<p>ಬೆಂಗಳೂರು: ಗ್ರಂಥಪಾಲಕರಿಗೆ ತಾಂತ್ರಿಕ ಕೌಶಲ ಹೆಚ್ಚಿಸುವ ಉದ್ದೇಶದಿಂದ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯವು (ವಿಟಿಯು)ಗ್ರಂಥಾಲಯ ವಿಜ್ಞಾನ ತರಬೇತಿ ಆರಂಭಿಸಲು ಬೆಂಗಳೂರಿನ ಎಲ್ಐಎಸ್ ಅಕಾಡೆಮಿ ಜೊತೆ ಒಪ್ಪಂದ ಮಾಡಿಕೊಂಡಿದೆ.</p>.<p>ನಗರದ ವಿಟಿಯು ಪ್ರಾದೇಶಿಕ ಕಚೇರಿಯಲ್ಲಿ ಇತ್ತೀಚೆಗೆ ನಡೆದ ಕಾರ್ಯಕ್ರಮದಲ್ಲಿ ಒಪ್ಪಂದಕ್ಕೆ ಸಹಿ ಹಾಕಲಾಯಿತು.</p>.<p>‘ಉನ್ನತ ಶಿಕ್ಷಣದಲ್ಲಿ ಗ್ರಂಥಪಾಲಕರ ಪಾತ್ರ ಮಹತ್ವದ್ದು. ಶೈಕ್ಷಣಿಕ ಬೆಳವಣಿಗೆಗೆ ಪೂರಕವಾದ ಮಾಹಿತಿ ವಿಜ್ಞಾನ ವಿಷಯಗಳನ್ನು ತಾಂತ್ರಿಕವಾಗಿ ಬೋಧಿಸಲು ಗ್ರಂಥಪಾಲಕರಿಗೆ ಗ್ರಂಥಾಲಯ ವಿಜ್ಞಾನ ಕೌಶಲಾಭಿವೃದ್ಧಿ ಕೋರ್ಸ್ ಹಾಗೂ ಎಂಜಿನಿಯರಿಂಗ್–ವಿಜ್ಞಾನ ವಿದ್ಯಾರ್ಥಿಗಳಿಗೆ ‘ಮಾಸ್ಟರ್ ಆಫ್ ಸೈನ್ಸ್ ಇನ್ ಲೈಬ್ರರಿ ಟೆಕ್ನಾಲಜಿ ಆ್ಯಂಡ್ ಮ್ಯಾನೇಜ್ಮೆಂಟ್’ (ಎಂಎಸ್ಸಿ-ಎಲ್ಟಿಎಂ) ಸ್ನಾತಕೋತ್ತರ ಪದವಿ ಕೋರ್ಸ್ ಪ್ರಾರಂಭಿಸಲಾಗುತ್ತಿದ್ದು, ಇದಕ್ಕಾಗಿ ಎಲ್ಐಎಸ್ ಅಕಾಡೆಮಿ ಜೊತೆ ಒಪ್ಪಂದ ಮಾಡಿಕೊಳ್ಳಲಾಗಿದೆ’ ಎಂದುವಿಟಿಯು ಕುಲಪತಿ ಪ್ರೊ.ಕರಿಸಿದ್ದಪ್ಪ ತಿಳಿಸಿದರು.</p>.<p>ಎಲ್ಐಎಸ್ ಅಕಾಡೆಮಿ ಅಧ್ಯಕ್ಷ ಪಿ.ವಿ.