‘ಗೃಹಲಕ್ಷ್ಮೀ’ ಯೋಜನೆಯ ವಿಚಾರ ಪ್ರಸ್ತಾಪಿಸಿದ ವಿರೋಧ ಪಕ್ಷದ ನಾಯಕ ಆರ್. ಅಶೋಕ, ‘ಫೆಬ್ರುವರಿ ಮತ್ತು ಮಾರ್ಚ್ ತಿಂಗಳಲ್ಲಿ ‘ಗೃಹಲಕ್ಷ್ಮೀ’ ಹಣ ನೀಡಲಾಗಿದೆ ಎಂದು ಹೇಳುವ ಮೂಲಕ ಸಚಿವರು ಸಸನಕ್ಕೆ ತಪ್ಪು ಮಾಹಿತಿ ನೀಡಿರುವ ಬಗ್ಗೆ ಚರ್ಚೆಗೆ ಅವಕಾಶ ನೀಡಬೇಕು’ ಎಂದು ಪಟ್ಟು ಹಿಡಿದರು.</p>.<p>ಮಧ್ಯ ಪ್ರವೇಶಿಸಿದ ಸಭಾಧ್ಯಕ್ಷರು, ‘ಸಚಿವರ ಜೊತೆ ಮಾತನಾಡಿ ಸ್ಪಷ್ಟನೆ ಕೊಡಿಸುತ್ತೇನೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸುವರ್ಣ ವಿಧಾನಸೌಧ (ಬೆಳಗಾವಿ):</strong> ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿದೆ ಎನ್ನಲಾದ ಮತ ಕಳವು ಪ್ರಕರಣವು ವಿಧಾನಸಭೆಯಲ್ಲಿ ಮಂಗಳವಾರ ಪ್ರತಿಧ್ವನಿಸಿತು.</p>.<p>ವಿಷಯ ಪ್ರಸ್ತಾಪಿಸಿದ ಕಾಂಗ್ರೆಸ್ನ ಬಿ.ಆರ್. ಪಾಟೀಲ, ‘ನನಗೆ ವಿಧಾನಸಭೆಗೆ ಬರಲು ಅಡ್ಡಿ ಮಾಡುವ ಪ್ರಯತ್ನ ನಡೆದಿತ್ತು. ಆ ಪ್ರಯತ್ನ ಈಗ ಬಯಲಾಗಿದೆ. ಮತ ಕಳವು ನಡೆಸಿರುವುದು ಬಹಿರಂಗವಾಗಿದೆ. ಈ ಬಗ್ಗೆ ಚರ್ಚೆಗೆ ಅವಕಾಶ ನೀಡಬೇಕು’ ಎಂದು ಒತ್ತಾಯಿಸಿದರು.</p>.<p>ಅದಕ್ಕೆ ವಿರೋಧ ಪಕ್ಷದ ಸದಸ್ಯರು ಗಟ್ಟಿ ಧ್ವನಿಯಿಂದ ಆಕ್ಷೇಪ ವ್ಯಕ್ತಪಡಿಸಿದರು. ‘ಮತ ಕಳವು ಪದ್ಧತಿ ಶುರು ಮಾಡಿದ್ದೇ ಕಾಂಗ್ರೆಸ್. ಈ ವಿಚಾರವಾಗಿ ಎಸ್ಐಟಿ ಮಧ್ಯಂತರ ವರದಿ ಸಲ್ಲಿಸಿದ ನಂತರ ಚರ್ಚೆ ಮಾಡೋಣ’ ಎಂದು ಬಿಜೆಪಿಯ ವಿ. ಸುನಿಲ್ ಕುಮಾರ್ ಮತ್ತಿತರರು ಆಡಳಿತ ಪಕ್ಷದ ಸದಸ್ಯರ ಮೇಲೆ ಮುಗಿಬಿದ್ದರು.</p>.<p>ವಿಷಯವನ್ನು ಚರ್ಚೆಗೆ ತೆಗೆದುಕೊಳ್ಳಬೇಕು ಎಂದು ಕಾಂಗ್ರೆಸ್ ಸದಸ್ಯರು ಆಗ್ರಹಿಸಿದಾಗ, ‘ಈ ವಿಷಯ ಕಾರ್ಯಸೂಚಿಯಲ್ಲಿ ಇಲ್ಲ. ಹೀಗಾಗಿ, ಈಗ ಚರ್ಚೆ ಬೇಡ’ ಎಂದು ಸಭಾಧ್ಯಕ್ಷ ಯು.ಟಿ. ಖಾದರ್ ಸಮಾಧಾನಪಡಿಸಲು ಯತ್ನಿಸಿದರು.</p>.<p>ಬಿ.ಆರ್. ಪಾಟೀಲ ಅವರ ಆಗ್ರಹಕ್ಕೆ ದನಿಗೂಡಿಸಿದ ಸಚಿವ ಪ್ರಿಯಾಂಕ್ ಖರ್ಗೆ, ‘ಒಂದು ಮತಕ್ಕೆ ₹80ಕ್ಕೆ ವೆಚ್ಚ ಮಾಡಿ ಕಳವು ಮಾಡಲಾಗಿದೆ. ಚುನಾವಣಾ ಪ್ರಕ್ರಿಯೆಯೇ ಹರಾಜು ಆಗುತ್ತಿದೆ. ಸಂವಿಧಾನವನ್ನು ಕೊಲೆ ಮಾಡುತ್ತಿದ್ದಾರೆ. ಸದನದಲ್ಲಿ ಚರ್ಚೆಗೆ ಅವಕಾಶ ಕೊಡಿ’ ಎಂದು ಮನವಿ ಮಾಡಿದರು. ಈ ವೇಳೆ ಆಡಳಿತ ಮತ್ತು ವಿರೋಧ ಪಕ್ಷದ ಸದಸ್ಯರ ನಡುವೆ ವಾಕ್ಸಮರವೇ ನಡೆಯಿತು.</p>.<p>ಈ ಮಧ್ಯೆ, ‘ಗೃಹಲಕ್ಷ್ಮೀ’ ಯೋಜನೆಯ ವಿಚಾರ ಪ್ರಸ್ತಾಪಿಸಿದ ವಿರೋಧ ಪಕ್ಷದ ನಾಯಕ ಆರ್. ಅಶೋಕ, ‘ಫೆಬ್ರುವರಿ ಮತ್ತು ಮಾರ್ಚ್ ತಿಂಗಳಲ್ಲಿ ‘ಗೃಹಲಕ್ಷ್ಮೀ’ ಹಣ ನೀಡಲಾಗಿದೆ ಎಂದು ಹೇಳುವ ಮೂಲಕ ಸಚಿವರು ಸಸನಕ್ಕೆ ತಪ್ಪು ಮಾಹಿತಿ ನೀಡಿರುವ ಬಗ್ಗೆ ಚರ್ಚೆಗೆ ಅವಕಾಶ ನೀಡಬೇಕು’ ಎಂದು ಪಟ್ಟು ಹಿಡಿದರು.</p>.<p>ಮಧ್ಯ ಪ್ರವೇಶಿಸಿದ ಸಭಾಧ್ಯಕ್ಷರು, ‘ಸಚಿವರ ಜೊತೆ ಮಾತನಾಡಿ ಸ್ಪಷ್ಟನೆ ಕೊಡಿಸುತ್ತೇನೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>