ಚಿಲುಮೆ ಸಂಸ್ಥೆ ವಿರುದ್ಧ ಹಲಸೂರು ಗೇಟ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಶಿವಾಜಿನಗರದ ಕಂದಾಯ ಅಧಿಕಾರಿ ಸುಹೇಲ್ ಅಹಮದ್, ಮಹದೇವಪುರದ ಕಂದಾಯ ಅಧಿಕಾರಿ ಕೆ.ಚಂದ್ರಶೇಖರ್, ರಾಜರಾಜೇಶ್ವರಿ ನಗರದ ಕಂದಾಯ ಅಧಿಕಾರಿ ಮಹೇಶ್ ಹಾಗೂ ಚಿಕ್ಕಪೇಟೆಯ ಉಪ ಕಂದಾಯ ಅಧಿಕಾರಿ ವಿ.ಬಿ. ಭೀಮಾಶಂಕರ್ ಅವರನ್ನು ಶನಿವಾರ ಸಂಜೆ ಬಂಧಿಸಲಾಗಿತ್ತು. ಅವರನ್ನೆಲ್ಲ ಕೋರಮಂಗಲದಲ್ಲಿರುವ ನ್ಯಾಯಾಧೀಶರ ಮನೆಗೆ ಭಾನುವಾರ ಸಂಜೆ ಹಾಜರುಪಡಿಸಲಾಯಿತು.