ಕೊಣ್ಣೂರ, ‘ಗ್ರಂಥಪಾಲಕರಿಗೆ ಕೌಶಲಾಭಿವೃದ್ಧಿ ಕೋರ್ಸ್ಗಳ ಮೂಲಕ ಯಶಸ್ವಿಯಾಗಿಶಿಕ್ಷಣ ನೀಡಲು ವಿಟಿಯು ಸಹಕರಿಸಬೇಕು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಗ್ರಂಥಪಾಲಕರಿಗೆ ತಾಂತ್ರಿಕ ಕೌಶಲ ಹೆಚ್ಚಿಸುವ ಉದ್ದೇಶದಿಂದ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯವು (ವಿಟಿಯು)ಗ್ರಂಥಾಲಯ ವಿಜ್ಞಾನ ತರಬೇತಿ ಆರಂಭಿಸಲು ಬೆಂಗಳೂರಿನ ಎಲ್ಐಎಸ್ ಅಕಾಡೆಮಿ ಜೊತೆ ಒಪ್ಪಂದ ಮಾಡಿಕೊಂಡಿದೆ.</p>.<p>ನಗರದ ವಿಟಿಯು ಪ್ರಾದೇಶಿಕ ಕಚೇರಿಯಲ್ಲಿ ಇತ್ತೀಚೆಗೆ ನಡೆದ ಕಾರ್ಯಕ್ರಮದಲ್ಲಿ ಒಪ್ಪಂದಕ್ಕೆ ಸಹಿ ಹಾಕಲಾಯಿತು.</p>.<p>‘ಉನ್ನತ ಶಿಕ್ಷಣದಲ್ಲಿ ಗ್ರಂಥಪಾಲಕರ ಪಾತ್ರ ಮಹತ್ವದ್ದು. ಶೈಕ್ಷಣಿಕ ಬೆಳವಣಿಗೆಗೆ ಪೂರಕವಾದ ಮಾಹಿತಿ ವಿಜ್ಞಾನ ವಿಷಯಗಳನ್ನು ತಾಂತ್ರಿಕವಾಗಿ ಬೋಧಿಸಲು ಗ್ರಂಥಪಾಲಕರಿಗೆ ಗ್ರಂಥಾಲಯ ವಿಜ್ಞಾನ ಕೌಶಲಾಭಿವೃದ್ಧಿ ಕೋರ್ಸ್ ಹಾಗೂ ಎಂಜಿನಿಯರಿಂಗ್–ವಿಜ್ಞಾನ ವಿದ್ಯಾರ್ಥಿಗಳಿಗೆ ‘ಮಾಸ್ಟರ್ ಆಫ್ ಸೈನ್ಸ್ ಇನ್ ಲೈಬ್ರರಿ ಟೆಕ್ನಾಲಜಿ ಆ್ಯಂಡ್ ಮ್ಯಾನೇಜ್ಮೆಂಟ್’ (ಎಂಎಸ್ಸಿ-ಎಲ್ಟಿಎಂ) ಸ್ನಾತಕೋತ್ತರ ಪದವಿ ಕೋರ್ಸ್ ಪ್ರಾರಂಭಿಸಲಾಗುತ್ತಿದ್ದು, ಇದಕ್ಕಾಗಿ ಎಲ್ಐಎಸ್ ಅಕಾಡೆಮಿ ಜೊತೆ ಒಪ್ಪಂದ ಮಾಡಿಕೊಳ್ಳಲಾಗಿದೆ’ ಎಂದುವಿಟಿಯು ಕುಲಪತಿ ಪ್ರೊ.ಕರಿಸಿದ್ದಪ್ಪ ತಿಳಿಸಿದರು.</p>.<p>ಎಲ್ಐಎಸ್ ಅಕಾಡೆಮಿ ಅಧ್ಯಕ್ಷ ಪಿ.ವಿ.ಕೊಣ್ಣೂರ, ‘ಗ್ರಂಥಪಾಲಕರಿಗೆ ಕೌಶಲಾಭಿವೃದ್ಧಿ ಕೋರ್ಸ್ಗಳ ಮೂಲಕ ಯಶಸ್ವಿಯಾಗಿಶಿಕ್ಷಣ ನೀಡಲು ವಿಟಿಯು ಸಹಕರಿಸಬೇಕು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>