<p><strong>ಬೆಂಗಳೂರು:</strong> ದೇಶದ ಯಾವುದೇ ಮೂಲೆಯಲ್ಲಿದ್ದರೂ ‘ಮತದಾರರ ಸಹಾಯವಾಣಿ’ ಆ್ಯಪ್ನಲ್ಲಿ ನೋಂದಣಿ ಮಾಡಿಕೊಳ್ಳುವ ಮೂಲಕ ಮತದಾರರ ಪಟ್ಟಿಗೆ ಸೇರಬಹುದು ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿಮನೋಜ್ಕುಮಾರ್ ಮೀನಾ ಹೇಳಿದರು.</p>.<p>ಬೆಂಗಳೂರು ವಿಶ್ವವಿದ್ಯಾಲಯ ಮಂಗಳವಾರ ಹಮ್ಮಿಕೊಂಡಿದ್ದ ಮತದಾರರ ನೋಂದಣಿ<br />ಜಾಗೃತಿ ಅಭಿಯಾನ ಮತ್ತು ಸಂವಿಧಾನ ದಿನ ಕಾರ್ಯಕ್ರಮ ಉದ್ಘಾಟಿಸಿ, ಈಗಾಗಲೇ ಶೇ 99ರಷ್ಟು ಮತದಾರರ ನೋಂದಣಿ ಆನ್ಲೈನ್ ಮೂಲಕವೇ ನಡೆದಿದೆ. 18 ವರ್ಷ ತುಂಬಿದ ಯುವ<br />ಜನರು ನೋಂದಣಿ ಮಾಡಿಕೊಳ್ಳಬೇಕು. ಸದೃಢ ದೇಶ ಕಟ್ಟಲು, ಭವಿಷ್ಯದ ಭಾರತ ನಿರ್ಮಾಣಕ್ಕಾಗಿ ಮತದಾರರ ಪಟ್ಟಿಗೆ ಸೇರಬೇಕು ಎಂದು ಸಲಹೆ ನೀಡಿದರು.</p>.<p>ರಾಜ್ಯ ಹಾಗೂ ಕೇಂದ್ರ ಚುನಾವಣಾ ಆಯೋಗ ಗಳ ಜವಾಬ್ದಾರಿಗಳು ಭಿನ್ನ. ಸ್ಥಳೀಯ ಸಂಸ್ಥೆ<br />ಗಳ ಚುನಾವಣಾ ಹೊಣೆಗಾರಿಕೆ ರಾಜ್ಯ ಚುನಾವಣಾ ಆಯೋಗದ ಮೇಲಿರುತ್ತದೆ. ಲೋಕಸಭೆ, ರಾಜ್ಯಸಭೆ, ವಿಧಾನಸಭೆಗಳ ಚುನಾವಣೆ ಗಳನ್ನುಕೇಂದ್ರ ಚುನಾವಣಾ ಆಯೋಗ ನಡೆಸು ತ್ತದೆ. ಈಚಿನ ದಿನಗಳಲ್ಲಿ ಚುನಾವಣಾ ನಿಯಮಗಳಲ್ಲಿ ಸಾಕಷ್ಟು ಬದಲಾವಣೆಗಳಾಗಿವೆ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ದೇಶದ ಯಾವುದೇ ಮೂಲೆಯಲ್ಲಿದ್ದರೂ ‘ಮತದಾರರ ಸಹಾಯವಾಣಿ’ ಆ್ಯಪ್ನಲ್ಲಿ ನೋಂದಣಿ ಮಾಡಿಕೊಳ್ಳುವ ಮೂಲಕ ಮತದಾರರ ಪಟ್ಟಿಗೆ ಸೇರಬಹುದು ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿಮನೋಜ್ಕುಮಾರ್ ಮೀನಾ ಹೇಳಿದರು.</p>.<p>ಬೆಂಗಳೂರು ವಿಶ್ವವಿದ್ಯಾಲಯ ಮಂಗಳವಾರ ಹಮ್ಮಿಕೊಂಡಿದ್ದ ಮತದಾರರ ನೋಂದಣಿ<br />ಜಾಗೃತಿ ಅಭಿಯಾನ ಮತ್ತು ಸಂವಿಧಾನ ದಿನ ಕಾರ್ಯಕ್ರಮ ಉದ್ಘಾಟಿಸಿ, ಈಗಾಗಲೇ ಶೇ 99ರಷ್ಟು ಮತದಾರರ ನೋಂದಣಿ ಆನ್ಲೈನ್ ಮೂಲಕವೇ ನಡೆದಿದೆ. 18 ವರ್ಷ ತುಂಬಿದ ಯುವ<br />ಜನರು ನೋಂದಣಿ ಮಾಡಿಕೊಳ್ಳಬೇಕು. ಸದೃಢ ದೇಶ ಕಟ್ಟಲು, ಭವಿಷ್ಯದ ಭಾರತ ನಿರ್ಮಾಣಕ್ಕಾಗಿ ಮತದಾರರ ಪಟ್ಟಿಗೆ ಸೇರಬೇಕು ಎಂದು ಸಲಹೆ ನೀಡಿದರು.</p>.<p>ರಾಜ್ಯ ಹಾಗೂ ಕೇಂದ್ರ ಚುನಾವಣಾ ಆಯೋಗ ಗಳ ಜವಾಬ್ದಾರಿಗಳು ಭಿನ್ನ. ಸ್ಥಳೀಯ ಸಂಸ್ಥೆ<br />ಗಳ ಚುನಾವಣಾ ಹೊಣೆಗಾರಿಕೆ ರಾಜ್ಯ ಚುನಾವಣಾ ಆಯೋಗದ ಮೇಲಿರುತ್ತದೆ. ಲೋಕಸಭೆ, ರಾಜ್ಯಸಭೆ, ವಿಧಾನಸಭೆಗಳ ಚುನಾವಣೆ ಗಳನ್ನುಕೇಂದ್ರ ಚುನಾವಣಾ ಆಯೋಗ ನಡೆಸು ತ್ತದೆ. ಈಚಿನ ದಿನಗಳಲ್ಲಿ ಚುನಾವಣಾ ನಿಯಮಗಳಲ್ಲಿ ಸಾಕಷ್ಟು ಬದಲಾವಣೆಗಳಾಗಿವೆ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>