<p><strong>ಬೀದರ್</strong>: ‘ಮತ ಕಳ್ಳತನದಿಂದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ‘ಒಬ್ಬ ವ್ಯಕ್ತಿ–ಒಂದು ಮತ’ ಎಂಬ ಸಿದ್ಧಾಂತವನ್ನು ದುರ್ಬಲಗೊಳಿಸಿದೆ’ ಎಂದು ಸಂಸದ ಸಾಗರ ಖಂಡ್ರೆ ಅಭಿಪ್ರಾಯ ಪಟ್ಟಿದ್ದಾರೆ.</p><p>ಮತ ಕಳ್ಳತನದಿಂದ ಜನರ ಆಡಳಿತ ಹಕ್ಕುಗಳ ‘ಸರ್ಕಾರ್ ಚೋರಿ’ಯಾಗಿದೆ ಎಂದು ಗುರುವಾರ ಹೊರಡಿಸಿರುವ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p><p>ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಬಿಡುಗಡೆಗೊಳಿಸಿರುವ ‘ವೋಟ್ ಚೋರಿ ‘ಎಚ್’ ಫೈಲ್ಸ್’, ಭಾರತದ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಉಳಿಸಲು ಮತ್ತು ಭವಿಷ್ಯದ ಚುನಾವಣೆಗಳನ್ನು ಶುದ್ಧೀಕರಿಸಲು ಮಹತ್ವದ ಹೆಜ್ಜೆಯಾಗಿದೆ. ಈ ವರದಿ ಹರಿಯಾಣದಲ್ಲಿ ನಡೆದ ಭಾರಿ ಪ್ರಮಾಣದ ಮತದಾರರ ಪಟ್ಟಿಯಲ್ಲಿನ ಅಕ್ರಮಗಳ ಕುರಿತು ಇಡೀ ದೇಶದ ಕಣ್ಣು ತೆರೆಸಿದೆ. ಚುನಾವಣಾ ಪ್ರಕ್ರಿಯೆಯ ಪಾರದರ್ಶಕತೆ ಮೇಲೆ ಗಂಭೀರ ಪ್ರಶ್ನೆ ಎತ್ತಿದೆ ಎಂದಿದ್ದಾರೆ.</p><p>ನಕಲಿ ಮತದಾರರು, ನಕಲಿ ಫೋಟೋಗಳು, ಅಮಾನ್ಯ ವಿಳಾಸಗಳು, ಗುಂಪು ಮತದಾರರ ನೋಂದಣಿ, ರಾಜ್ಯಾಂತರ ಮತದಾರರ ನಕಲು ಹಾಗೂ ವಿರೋಧ ಪಕ್ಷದ ಮತದಾರರ ಹೆಸರುಗಳ ಅಳಿಕೆ ಸೇರಿದಂತೆ ಹಲವಾರು ಅಕ್ರಮಗಳು ಬಿಜೆಪಿ ಸರ್ಕಾರದ ಆಶ್ರಯದಲ್ಲಿ ನಡೆದಿವೆ ಎಂದು ಆರೋಪಿಸಿದ್ದಾರೆ.</p><p>ಈ ಅಕ್ರಮದ ಬಗ್ಗೆ ರಾಷ್ಟ್ರ ಮಟ್ಟದಲ್ಲಿ ತನಿಖೆ ನಡೆಸಬೇಕು. ಮತದಾರರ ಪಟ್ಟಿಯ ಸಂಪೂರ್ಣ ಪಾರದರ್ಶಕತೆ ಮತ್ತು ಸುಧಾರಣೆಗೆ ಕಾಂಗ್ರೆಸ್ ಪಕ್ಷದ ಹೋರಾಟಕ್ಕೆ ನಾನು ಸಂಪೂರ್ಣ ಬೆಂಬಲ ವ್ಯಕ್ತಪಡಿಸುತ್ತೇನೆ. ಜನತೆ ತಮ್ಮ ಮತದಾನದ ಹಕ್ಕನ್ನು ಕಾಪಾಡಿಕೊಳ್ಳುವುದು ಪ್ರಜಾಸತ್ತಾತ್ಮಕ ಕರ್ತವ್ಯ. ಯುವ ಮತದಾರರು ಈ ’ವೋಟ್ ಚೋರಿ’ಯ ದೀರ್ಘಾವಧಿಯ ಪರಿಣಾಮಗಳನ್ನು ಅರಿತು, ನ್ಯಾಯಸಮ್ಮತ ಚುನಾವಣೆಗೆ ಹೋರಾಡಬೇಕು. ಶಿಕ್ಷಣ, ಉದ್ಯೋಗ, ಆರೋಗ್ಯ ಮತ್ತು ನ್ಯಾಯದ ಹಕ್ಕುಗಳು ನ್ಯಾಯಯುತ ಚುನಾವಣೆಯ ಫಲಿತಾಂಶದ ಮೇಲೆ ನಿಂತಿವೆ. ಪ್ರಜಾಸತ್ತಾತ್ಮಕ ಭಾರತವನ್ನು ಕಾಪಾಡುವುದು ಎಲ್ಲರ ಜವಾಬ್ದಾರಿಯಾಗಿದೆ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್</strong>: ‘ಮತ ಕಳ್ಳತನದಿಂದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ‘ಒಬ್ಬ ವ್ಯಕ್ತಿ–ಒಂದು ಮತ’ ಎಂಬ ಸಿದ್ಧಾಂತವನ್ನು ದುರ್ಬಲಗೊಳಿಸಿದೆ’ ಎಂದು ಸಂಸದ ಸಾಗರ ಖಂಡ್ರೆ ಅಭಿಪ್ರಾಯ ಪಟ್ಟಿದ್ದಾರೆ.