<p><strong>ಬೆಂಗಳೂರು</strong>: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮಾಡಿದ ಅಪಮಾನವು ಮುನಿರತ್ನ ಅವರಿಗೆ ಮಾಡಿದ ಅಪಮಾನವಲ್ಲ. ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಮತದಾರರಿಗೆ ಮಾಡಿದ ಅಪಮಾನ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.</p>.<p>ಸುದ್ದಿಗಾರರ ಜತೆ ಮಾತನಾಡಿದ ಅವರು, ಮುಂಬರುವ ದಿನಗಳಲ್ಲಿ ಡಿ.ಕೆ.ಶಿವಕುಮಾರ್ ಮತ್ತು ಕಾಂಗ್ರೆಸ್ ಪಕ್ಷಕ್ಕೆ ಕರಿಟೋಪಿಯ ಬೆಲೆ ಏನೆಂದು ತೋರಿಸುತ್ತೇವೆ ಎಂದು ಕಿಡಿಕಾರಿದರು.</p>.<p>ಒಬ್ಬ ಉಪಮುಖ್ಯಮಂತ್ರಿ, ಜವಾಬ್ದಾರಿಯುತ ಸಚಿವರಾಗಿ ಸಾರ್ವಜನಿಕ ಸ್ಥಳದಲ್ಲಿ ಹಾಗೂ ಒಬ್ಬ ಜನಪ್ರತಿನಿಧಿಯ ಬಗ್ಗೆ ಹೇಗೆ ನಡೆದುಕೊಳ್ಳಬೇಕು ಎಂಬ ಕನಿಷ್ಠ ಸೌಜನ್ಯವೂ ಶಿವಕುಮಾರ್ ಅವರಿಗೆ ಇಲ್ಲ ಎಂದು ಆಕ್ಷೇಪಿಸಿದರು.</p>.<p>ಅಧಿಕಾರ ಎಂಬುದು ಶಾಶ್ವತ ಅಲ್ಲ; ಡಿ.ಕೆ.ಶಿವಕುಮಾರ್ ಅವರ ನಡವಳಿಕೆ, ಮಾತಿನ ಧಾಟಿ, ಒಬ್ಬ ಚುನಾಯಿತ ಪ್ರತಿನಿಧಿಗೆ ಮಾಡಿದ ಅಪಮಾನದ ವಿರುದ್ಧ ಸಾರ್ವಜನಿಕರು ಮಾತನಾಡುತ್ತಿದ್ದಾರೆ ಎಂದು ನುಡಿದರು.</p>.<p><strong>ಸಭ್ಯತೆಯ ಪಾಠ ಮರೆತ ಡಿ.ಕೆ</strong></p><p>‘ಡಿ.ಕೆ.ಶಿವಕುಮಾರ್ ಅವರು ಸಾರ್ವಜನಿಕವಾಗಿ ಶಾಸಕ ಮುನಿರತ್ನ ಅವರನ್ನು ಸಭ್ಯತೆಯಿಂದ ನಡೆಸಿಕೊಂಡಿಲ್ಲ. ಮುನಿರತ್ನ ಅವರನ್ನು ಕರೆದಿರುವ ರೀತಿಯೂ ಸರಿಯಾಗಿಲ್ಲ. ಅವರು ಸಭ್ಯತೆಯ ಪಾಠವನ್ನು ಮರೆತಿದ್ದಾರೆ’ ಎಂದು ವಿಧಾನ ಪರಿಷತ್ನ ಬಿಜೆಪಿ ಸದಸ್ಯ ಸಿ.ಟಿ.ರವಿ ಟೀಕಿಸಿದರು.</p>.