<p><strong>ಕಲಬುರಗಿ</strong>: 'ವೋಟ್ ಚೋರಿ ಪ್ರಕರಣಕ್ಕೆ ಹೊಸ ತಿರುವು ಪಡೆದಿದ್ದು, ಮತದಾರರ ಪಟ್ಟಿಯಿಂದ ಮತದಾರರ ಹೆಸರು ಅಳಿಸಿಹಾಕಲು ಪ್ರತಿಯೊಂದಕ್ಕೆ ₹ 80 ಪಾವತಿಸಲಾಗಿದೆ ಎನ್ನುವ ಅಂಶ ಎಸ್ಐಟಿ ತನಿಖೆಯಿಂದ ತಿಳಿದುಬಂದಿದೆ. ಇದು ಮತಗಳವು ವಿಚಾರದಲ್ಲಿ ನಾವು ಇಷ್ಟು ದಿನ ಹೇಳುತ್ತಿದ್ದ ವಿಷಯ ಎಸ್ಐಟಿ ತನಿಖೆಯಿಂದ ದೃಢಪಟ್ಟಿದೆ' ಎಂದು </p><p>ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.</p><p>'ಎಲ್ಲಾ ತನಿಖೆಗಳು ಈಗ ಬಿಜೆಪಿ ನಾಯಕರು ಮತ್ತು ಅವರ ಸಹಚರರ ಅಕ್ರಮವನ್ನು ತೋರಿಸುತ್ತವೆ. ಬಿಜೆಪಿಯ ವೋಟ್ ಚೋರಿಯ ಪ್ರತಿಯೊಂದು ಕೊಳಕು ತಂತ್ರ ಮತ್ತು ಕಾರ್ಯವೈಖರಿಯನ್ನು ಒಂದೊಂದಾಗಿ ಬಹಿರಂಗಪಡಿಸುತ್ತಿವೆ. ಈ ವಿಷಯದಲ್ಲಿ ಭಾಗಿಯಾಗಿರುವ ಪ್ರತಿಯೊಬ್ಬರನ್ನು ಹೊಣೆಗಾರರನ್ನಾಗಿ ಮಾಡಿ ಜೈಲಿಗೆ ಹಾಕಲಾಗುವುದು' ಎಂದು ಸಾಮಾಜಿಕ ಜಾಲತಾಣ 'ಎಕ್ಸ್'ನಲ್ಲಿ ಪೋಸ್ಟ್ ಮಾಡಿದ್ದಾರೆ.</p><p> 2023ರ ವಿಧಾನಸಭೆ ಚುನಾವಣೆಗೆ ಮುನ್ನ, ಆಳಂದ ಮತ ಕ್ಷೇತ್ರದಲ್ಲಿ ಹಣ ನೀಡುವ ಮೂಲಕ ಸುಮಾರು 6,000ಕ್ಕೂ ಅಧಿಕ ಮತದಾರರನ್ನು ಪಟ್ಟಿಯಿಂದ ತೆಗೆದು ಹಾಕಲು ಯತ್ನಿಸಲಾಗಿತ್ತು.</p><p>ಕಲಬುರಗಿಯ ಪೂರ್ಣ ಪ್ರಮಾಣದ ದತ್ತಾಂಶ ಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ನಿರ್ವಾಹಕರು ಮತದಾರರ ಹೆಸರುಗಳನ್ನು ವ್ಯವಸ್ಥಿತವಾಗಿ ಅಳಿಸಿಹಾಕುವ ಮೂಲಕ ಪ್ರಜಾಪ್ರಭುತ್ವ ಪ್ರಕ್ರಿಯೆಯನ್ನು ಹಾಳುಗೆಡವುತ್ತಿದ್ದರು ಎಂದು ಟೀಕಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ</strong>: 'ವೋಟ್ ಚೋರಿ ಪ್ರಕರಣಕ್ಕೆ ಹೊಸ ತಿರುವು ಪಡೆದಿದ್ದು, ಮತದಾರರ ಪಟ್ಟಿಯಿಂದ ಮತದಾರರ ಹೆಸರು ಅಳಿಸಿಹಾಕಲು ಪ್ರತಿಯೊಂದಕ್ಕೆ ₹ 80 ಪಾವತಿಸಲಾಗಿದೆ ಎನ್ನುವ ಅಂಶ ಎಸ್ಐಟಿ ತನಿಖೆಯಿಂದ ತಿಳಿದುಬಂದಿದೆ. ಇದು ಮತಗಳವು ವಿಚಾರದಲ್ಲಿ ನಾವು ಇಷ್ಟು ದಿನ ಹೇಳುತ್ತಿದ್ದ ವಿಷಯ ಎಸ್ಐಟಿ ತನಿಖೆಯಿಂದ ದೃಢಪಟ್ಟಿದೆ' ಎಂದು </p><p>ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.</p><p>'ಎಲ್ಲಾ ತನಿಖೆಗಳು ಈಗ ಬಿಜೆಪಿ ನಾಯಕರು ಮತ್ತು ಅವರ ಸಹಚರರ ಅಕ್ರಮವನ್ನು ತೋರಿಸುತ್ತವೆ. ಬಿಜೆಪಿಯ ವೋಟ್ ಚೋರಿಯ ಪ್ರತಿಯೊಂದು ಕೊಳಕು ತಂತ್ರ ಮತ್ತು ಕಾರ್ಯವೈಖರಿಯನ್ನು ಒಂದೊಂದಾಗಿ ಬಹಿರಂಗಪಡಿಸುತ್ತಿವೆ. ಈ ವಿಷಯದಲ್ಲಿ ಭಾಗಿಯಾಗಿರುವ ಪ್ರತಿಯೊಬ್ಬರನ್ನು ಹೊಣೆಗಾರರನ್ನಾಗಿ ಮಾಡಿ ಜೈಲಿಗೆ ಹಾಕಲಾಗುವುದು' ಎಂದು ಸಾಮಾಜಿಕ ಜಾಲತಾಣ 'ಎಕ್ಸ್'ನಲ್ಲಿ ಪೋಸ್ಟ್ ಮಾಡಿದ್ದಾರೆ.</p><p> 2023ರ ವಿಧಾನಸಭೆ ಚುನಾವಣೆಗೆ ಮುನ್ನ, ಆಳಂದ ಮತ ಕ್ಷೇತ್ರದಲ್ಲಿ ಹಣ ನೀಡುವ ಮೂಲಕ ಸುಮಾರು 6,000ಕ್ಕೂ ಅಧಿಕ ಮತದಾರರನ್ನು ಪಟ್ಟಿಯಿಂದ ತೆಗೆದು ಹಾಕಲು ಯತ್ನಿಸಲಾಗಿತ್ತು.</p><p>ಕಲಬುರಗಿಯ ಪೂರ್ಣ ಪ್ರಮಾಣದ ದತ್ತಾಂಶ ಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ನಿರ್ವಾಹಕರು ಮತದಾರರ ಹೆಸರುಗಳನ್ನು ವ್ಯವಸ್ಥಿತವಾಗಿ ಅಳಿಸಿಹಾಕುವ ಮೂಲಕ ಪ್ರಜಾಪ್ರಭುತ್ವ ಪ್ರಕ್ರಿಯೆಯನ್ನು ಹಾಳುಗೆಡವುತ್ತಿದ್ದರು ಎಂದು ಟೀಕಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>