<p><strong>ಮೈಸೂರು:</strong> ‘ಕಾಂಗ್ರೆಸ್ನಲ್ಲಿ ಯಾವುದೇ ಬಣ ಇಲ್ಲ. ಸಿದ್ದರಾಮಯ್ಯ ಮುಖ್ಯಮಂತ್ರಿ ಯಾಗಿ ಆಯ್ಕೆಯಾದಾಗ, ಮೊದಲ ಹಂತದಲ್ಲಿ ಅವರು ಹಾಗೂ 2ನೇ ಹಂತದಲ್ಲಿ ಡಿ.ಕೆ.ಶಿವಕುಮಾರ್ ಅವರಿಗೆ ಅವಕಾಶ ಮಾಡಿಕೊಡಲಾಗುವುದು ಎಂದು ವರಿಷ್ಠರು ಹೇಳಿದ್ದರು’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷರೂ ಆಗಿರುವ ಶಾಸಕ ತನ್ವೀರ್ ಸೇಠ್ ತಿಳಿಸಿದರು.</p><p>ಇಲ್ಲಿ ಗುರುವಾರ ಮಾಧ್ಯಮ ಪ್ರತಿನಿಧಿ ಗಳೊಂದಿಗೆ ಮಾತನಾಡಿ, ‘ಸಿದ್ದರಾಮಯ್ಯ ಅವರ ಮೇಲೆ ಯಾವುದೋ ಆರೋಪ ಬಂದಿದ್ದರಿಂದ ಶೀಘ್ರದಲ್ಲೇ ರಾಜೀನಾಮೆ ಕೊಡುತ್ತಾರೆ ಎಂದೆಲ್ಲಾ ಮಾಧ್ಯಮದಲ್ಲಿ ವಿಶ್ಲೇಷಣೆ–ಚರ್ಚೆ ನಡೆದವು. ಯಾರಿಗೆ ಹೇಗೆ ಬೇಕೋ ಹಾಗೆ ವಿಶ್ಲೇಷಿಸುತ್ತಿದ್ದಾರೆ’ ಎಂದರು.</p><p>‘ನಾನೂ ಸಚಿವ ಸ್ಥಾನದ ಆಕಾಂಕ್ಷಿ. ಸಚಿವರ ಕಾರ್ಯವೈಖರಿಯನ್ನು ಗುರುತಿಸಿ, 7ರಿಂದ 9 ಮಂದಿಯನ್ನು ಕೈಬಿಡಬೇಕೆಂಬ ಕೂಗು ಲೋಕಸಭೆ ಚುನಾವಣೆ ನಂತರ ಕೇಳಿಬಂದಿದೆ. ಬಿ.ನಾಗೇಂದ್ರ ರಾಜೀನಾಮೆಯಿಂದ ತೆರವಾದ ಸ್ಥಾನ ಬಿಟ್ಟರೆ ಬೇರಾವುದೂ ಖಾಲಿ ಇಲ್ಲ. ಸಚಿವ ಸಂಪುಟಕ್ಕೆ ಸರ್ಜರಿ ಆಗುತ್ತದೆ; ಹೊಸಬರಿಗೆ ಅವಕಾಶ ಆಗುತ್ತದೆ ಎಂದೆಲ್ಲಾ ವರದಿ ಆಗುತ್ತಿದೆ. ನಾನೂ ವರಿಷ್ಠರೊಂದಿಗೂ ಮಾತನಾಡಿದ್ದು, ಅವಕಾಶ ಸಿಗುವವರೆಗೂ ಕಾಯುತ್ತೇನೆ ಎಂದು ತಿಳಿಸಿದ್ದೇನೆ. ಕೆಲಸ ಮಾಡುವ ಅವಕಾಶ ಸಿಕ್ಕರೆ ನಿರ್ವಹಿಸಲು ತಯಾರಾಗಿದ್ದೇನೆ’ ಎಂದು ಪ್ರತಿಕ್ರಿಯಿಸಿದರು.