<p>ಸರ್ಕಾರದ ಪ್ರಾಯೋಜಿತ ಯಾವುದೇ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಪಾಲಿಸಲೇಬೇಕು. ಅದು ಸಂವಿಧಾನ ಶಾಸಕರಿಗೆ ನೀಡಿರುವ ಅಧಿಕಾರ ಎಂದು ಹೇಳಿದರು.</p>.<p>‘ಕಾಂಗ್ರೆಸ್ ಪಕ್ಷದ ಕಾರ್ಯಕ್ರಮವಾಗಿದ್ದರೆ ನಮ್ಮ ಆಕ್ಷೇಪಣೆ ಇಲ್ಲ. ಪಕ್ಷದ ಕಾರ್ಯಕ್ರಮದಲ್ಲಿ ಅಧಿಕಾರಿಗಳು ಭಾಗವಹಿಸುವುದಿಲ್ಲ. ಅಲ್ಲಿ ನಡೆದದ್ದು ಸರ್ಕಾರದ ಕಾರ್ಯಕ್ರಮವೇ ಪಕ್ಷದ ಕಾರ್ಯಕ್ರಮವೇ’ ಎಂದು ರವಿ ಪ್ರಶ್ನಿಸಿದರು.</p>.<p>‘ಸರ್ಕಾರಿ ಕಾರ್ಯಕ್ರಮ ಆಗಿದ್ದರೆ ಅದರಲ್ಲಿ ಭಾಗವಹಿಸುವುದು ಶಾಸಕರಾದ ಮುನಿರತ್ನ ಅವರ ಹಕ್ಕು. ಸರ್ಕಾರದ ಕಾರ್ಯಕ್ರಮಕ್ಕೆ ಆಮಂತ್ರಿಸಿಲ್ಲವಾದರೆ ಅದು ಅಪರಾಧ ಮತ್ತು ಹಕ್ಕುಚ್ಯುತಿ ಆಗುತ್ತದೆ. ಯಾರು ಪ್ರಜಾಪ್ರಭುತ್ವದ ಮೌಲ್ಯವನ್ನು ಅಳವಡಿಸಿಕೊಂಡಿದ್ದಾರೋ ಅವರಿಗೆ ಜನಪ್ರತಿನಿಧಿಯ ಭಾವನೆಗಳು ಆರ್ಥವಾಗುತ್ತದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮಾಡಿದ ಅಪಮಾನವು ಮುನಿರತ್ನ ಅವರಿಗೆ ಮಾಡಿದ ಅಪಮಾನವಲ್ಲ. ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಮತದಾರರಿಗೆ ಮಾಡಿದ ಅಪಮಾನ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.</p>.<p>ಸುದ್ದಿಗಾರರ ಜತೆ ಮಾತನಾಡಿದ ಅವರು, ಮುಂಬರುವ ದಿನಗಳಲ್ಲಿ ಡಿ.ಕೆ.ಶಿವಕುಮಾರ್ ಮತ್ತು ಕಾಂಗ್ರೆಸ್ ಪಕ್ಷಕ್ಕೆ ಕರಿಟೋಪಿಯ ಬೆಲೆ ಏನೆಂದು ತೋರಿಸುತ್ತೇವೆ ಎಂದು ಕಿಡಿಕಾರಿದರು.</p>.<p>ಒಬ್ಬ ಉಪಮುಖ್ಯಮಂತ್ರಿ, ಜವಾಬ್ದಾರಿಯುತ ಸಚಿವರಾಗಿ ಸಾರ್ವಜನಿಕ ಸ್ಥಳದಲ್ಲಿ ಹಾಗೂ ಒಬ್ಬ ಜನಪ್ರತಿನಿಧಿಯ ಬಗ್ಗೆ ಹೇಗೆ ನಡೆದುಕೊಳ್ಳಬೇಕು ಎಂಬ ಕನಿಷ್ಠ ಸೌಜನ್ಯವೂ ಶಿವಕುಮಾರ್ ಅವರಿಗೆ ಇಲ್ಲ ಎಂದು ಆಕ್ಷೇಪಿಸಿದರು.