ರಾಯಚೂರು: ತಾಲ್ಲೂಕಿನ ಗಾಣಧಾಳ ಗ್ರಾಮದಲ್ಲಿ ಉದ್ಯೋಗ ಖಾತರಿ ಯೋಜನೆಯಡಿ ಕೆರೆ ಹೂಳು ತೆಗೆಯುತ್ತಿದ್ದ ಕೂಲಿ ಕಾರ್ಮಿಕ ದಾವೀದಪ್ಪ (52) ಬಿಸಿಲಿನ ತಾಪಕ್ಕೆ ಅಸ್ವಸ್ಥಗೊಂಡು ಗುರುವಾರ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಗರಿಷ್ಠ ತಾಪಮಾನ 38 ಡಿಗ್ರಿ ಸೆಲ್ಸಿಯಸ್ ಇತ್ತು.
ಫೆ. 27 ರಂದು ತಾಲ್ಲೂಕಿನ ಎಲೆಬಿಚ್ಚಾಲಿ ಗ್ರಾಮದಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ಬುಡ್ಡೆಪ್ಪ ಕುಸಿದುಬಿದ್ದು ಮೃತಪಟ್ಟಿದ್ದರು.