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ‘ಕಾಂಗ್ರೆಸ್ನಲ್ಲಿ ಯಾವುದೇ ಬಣ ಇಲ್ಲ. ಸಿದ್ದರಾಮಯ್ಯ ಮುಖ್ಯಮಂತ್ರಿ ಯಾಗಿ ಆಯ್ಕೆಯಾದಾಗ, ಮೊದಲ ಹಂತದಲ್ಲಿ ಅವರು ಹಾಗೂ 2ನೇ ಹಂತದಲ್ಲಿ ಡಿ.ಕೆ.ಶಿವಕುಮಾರ್ ಅವರಿಗೆ ಅವಕಾಶ ಮಾಡಿಕೊಡಲಾಗುವುದು ಎಂದು ವರಿಷ್ಠರು ಹೇಳಿದ್ದರು’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷರೂ ಆಗಿರುವ ಶಾಸಕ ತನ್ವೀರ್ ಸೇಠ್ ತಿಳಿಸಿದರು.</p><p>ಇಲ್ಲಿ ಗುರುವಾರ ಮಾಧ್ಯಮ ಪ್ರತಿನಿಧಿ ಗಳೊಂದಿಗೆ ಮಾತನಾಡಿ, ‘ಸಿದ್ದರಾಮಯ್ಯ ಅವರ ಮೇಲೆ ಯಾವುದೋ ಆರೋಪ ಬಂದಿದ್ದರಿಂದ ಶೀಘ್ರದಲ್ಲೇ ರಾಜೀನಾಮೆ ಕೊಡುತ್ತಾರೆ ಎಂದೆಲ್ಲಾ ಮಾಧ್ಯಮದಲ್ಲಿ ವಿಶ್ಲೇಷಣೆ–ಚರ್ಚೆ ನಡೆದವು. ಯಾರಿಗೆ ಹೇಗೆ ಬೇಕೋ ಹಾಗೆ ವಿಶ್ಲೇಷಿಸುತ್ತಿದ್ದಾರೆ’ ಎಂದರು.</p><p>‘ನಾನೂ ಸಚಿವ ಸ್ಥಾನದ ಆಕಾಂಕ್ಷಿ. ಸಚಿವರ ಕಾರ್ಯವೈಖರಿಯನ್ನು ಗುರುತಿಸಿ, 7ರಿಂದ 9 ಮಂದಿಯನ್ನು ಕೈಬಿಡಬೇಕೆಂಬ ಕೂಗು ಲೋಕಸಭೆ ಚುನಾವಣೆ ನಂತರ ಕೇಳಿಬಂದಿದೆ. ಬಿ.ನಾಗೇಂದ್ರ ರಾಜೀನಾಮೆಯಿಂದ ತೆರವಾದ ಸ್ಥಾನ ಬಿಟ್ಟರೆ ಬೇರಾವುದೂ ಖಾಲಿ ಇಲ್ಲ. ಸಚಿವ ಸಂಪುಟಕ್ಕೆ ಸರ್ಜರಿ ಆಗುತ್ತದೆ; ಹೊಸಬರಿಗೆ ಅವಕಾಶ ಆಗುತ್ತದೆ ಎಂದೆಲ್ಲಾ ವರದಿ ಆಗುತ್ತಿದೆ. ನಾನೂ ವರಿಷ್ಠರೊಂದಿಗೂ ಮಾತನಾಡಿದ್ದು, ಅವಕಾಶ ಸಿಗುವವರೆಗೂ ಕಾಯುತ್ತೇನೆ ಎಂದು ತಿಳಿಸಿದ್ದೇನೆ. ಕೆಲಸ ಮಾಡುವ ಅವಕಾಶ ಸಿಕ್ಕರೆ ನಿರ್ವಹಿಸಲು ತಯಾರಾಗಿದ್ದೇನೆ’ ಎಂದು ಪ್ರತಿಕ್ರಿಯಿಸಿದರು.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>