</p>.<p>ಅಧಿಕಾರ ಎಂಬುದು ಶಾಶ್ವತ ಅಲ್ಲ; ಡಿ.ಕೆ.ಶಿವಕುಮಾರ್ ಅವರ ನಡವಳಿಕೆ, ಮಾತಿನ ಧಾಟಿ, ಒಬ್ಬ ಚುನಾಯಿತ ಪ್ರತಿನಿಧಿಗೆ ಮಾಡಿದ ಅಪಮಾನದ ವಿರುದ್ಧ ಸಾರ್ವಜನಿಕರು ಮಾತನಾಡುತ್ತಿದ್ದಾರೆ ಎಂದು ನುಡಿದರು.</p>.<p><strong>ಸಭ್ಯತೆಯ ಪಾಠ ಮರೆತ ಡಿ.ಕೆ</strong></p><p>‘ಡಿ.ಕೆ.ಶಿವಕುಮಾರ್ ಅವರು ಸಾರ್ವಜನಿಕವಾಗಿ ಶಾಸಕ ಮುನಿರತ್ನ ಅವರನ್ನು ಸಭ್ಯತೆಯಿಂದ ನಡೆಸಿಕೊಂಡಿಲ್ಲ. ಮುನಿರತ್ನ ಅವರನ್ನು ಕರೆದಿರುವ ರೀತಿಯೂ ಸರಿಯಾಗಿಲ್ಲ. ಅವರು ಸಭ್ಯತೆಯ ಪಾಠವನ್ನು ಮರೆತಿದ್ದಾರೆ’ ಎಂದು ವಿಧಾನ ಪರಿಷತ್ನ ಬಿಜೆಪಿ ಸದಸ್ಯ ಸಿ.ಟಿ.ರವಿ ಟೀಕಿಸಿದರು.</p>.<p>ಸರ್ಕಾರದ ಪ್ರಾಯೋಜಿತ ಯಾವುದೇ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಪಾಲಿಸಲೇಬೇಕು. ಅದು ಸಂವಿಧಾನ ಶಾಸಕರಿಗೆ ನೀಡಿರುವ ಅಧಿಕಾರ ಎಂದು ಹೇಳಿದರು.</p>.<p>‘ಕಾಂಗ್ರೆಸ್ ಪಕ್ಷದ ಕಾರ್ಯಕ್ರಮವಾಗಿದ್ದರೆ ನಮ್ಮ ಆಕ್ಷೇಪಣೆ ಇಲ್ಲ. ಪಕ್ಷದ ಕಾರ್ಯಕ್ರಮದಲ್ಲಿ ಅಧಿಕಾರಿಗಳು ಭಾಗವಹಿಸುವುದಿಲ್ಲ. ಅಲ್ಲಿ ನಡೆದದ್ದು ಸರ್ಕಾರದ ಕಾರ್ಯಕ್ರಮವೇ ಪಕ್ಷದ ಕಾರ್ಯಕ್ರಮವೇ’ ಎಂದು ರವಿ ಪ್ರಶ್ನಿಸಿದರು.</p>.<p>‘ಸರ್ಕಾರಿ ಕಾರ್ಯಕ್ರಮ ಆಗಿದ್ದರೆ ಅದರಲ್ಲಿ ಭಾಗವಹಿಸುವುದು ಶಾಸಕರಾದ ಮುನಿರತ್ನ ಅವರ ಹಕ್ಕು. ಸರ್ಕಾರದ ಕಾರ್ಯಕ್ರಮಕ್ಕೆ ಆಮಂತ್ರಿಸಿಲ್ಲವಾದರೆ ಅದು ಅಪರಾಧ ಮತ್ತು ಹಕ್ಕುಚ್ಯುತಿ ಆಗುತ್ತದೆ. ಯಾರು ಪ್ರಜಾಪ್ರಭುತ್ವದ ಮೌಲ್ಯವನ್ನು ಅಳವಡಿಸಿಕೊಂಡಿದ್ದಾರೋ ಅವರಿಗೆ ಜನಪ್ರತಿನಿಧಿಯ ಭಾವನೆಗಳು ಆರ್ಥವಾಗುತ್ತದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>