</p><p>ಮತ ಕಳ್ಳತನದಿಂದ ಜನರ ಆಡಳಿತ ಹಕ್ಕುಗಳ ‘ಸರ್ಕಾರ್ ಚೋರಿ’ಯಾಗಿದೆ ಎಂದು ಗುರುವಾರ ಹೊರಡಿಸಿರುವ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p><p>ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಬಿಡುಗಡೆಗೊಳಿಸಿರುವ ‘ವೋಟ್ ಚೋರಿ ‘ಎಚ್’ ಫೈಲ್ಸ್’, ಭಾರತದ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಉಳಿಸಲು ಮತ್ತು ಭವಿಷ್ಯದ ಚುನಾವಣೆಗಳನ್ನು ಶುದ್ಧೀಕರಿಸಲು ಮಹತ್ವದ ಹೆಜ್ಜೆಯಾಗಿದೆ. ಈ ವರದಿ ಹರಿಯಾಣದಲ್ಲಿ ನಡೆದ ಭಾರಿ ಪ್ರಮಾಣದ ಮತದಾರರ ಪಟ್ಟಿಯಲ್ಲಿನ ಅಕ್ರಮಗಳ ಕುರಿತು ಇಡೀ ದೇಶದ ಕಣ್ಣು ತೆರೆಸಿದೆ. ಚುನಾವಣಾ ಪ್ರಕ್ರಿಯೆಯ ಪಾರದರ್ಶಕತೆ ಮೇಲೆ ಗಂಭೀರ ಪ್ರಶ್ನೆ ಎತ್ತಿದೆ ಎಂದಿದ್ದಾರೆ.</p><p>ನಕಲಿ ಮತದಾರರು, ನಕಲಿ ಫೋಟೋಗಳು, ಅಮಾನ್ಯ ವಿಳಾಸಗಳು, ಗುಂಪು ಮತದಾರರ ನೋಂದಣಿ, ರಾಜ್ಯಾಂತರ ಮತದಾರರ ನಕಲು ಹಾಗೂ ವಿರೋಧ ಪಕ್ಷದ ಮತದಾರರ ಹೆಸರುಗಳ ಅಳಿಕೆ ಸೇರಿದಂತೆ ಹಲವಾರು ಅಕ್ರಮಗಳು ಬಿಜೆಪಿ ಸರ್ಕಾರದ ಆಶ್ರಯದಲ್ಲಿ ನಡೆದಿವೆ ಎಂದು ಆರೋಪಿಸಿದ್ದಾರೆ.</p><p>ಈ ಅಕ್ರಮದ ಬಗ್ಗೆ ರಾಷ್ಟ್ರ ಮಟ್ಟದಲ್ಲಿ ತನಿಖೆ ನಡೆಸಬೇಕು. ಮತದಾರರ ಪಟ್ಟಿಯ ಸಂಪೂರ್ಣ ಪಾರದರ್ಶಕತೆ ಮತ್ತು ಸುಧಾರಣೆಗೆ ಕಾಂಗ್ರೆಸ್ ಪಕ್ಷದ ಹೋರಾಟಕ್ಕೆ ನಾನು ಸಂಪೂರ್ಣ ಬೆಂಬಲ ವ್ಯಕ್ತಪಡಿಸುತ್ತೇನೆ. ಜನತೆ ತಮ್ಮ ಮತದಾನದ ಹಕ್ಕನ್ನು ಕಾಪಾಡಿಕೊಳ್ಳುವುದು ಪ್ರಜಾಸತ್ತಾತ್ಮಕ ಕರ್ತವ್ಯ. ಯುವ ಮತದಾರರು ಈ ’ವೋಟ್ ಚೋರಿ’ಯ ದೀರ್ಘಾವಧಿಯ ಪರಿಣಾಮಗಳನ್ನು ಅರಿತು, ನ್ಯಾಯಸಮ್ಮತ ಚುನಾವಣೆಗೆ ಹೋರಾಡಬೇಕು. ಶಿಕ್ಷಣ, ಉದ್ಯೋಗ, ಆರೋಗ್ಯ ಮತ್ತು ನ್ಯಾಯದ ಹಕ್ಕುಗಳು ನ್ಯಾಯಯುತ ಚುನಾವಣೆಯ ಫಲಿತಾಂಶದ ಮೇಲೆ ನಿಂತಿವೆ. ಪ್ರಜಾಸತ್ತಾತ್ಮಕ ಭಾರತವನ್ನು ಕಾಪಾಡುವುದು ಎಲ್ಲರ ಜವಾಬ್ದಾರಿಯಾಗಿದೆ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>