<p><strong>ಬೆಂಗಳೂರು</strong>: ‘ಸಾಲಗಾರರಿಗೆ ಮೈಕ್ರೊ ಫೈನಾನ್ಸ್ ಕಂಪನಿಗಳು, ಲೇವಾದೇವಿದಾರರು ಕಿರುಕುಳ ನೀಡುವುದನ್ನು ತಪ್ಪಿಸಲು ರಾಜ್ಯ ಸರ್ಕಾರ ರೂಪಿಸಿದ್ದ ಸುಗ್ರೀವಾಜ್ಞೆಯನ್ನು ಬಿಜೆಪಿಯವರು ರಾಜ್ಯಪಾಲರ ಮೇಲೆ ಒತ್ತಡ ಹೇರಿ ವಾಪಸು ಕಳುಹಿಸುವಂತೆ ಮಾಡಿದ್ದಾರೆ’ ಎಂದು ಕೆಪಿಸಿಸಿ ಉಪಾಧ್ಯಕ್ಷ ವಿ.ಎಸ್. ಉಗ್ರಪ್ಪ ಆರೋಪಿಸಿದರು.</p>.<p>ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸುಗ್ರೀವಾಜ್ಞೆ ಜಾರಿಗೆ ಬಂದರೆ ರಾಜ್ಯ ಸರ್ಕಾರಕ್ಕೆ ಒಳ್ಳೆಯ ಹೆಸರು ಬರಬಹುದೆಂದು ಈ ಕೆಲಸ ಮಾಡಿದ್ದಾರೆ’ ಎಂದು ದೂರಿದರು. </p>.<p>ರಾಜ್ಯ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಎಚ್.ಎಂ.ರೇವಣ್ಣ ಮಾತನಾಡಿ, ‘ಸಾಲಗಾರರಿಗೆ ರಕ್ಷಣೆ ನೀಡಲು ಸುಗ್ರೀವಾಜ್ಞೆ ಅತೀ ಅಗತ್ಯವಾಗಿತ್ತು. ರಿಸರ್ವ್ ಬ್ಯಾಂಕಿನ ನಿಯಮಗಳಿಗೆ ಅಡಿಯಲ್ಲಿ ಈ ಸುಗ್ರೀವಾಜ್ಞೆಯನ್ನು ಸಿದ್ಧಪಡಿಸಲಾಗಿತ್ತು. ಆದರೆ, ಅದನ್ನು ವಾಪಸ್ ಕಳುಹಿಸಿರುವ ರಾಜ್ಯಪಾಲರ ನಡೆದ ಒಪ್ಪುವಂಥದ್ದಲ್ಲ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಸಾಲಗಾರರಿಗೆ ಮೈಕ್ರೊ ಫೈನಾನ್ಸ್ ಕಂಪನಿಗಳು, ಲೇವಾದೇವಿದಾರರು ಕಿರುಕುಳ ನೀಡುವುದನ್ನು ತಪ್ಪಿಸಲು ರಾಜ್ಯ ಸರ್ಕಾರ ರೂಪಿಸಿದ್ದ ಸುಗ್ರೀವಾಜ್ಞೆಯನ್ನು ಬಿಜೆಪಿಯವರು ರಾಜ್ಯಪಾಲರ ಮೇಲೆ ಒತ್ತಡ ಹೇರಿ ವಾಪಸು ಕಳುಹಿಸುವಂತೆ ಮಾಡಿದ್ದಾರೆ’ ಎಂದು ಕೆಪಿಸಿಸಿ ಉಪಾಧ್ಯಕ್ಷ ವಿ.ಎಸ್. ಉಗ್ರಪ್ಪ ಆರೋಪಿಸಿದರು.</p>.<p>ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸುಗ್ರೀವಾಜ್ಞೆ ಜಾರಿಗೆ ಬಂದರೆ ರಾಜ್ಯ ಸರ್ಕಾರಕ್ಕೆ ಒಳ್ಳೆಯ ಹೆಸರು ಬರಬಹುದೆಂದು ಈ ಕೆಲಸ ಮಾಡಿದ್ದಾರೆ’ ಎಂದು ದೂರಿದರು. </p>.<p>ರಾಜ್ಯ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಎಚ್.ಎಂ.ರೇವಣ್ಣ ಮಾತನಾಡಿ, ‘ಸಾಲಗಾರರಿಗೆ ರಕ್ಷಣೆ ನೀಡಲು ಸುಗ್ರೀವಾಜ್ಞೆ ಅತೀ ಅಗತ್ಯವಾಗಿತ್ತು. ರಿಸರ್ವ್ ಬ್ಯಾಂಕಿನ ನಿಯಮಗಳಿಗೆ ಅಡಿಯಲ್ಲಿ ಈ ಸುಗ್ರೀವಾಜ್ಞೆಯನ್ನು ಸಿದ್ಧಪಡಿಸಲಾಗಿತ್ತು. ಆದರೆ, ಅದನ್ನು ವಾಪಸ್ ಕಳುಹಿಸಿರುವ ರಾಜ್ಯಪಾಲರ ನಡೆದ ಒಪ್ಪುವಂಥದ್ದಲ್ಲ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>